AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

ತುಮಕೂರು ರಸ್ತೆ ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ತುಮಕೂರು ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್
ಎಸ್. ಸುರೇಶ್ ಕುಮಾರ್
TV9 Web
| Edited By: |

Updated on: Feb 15, 2022 | 2:15 PM

Share

ಬೆಂಗಳೂರು: 102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ ಹಿನ್ನೆಲೆಯಲ್ಲಿ ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಫ್ಲೈಓವರ್ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸದ್ಯ ತುಮಕೂರು ರಸ್ತೆ ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಸುರೇಶ್ ಕುಮಾರ್ ಬರೆದ ಪತ್ರದಲ್ಲೇನಿದೆ? ತುಮಕೂರು ರೋಡ್ ಸಂಪರ್ಕ ಕಲ್ಪಿಸುವ ಡಾ. ಶಿವಕುಮಾರ್ ಸ್ವಾಮೀಜಿ ಫ್ಲೈ ಓವರ್ ತಿಂಗಳುಗಳೇ ಕಳೆದ್ರೂ ಬೆಂಗಳೂರು- ತುಮಕೂರು ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲ. ಇದರಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಮಸ್ಯೆ ಅರಿಯಲು ನಾನು 8ನೇ ಮೈಲಿ ಮೆಟ್ರೋ ನಿಲ್ದಾಣದ ಸಮೀಪವಿರುವ 102 ನೇ ಪಿಲ್ಲರ್ ಗೆ ಭೇಟಿ ನೀಡಿದ್ದೆ. ಸುಮಾರು 50 ರಿಂದ 80 ಅಡಿ ಎತ್ತರದಲ್ಲಿರುವ ಪಿಲ್ಲರ್ ಮೇಲಿರುವ ಇಂಟರ್ ಲಿಂಕಿಂಗ್ ಕೇಬಲ್ ಬಾಕ್ಸ್ ಒಳಗಿನ ಸಂಬಂಧಿಸಿದ ಇಂಜಿನಿಯರ್ರವರೊಂದಿಗೆ ಹೋಗಿ ಅಂದು ಈ ಕಾಮಗಾರಿ ಜವಾಬ್ಧಾರಿ ಹೊತ್ತಿರುವ ಮತ್ತು ಕಾಮಗಾರಿಯನ್ನು ನಿರ್ಬಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಭಾಗದ ಜನರಲ್ ಮ್ಯಾನೇಜರ್ ಜೊತೆ ಮಾತುಕತೆ ನಡೆಸಿದ್ದೇನೆ. ಅಂದು ಅವರು ಸೂಚಿಸಿದಂತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಐಐಎಸ್ಸಿ ತಜ್ಞರ ಅಭಿಪ್ರಾಯ ಸಿಕ್ಕಕೂಡಲೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ರೆ, ಕಾಮಗಾರಿ ಪೂರ್ಣಗೊಂಡು ಒಂದು ತಿಂಗಳಾದ್ರೂ ಸಂಚಾರಕ್ಕೆ ಅನುವು ಸಿಕ್ಕಿಲ್ಲ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಕಂಗಾಲಾಗಿದ್ದಾರೆ. ಹಾಗಾಗಿ ಸಾರ್ವಜನಿಕರ ಹಿತಾಸಕ್ತಿಯಿಂದ ಮೇಲ್ಸೇತುವೆ ಆದಷ್ಟು ಶೀಘ್ರದಲ್ಲಿ ಸಂಚಾರಕ್ಕೆ ಅನುಮತಿ ಕೋರಿ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

tumkur road flyover

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

ಇದನ್ನೂ ಓದಿ: ಡೆಲಿವರಿ ನೀಡಲು ಬಂದು ಆಭರಣ ಕದ್ದ ಮಹಿಳೆ; ಮರಳುವ ಮುನ್ನ ಹೇಳಿದ್ದೇನು ಗೊತ್ತಾ? ಇಲ್ಲಿದೆ ಸಿಸಿಟಿವಿ ವಿಡಿಯೋ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ