AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ ‘ಸಖಿ ಆಟೋ’

ಬೆಂಗಳೂರಿನ ಮಹಿಳೆಯರ ಸುರಕ್ಷತೆ ಮತ್ತು ಸಬಲೀಕರಣಕ್ಕಾಗಿ 'ಸಖಿ ಆಟೋ' ಸೇವೆ ಫೆಬ್ರವರಿ 14, 2026 ರಂದು ಆರಂಭವಾಗುತ್ತಿದೆ. ಮಹಿಳಾ ಚಾಲಕಿಯರೇ ನಡೆಸುವ ಈ ವಿಶೇಷ ಸಾರಿಗೆ ವ್ಯವಸ್ಥೆಯಲ್ಲಿ ಸರ್ಜ್ ದರವಿಲ್ಲ. ಮೊದಲ 2 ಕಿ.ಮೀ.ಗೆ 50 ರೂ. ಶುಲ್ಕವಿದ್ದು, ಭವಿಷ್ಯದಲ್ಲಿ ಟ್ರಾನ್ಸ್ ಮಹಿಳೆಯರೂ ಚಾಲಕಿಯರಾಗಿ ಸೇರಿಕೊಳ್ಳಲಿದ್ದಾರೆ. ಇದು ಮಹಿಳಾ ಪ್ರಯಾಣಿಕರಿಗೆ ಆರಾಮದಾಯಕ ಮತ್ತು ಸುರಕ್ಷಿತ ಆಯ್ಕೆಯಾಗಿದೆ.

ವ್ಯಾಲೆಂಟೈನ್ಸ್‌ ಡೇಗೆ ಬೆಂಗಳೂರಿನ ಮಹಿಳೆಯರಿಗೆ ಗುಡ್​​​ ನ್ಯೂಸ್: ನಿಮ್ಮ ಸುರಕ್ಷತೆಗೆ ಬರಲಿದೆ 'ಸಖಿ ಆಟೋ'
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on: Feb 09, 2026 | 5:00 PM

Share

ಬೆಂಗಳೂರು, ಫೆ. 9: ಪ್ರೇಮಿಗಳ ದಿನದಂದು ಮಹಿಳೆಯರಿಗೆ ಒಂದು ಗುಡ್​​​​ ನ್ಯೂಸ್​​ ಇದೆ. ಬೆಂಗಳೂರಿನಲ್ಲಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಮತ್ತು ಮಹಿಳಾ ಸಬಲೀಕರಣಕ್ಕಾಗಿ ಅತ್ಯಂತ ವಿನೂತನವಾದ ‘ಸಖಿ ಆಟೋ’ (Sakhi Auto) ಸೇವೆ ಶೀಘ್ರದಲ್ಲೇ ಆರಂಭವಾಗುತ್ತಿದೆ. ಈ ಸೇವೆಯು ಇದೇ ಫೆಬ್ರವರಿ 14, 2026 ರಂದು (ಪ್ರೇಮಿಗಳ ದಿನದಂದು) ಬೆಂಗಳೂರಿನಲ್ಲಿ ಅಧಿಕೃತವಾಗಿ ಕಾರ್ಯಾರಂಭ ಮಾಡಲಿದೆ.ಇದು ಮಹಿಳಾ ಪ್ರಯಾಣಿಕರಿಗಾಗಿ, ಮಹಿಳಾ ಚಾಲಕಿಯರೇ ನಡೆಸುವ ವಿಶೇಷ ಸಾರಿಗೆ ವ್ಯವಸ್ಥೆಯಾಗಿದೆ. ಆರಂಭದಲ್ಲಿ ಇದು ಬೆಳಿಗ್ಗೆ 6:00 ರಿಂದ ಮಧ್ಯರಾತ್ರಿ 12:00 ರವರೆಗೆ ಲಭ್ಯವಿರಲಿದ್ದು, ಮುಂದಿನ ದಿನಗಳಲ್ಲಿ ಬೇಡಿಕೆಗನುಗುಣವಾಗಿ 24 ಗಂಟೆಗಳ ಕಾಲ ವಿಸ್ತರಿಸುವ ಯೋಜನೆಯಿದೆ ಎಂದು ಹೇಳಲಾಗಿದೆ.

ಇತರ ಆಪ್‌ಗಳಂತೆ ಮಳೆ ಅಥವಾ ಹೆಚ್ಚಿನ ದಟ್ಟಣೆಯ ಸಮಯದಲ್ಲಿ ದರ ಏರಿಕೆಯಾಗುವುದಿಲ್ಲ. ಭವಿಷ್ಯದಲ್ಲಿ ಟ್ರಾನ್ಸ್ ಮಹಿಳೆಯರನ್ನು (Trans women) ಕೂಡ ಚಾಲಕಿಯರನ್ನಾಗಿ ನೇಮಿಸಿಕೊಳ್ಳುವ ಗುರಿಯನ್ನು ಈ ಸಂಸ್ಥೆ ಹೊಂದಿದೆ. ಮೊದಲ 2 ಕಿಲೋಮೀಟರ್‌ಗಳಿಗೆ 50 ರೂ. ಇರುತ್ತದೆ. ನಂತರದ ಪ್ರತಿ ಕಿಲೋಮೀಟರ್‌ಗೆ 20 ರೂ ಇರುತ್ತದೆ. ಇದೀಗ ಸಂಸ್ಥೆ ಮೊಬೈಲ್ ಅಪ್ಲಿಕೇಶನ್ ಅಭಿವೃದ್ಧಿ ಮಾಡುತ್ತಿದೆ. ಅಲ್ಲಿಯವರೆಗೆ ride.sakhiwomen.in ಹಾಗೂ 63619 33364 ವಾಟ್ಸಾಪ್ ಸಂಖ್ಯೆಗೆ ಸಂದೇಶ ಕಳುಹಿಸುವ ಮೂಲಕ ಬುಕ್ ಮಾಡಬಹುದು.

ಇದನ್ನೂ ಓದಿ: ಬೆಂಗಳೂರು-ಮಂಗಳೂರು ರೈಲು ಪ್ರಯಾಣಿಕರಿಗೆ ಗುಡ್​​​ ನ್ಯೂಸ್​​ ನೀಡಿದ ಸಚಿವ ಅಶ್ವಿನಿ ವೈಷ್ಣವ್

ಈ ವಿನೂತನ ಆಲೋಚನೆಯ ಹಿಂದೆ 24 ವರ್ಷದ ಉದ್ಯಮಿ ಕೃಷ್ಣವಿ ಪರೇಖ್ ಅವರ ಶ್ರಮವಿದೆ. ಮುಂಬೈನಲ್ಲಿ ತಾವು ಅನುಭವಿಸಿದ ಅಸುರಕ್ಷಿತ ಪ್ರಯಾಣದ ಅನುಭವಗಳೇ ಈ ಸಂಸ್ಥೆಯನ್ನು ಆರಂಭಿಸಲು ಅವರಿಗೆ ಪ್ರೇರಣೆಯಾಗಿದೆ. ಈಗಾಗಲೇ 21 ರಿಂದ 40 ವರ್ಷದ ಸುಮಾರು 50 ನುರಿತ ಮಹಿಳಾ ಚಾಲಕಿಯರು ಈ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಬೆಂಗಳೂರಿನ ಮಹಿಳೆಯರಿಗೆ ಇದು ಹೆಚ್ಚು ಸುರಕ್ಷಿತ ಮತ್ತು ಆರಾಮದಾಯಕ ಪ್ರಯಾಣದ ಆಯ್ಕೆಯಾಗಲಿದೆ.

ಬೆಂಗಳೂರು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಕೆರೆ ಏರಿಯ ಮೇಲೆ ಮದುವೆ ದಿಬ್ಬಣದ ಬಸ್​​ ಪಲ್ಟಿ: ತಪ್ಪಿದ ಭಾರಿ ಅನಾಹುತ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಬಿಜೆಪಿಯನ್ನು ಗೆಲ್ಲಿಸಿದ ಬಂಗಾಳದ ಜನತೆಗೆ ಪ್ರಧಾನಿ ಮೋದಿ ಶಿರ ಬಾಗಿ ನಮಸ್ಕಾರ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಇಂದು ಪ್ರಮಾಣವಚನ ಸ್ವೀಕರಿಸಿದ ಬಂಗಾಳದ ಬಿಜೆಪಿ ಸಚಿವರ ಪಟ್ಟಿ ಇಲ್ಲಿದೆ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಬಿಜೆಪಿಯ ಹಿರಿಯ ಕಾರ್ಯಕರ್ತ ಮಖನಲಾಲ್ ಕಾಲಿಗೆರಗಿ ನಮಸ್ಕರಿಸಿದ ಪ್ರಧಾನಿ ಮೋದಿ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಉಪೇಂದ್ರ ಚುನಾವಣೆಗೆ ಏಕೆ ನಿಲ್ಲಲ್ಲ? ಉತ್ತರಿಸಿದ ನಟ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
ಕೊಲ್ಕತ್ತಾಕ್ಕೆ ಆಗಮಿಸಿದ ಪ್ರಧಾನಿ ಮೋದಿಗೆ ಅದ್ದೂರಿ ಸ್ವಾಗತ
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
Live: ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ; ಅಧಿಕಾರ ಸ್ವೀಕಾರ ಲೈವ್
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ತುಂಗಭದ್ರ ನದಿಯಲ್ಲಿ ಕಾಣಿಸಿಕೊಳ್ತು ಬೃಹದಾಕಾರದ ಮೊಸಳೆ!
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕನ್ನಡದ ಯಾವ ಹೀರೋಗೆ ವಿಜಯ್ ತರಹ ಗೆಲ್ಲುವ ತಾಕತ್ತಿದೆ? ಉಪ್ಪಿ ಹೇಳಿದ್ದಿಷ್ಟು
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!
ಕೆರೆಯಂತಾದ ರಾಜ್ಯ ಹೆದ್ದಾರಿ; ಜೀವ ಕೈಯಲ್ಲಿ ಹಿಡಿದು ಸವಾರರ ಸಂಚಾರ!