AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನವೀನ್‌ ದೇಹ ಸೋಮವಾರ ಆಗಮನ: ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಶರೀರ ದಾನ -ನವೀನ್ ತಂದೆ ಶೇಖರಗೌಡ

ರಷ್ಯಾ- ಉಕ್ರೇನ್​ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್‌ ಮೃತದೇಹ ಸೋಮವಾರ (March 21) ಮುಂಜಾನೆ 3.30ಕ್ಕೆ ಆಗಮಿಸಲಿದೆ. ಮಗನ ಪಾರ್ಥಿವ ಶರೀರ ಬರುವ ವಿಚಾರ ಕೇಳಿದ ನಂತರ ಸ್ವಲ್ಪ ನಿರಾಶೆ ದೂರವಾಗಿದೆ. ದಾವಣಗೆರೆಯ ಎಸ್ಎಸ್ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ನೀಡಲು ನಿರ್ಧರಿಸಲಾಗಿದೆ - ನವೀನ್ ತಂದೆ ಶೇಖರಗೌಡ

ನವೀನ್‌ ದೇಹ ಸೋಮವಾರ ಆಗಮನ: ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಶರೀರ ದಾನ -ನವೀನ್ ತಂದೆ ಶೇಖರಗೌಡ
ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್‌
TV9 Web
| Edited By: |

Updated on:Mar 18, 2022 | 8:27 PM

Share

ಬೆಂಗಳೂರು: ರಷ್ಯಾ-ಉಕ್ರೇನ್​ ಯುದ್ಧದ ವೇಳೆ ಉಕ್ರೇನ್‌ನಲ್ಲಿ ಮೃತಪಟ್ಟ ಕನ್ನಡಿಗ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹ ಸೋಮವಾರ ಮುಂಜಾನೆ 3.30ಕ್ಕೆ ಆಗಮಿಸಲಿದೆ. ಹೆಚ್‌ಎಎಲ್‌ ವಿಮಾನ ನಿಲ್ದಾಣಕ್ಕೆ ನವೀನ್‌ ಮೃತದೇಹ ಆಗಮಿಸಲಿದೆ ಎಂದು ವಿಧಾನಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಉಕ್ರೇನ್ ನಲ್ಲಿ ಸಾವನ್ನಪ್ಪಿದ ನವೀನ್ ಪಾರ್ಥಿವ ಶರೀರ ತವರಿಗೆ ತರಲಾಗುತ್ತದೆ. ಸೋಮವಾರ (March 21) ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಏರ್ ಪೋರ್ಟ್ ಗೆ ಬರಲಿದೆ. ಅಲ್ಲಿಂದ ಪಾರ್ಥಿವ ಶರೀರವನ್ನ ಅಂದೇ ಹಾವೇರಿಗೆ ರವಾನಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದರು.

ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಮಗನ ಪಾರ್ಥಿವ ಶರೀರ ದಾನ: ನವೀನ್ ತಂದೆ ಶೇಖರಗೌಡ ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ ಖಾರ್ಕೀವ್ ನಲ್ಲಿ ನಾಲ್ಕನೆ ವರ್ಷದ ಎಂಬಿಬಿಎಸ್ ಓದುತ್ತಿದ್ದ. ಮಗನ ಪಾರ್ಥಿವ ಶರೀರ ಬರುವುದು ತಡವಾದಾಗ ನಿರಾಶೆ ಆಗಿತ್ತು. ಮಗನ ಪಾರ್ಥಿವ ಶರೀರ ಬರುವ ವಿಚಾರ ಕೇಳಿದ ನಂತರ ನಿರಾಶೆ ದೂರವಾಗಿದೆ. ದಾವಣಗೆರೆಯ ಎಸ್ಎಸ್ ಮೆಡಿಕಲ್ ಕಾಲೇಜಿಗೆ ಮಗನ ಮೃತದೇಹ ನೀಡಲು ನಿರ್ಧರಿಸಲಾಗಿದೆ. ಸೋಮವಾರ ಬೆಳಗ್ಗೆ (March 21) ಚಳಗೇರಿ ಗ್ರಾಮದ ಮನೆಗೆ ಮೃತದೇಹ ಬರುವ ಮಾಹಿತಿ ದೊರೆತಿದೆ.

21 ದಿನಗಳಿಗೆ ಮಗನ ಪಾರ್ಥಿವ ಶರೀರ ಬರಲಿದೆ. ಮಗನ ಪಾರ್ಥಿವ ಶರೀರ ಮನೆಗೆ ಬರುವಂತೆ ಪ್ರಯತ್ನಿಸಿದ ಎಲ್ಲರಿಗೂ ಧನ್ಯವಾದಗಳು. ಮಗನ ಪಾರ್ಥಿವ ಶರೀರ ಮನೆಗೆ ಬಂದ ನಂತರ, ಮನೆಯಲ್ಲಿ ಪೂಜೆ ಸಲ್ಲಿಸಿ, ಮೆಡಿಕಲ್ ಕಾಲೇಜಿಗೆ ಮಗನ ಪಾರ್ಥಿವ ಶರೀರ ಡೊನೇಟ್ ಮಾಡಲಾಗುವುದು. ಮೆಡಿಕಲ್ ವಿದ್ಯಾರ್ಥಿಗಳ ಅಧ್ಯಯನಕ್ಕೆ ಅನುಕೂಲ ಆಗಲೆಂದು ಮಗನ ಮೃತದೇಹ ಡೊನೇಟ್ ಮಾಡಲು ನಿರ್ಧರಿಸಲಾಗಿದೆ ಎಂದು ನವೀನ್ ತಂದೆ ಶೇಖರಗೌಡ ಟಿವಿ9ಗೆ ದೂರವಾಣಿ ಮೂಲಕ ತಿಳಿಸಿದ್ದಾರೆ.

ಅತ್ತ ರಷ್ಯಾ ಮತ್ತು ಉಕ್ರೇನ್ ಯುದ್ಧಭೂಮಿಯಿಂದ ಶಿವರಾತ್ರಿಯ ದಿನ ಕರ್ನಾಟಕಕ್ಕೆ ಬರಸಿಡಿಲಿನಂತೆ ಕೆಟ್ಟ ಸುದ್ದಿಯೊಂದು ಅಪ್ಪಳಿಸಿತ್ತು. ಯುದ್ಧದಿಂದ ತತ್ತರಿಸಿರುವ ಖಾರ್ಕೀವ್ ನಗರದಲ್ಲಿ ವಾಸವಿದ್ದ ಹಾವೇರಿ ಜಿಲ್ಲೆ ಚಳಗೇರಿಯ ವೈದ್ಯಕೀಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತಪಟ್ಟಿದ್ದ.(Death of Haveri medical student Naveen janagoudar). ಉಕ್ರೇನ್​ನ ಖಾರ್ಕಿವ್‌ನಲ್ಲಿ ಕರ್ನಾಟಕದ ಓರ್ವ ಪ್ರತಿಭಾವಂತ ವಿದ್ಯಾರ್ಥಿಯ ಹತ್ಯೆಯಾಗಿತ್ತು.

ಇದನ್ನೂ ಓದಿ: ನವೀನ್ ಶೇ 97 ಅಂಕ ಗಳಿಸಿದ್ದ, ಆದರೂ ಸರ್ಕಾರಿ ಮೆಡಿಕಲ್ ಸೀಟ್ ಸಿಗಲಿಲ್ಲ! ಅವನ ಸಾವಿಗೆ ಯಾರು ಹೊಣೆ? -ಸೋದರ ಮಾವ ಕಿಡಿ

Published On - 6:23 pm, Fri, 18 March 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?