AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರು ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

ತುಮಕೂರು ರಸ್ತೆ ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ತುಮಕೂರು ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್
ಎಸ್. ಸುರೇಶ್ ಕುಮಾರ್
TV9 Web
| Edited By: ಆಯೇಷಾ ಬಾನು|

Updated on: Feb 15, 2022 | 2:15 PM

Share

ಬೆಂಗಳೂರು: 102, 103ನೇ ಪಿಲ್ಲರ್ ನಡುವಿನ ರೋಪ್ ಸಡಿಲ ಹಿನ್ನೆಲೆಯಲ್ಲಿ ತುಮಕೂರು ರಸ್ತೆ ಫ್ಲೈಓವರ್ ದುರಸ್ತಿ ಕಾರ್ಯ ನಡೆಯುತ್ತಿದೆ. ಹೀಗಾಗಿ ಫ್ಲೈಓವರ್ ಮೇಲೆ ವಾಹನ ಸಂಚಾರ ಸ್ಥಗಿತಗೊಳಿಸಲಾಗಿದೆ. ಸದ್ಯ ತುಮಕೂರು ರಸ್ತೆ ಫ್ಲೈ ಓವರ್ ಸಂಚಾರಕ್ಕೆ ಅನುವು ಮಾಡಲು ಮನವಿ ಮಾಡಿ ಸಿಎಂ ಬಸವರಾಜ ಬೊಮ್ಮಾಯಿಗೆ ಮಾಜಿ ಸಚಿವ ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.

ಸುರೇಶ್ ಕುಮಾರ್ ಬರೆದ ಪತ್ರದಲ್ಲೇನಿದೆ? ತುಮಕೂರು ರೋಡ್ ಸಂಪರ್ಕ ಕಲ್ಪಿಸುವ ಡಾ. ಶಿವಕುಮಾರ್ ಸ್ವಾಮೀಜಿ ಫ್ಲೈ ಓವರ್ ತಿಂಗಳುಗಳೇ ಕಳೆದ್ರೂ ಬೆಂಗಳೂರು- ತುಮಕೂರು ಮೇಲ್ಸೇತುವೆ ಕಾಮಗಾರಿ ಮುಗಿದಿಲ್ಲ. ಇದರಿಂದ ತಮ್ಮ ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವ ವಾಹನ ಸವಾರರು ಟ್ರಾಫಿಕ್ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಸಮಸ್ಯೆ ಅರಿಯಲು ನಾನು 8ನೇ ಮೈಲಿ ಮೆಟ್ರೋ ನಿಲ್ದಾಣದ ಸಮೀಪವಿರುವ 102 ನೇ ಪಿಲ್ಲರ್ ಗೆ ಭೇಟಿ ನೀಡಿದ್ದೆ. ಸುಮಾರು 50 ರಿಂದ 80 ಅಡಿ ಎತ್ತರದಲ್ಲಿರುವ ಪಿಲ್ಲರ್ ಮೇಲಿರುವ ಇಂಟರ್ ಲಿಂಕಿಂಗ್ ಕೇಬಲ್ ಬಾಕ್ಸ್ ಒಳಗಿನ ಸಂಬಂಧಿಸಿದ ಇಂಜಿನಿಯರ್ರವರೊಂದಿಗೆ ಹೋಗಿ ಅಂದು ಈ ಕಾಮಗಾರಿ ಜವಾಬ್ಧಾರಿ ಹೊತ್ತಿರುವ ಮತ್ತು ಕಾಮಗಾರಿಯನ್ನು ನಿರ್ಬಹಿಸುತ್ತಿರುವ ರಾಷ್ಟ್ರೀಯ ಹೆದ್ದಾರಿ ವಿಭಾಗದ ಜನರಲ್ ಮ್ಯಾನೇಜರ್ ಜೊತೆ ಮಾತುಕತೆ ನಡೆಸಿದ್ದೇನೆ. ಅಂದು ಅವರು ಸೂಚಿಸಿದಂತೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು ಐಐಎಸ್ಸಿ ತಜ್ಞರ ಅಭಿಪ್ರಾಯ ಸಿಕ್ಕಕೂಡಲೇ ಮೇಲ್ಸೇತುವೆ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ತಿಳಿಸಿದ್ದಾರೆ. ಆದ್ರೆ, ಕಾಮಗಾರಿ ಪೂರ್ಣಗೊಂಡು ಒಂದು ತಿಂಗಳಾದ್ರೂ ಸಂಚಾರಕ್ಕೆ ಅನುವು ಸಿಕ್ಕಿಲ್ಲ. ಹೆದ್ದಾರಿ ಪ್ರಾಧಿಕಾರದ ನಿರ್ಲಕ್ಷ್ಯಕ್ಕೆ ವಾಹನ ಸವಾರರು ಕಂಗಾಲಾಗಿದ್ದಾರೆ. ಹಾಗಾಗಿ ಸಾರ್ವಜನಿಕರ ಹಿತಾಸಕ್ತಿಯಿಂದ ಮೇಲ್ಸೇತುವೆ ಆದಷ್ಟು ಶೀಘ್ರದಲ್ಲಿ ಸಂಚಾರಕ್ಕೆ ಅನುಮತಿ ಕೋರಿ ಎಂದು ಮಾಜಿ ಸಚಿವ ಸುರೇಶ್ ಕುಮಾರ್ ಮನವಿ ಮಾಡಿದ್ದಾರೆ.

tumkur road flyover

ಸಿಎಂ ಬೊಮ್ಮಾಯಿಗೆ ಪತ್ರ ಬರೆದ ಮಾಜಿ ಸಚಿವ ಸುರೇಶ್ ಕುಮಾರ್

ಇದನ್ನೂ ಓದಿ: ಡೆಲಿವರಿ ನೀಡಲು ಬಂದು ಆಭರಣ ಕದ್ದ ಮಹಿಳೆ; ಮರಳುವ ಮುನ್ನ ಹೇಳಿದ್ದೇನು ಗೊತ್ತಾ? ಇಲ್ಲಿದೆ ಸಿಸಿಟಿವಿ ವಿಡಿಯೋ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ