AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

108 ಆ್ಯಂಬುಲೆನ್ಸ್‌ ಸಿಬ್ಬಂದಿಗಳ ಸಂಬಳ ವಿಚಾರ: ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿಯಾಗಿದೆ ಎಂದ ಸಚಿವ ಡಾ.ಕೆ.ಸುಧಾಕರ್

108 ಆ್ಯಂಬುಲೆನ್ಸ್‌ ಸಿಬ್ಬಂದಿ ಜೊತೆ ನಾವು ಮಾತನಾಡಿದ್ದೇವೆ. ಸರ್ಕಾರದ ಪರ ಜಿವಿಕೆ ಸಂಸ್ಥೆ ಆ್ಯಂಬುಲೆನ್ಸ್‌ ಸೇವೆ ಒದಗಿಸುತ್ತಿದೆ. ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕೋರ್ಟ್‌ ಆದೇಶದಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ.

108 ಆ್ಯಂಬುಲೆನ್ಸ್‌ ಸಿಬ್ಬಂದಿಗಳ ಸಂಬಳ ವಿಚಾರ: ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿಯಾಗಿದೆ ಎಂದ ಸಚಿವ ಡಾ.ಕೆ.ಸುಧಾಕರ್
ಆರೋಗ್ಯ ಸಚಿವ ಡಾ.ಕೆ.ಸುಧಾಕರ್
TV9 Web
| Edited By: |

Updated on: Oct 06, 2022 | 5:40 PM

Share

ಬೆಂಗಳೂರು: ರಾಜ್ಯ ಸರ್ಕಾರದಿಂದ ಜಿವಿಕೆ ಸಂಸ್ಥೆಗೆ ಹಣ ಪಾವತಿ ಆಗಿದೆ. ಸಿಬ್ಬಂದಿಗೆ ಸಂಸ್ಥೆ ಸಂಬಳ ಪಾವತಿಸಬೇಕು, ಈ ಬಗ್ಗೆ ಚರ್ಚಿಸ್ತೇವೆ ಎಂದು ನಗರದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿಕೆ ನೀಡಿದರು. 108 ಆ್ಯಂಬುಲೆನ್ಸ್‌ (108 ambulance) ಸಿಬ್ಬಂದಿ ಜೊತೆ ನಾವು ಮಾತನಾಡಿದ್ದೇವೆ. ಸರ್ಕಾರದ ಪರ ಜಿವಿಕೆ ಸಂಸ್ಥೆ ಆ್ಯಂಬುಲೆನ್ಸ್‌ ಸೇವೆ ಒದಗಿಸುತ್ತಿದೆ. ಟೆಂಡರ್ ಅವಧಿ ಮುಕ್ತಾಯವಾಗಿದ್ದರೂ ಕೋರ್ಟ್‌ ಆದೇಶದಂತೆ ಕಾರ್ಯನಿರ್ವಹಣೆ ಮಾಡುತ್ತಿದ್ದಾರೆ. 2008ರಿಂದ ಜಿವಿಕೆ ಸಂಸ್ಥೆ 108 ಸೇವೆಯನ್ನು ಒದಗಿಸುತ್ತಿದೆ. ಜಿವಿಕೆ ಸಂಸ್ಥೆಯ ಸೇವೆ ಸಹ ನಿರೀಕ್ಷಿತ ಮಟ್ಟದಲ್ಲಿ ಸಿಗುತ್ತಿಲ್ಲ. ಉತ್ಕೃಷ್ಟ ಸೇವೆ ಒದಗಿಸಲು ಹೊಸ ಟೆಂಡರ್ ಆಹ್ವಾನಿಸಿದ್ದೇವೆ. ಮುಂದಿನ ಎರಡು ತಿಂಗಳಲ್ಲೇ ಟೆಂಡರ್ ಅಂತಿಮ ಮಾಡುತ್ತೇವೆ. ಬೈಕ್‌ ಆ್ಯಂಬುಲೆನ್ಸ್‌ ಸೇವೆ ಅನಗತ್ಯವೆಂದು ಸಮಿತಿ ವರದಿ ನೀಡಿದೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ನಮ್ಮ ಕ್ಲಿನಿಕ್ ಆಸ್ಪತ್ರೆ ಕಾಮಗಾರಿ ಪರಿಶೀಲಿಸಿದ ಡಾ.ಸುಧಾಕರ್

ಬೆಂಗಳೂರಿನ ಮಹಾಲಕ್ಷ್ಮೀಪುರಂನಲ್ಲಿ 157 ಕೋಟಿ ರೂ. ನಮ್ಮ ಕ್ಲಿನಿಕ್ ನಿರ್ಮಾಣವಾಗುತ್ತಿದ್ದು, ಆಸ್ಪತ್ರೆ ನಿರ್ಮಾಣ, ಉಪಕರಣವನ್ನು ಡಾ.ಸುಧಾಕರ್​ ತಪಾಸಣೆ ಮಾಡಿದರು. ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು  ರಾಜ್ಯಾದ್ಯಂತ ಒಟ್ಟು 438 ನಮ್ಮ ಕ್ಲಿನಿಕ್ ಪ್ರಾರಂಭ ಮಾಡುತ್ತೇವೆ. ಬೆಂಗಳೂರಿನಲ್ಲಿ 243 ನಮ್ಮ ಕ್ಲಿನಿಕ್​ ನಿರ್ಮಾಣ ಮಾಡುತ್ತೇವೆ. ಡಿಸೆಂಬರ್ ತಿಂಗಳೊಳಗೆ ನಮ್ಮ ಕ್ಲಿನಿಕ್​ಗಳ ಸೇವೆ ಪ್ರಾರಂಭವಾಗಲಿದೆ. ನಮ್ಮ ಕ್ಲಿನಿಕ್​ಗೆ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಭಾಗಶಃ ಮುಗಿದಿದೆ. ಇನ್ನೂ ಕೆಲ ವೈದ್ಯರ ನೇಮಕಾತಿ ಆಗಲಿದೆ.

ಬೆಂಗಳೂರಿನ ಪ್ರತಿ ವಾರ್ಡ್​​ನಲ್ಲೂ ನಮ್ಮ ಕ್ಲಿನಿಕ್​ ನಿರ್ಮಾಣವಾಗಲಿದೆ. ಬಡವರಿಗೆ ನಮ್ಮ ಕ್ಲಿನಿಕ್​​ನಿಂದ ಅನುಕೂಲವಾಗಲಿದೆ. ಏರ್‌ ಆ್ಯಂಬುಲೆನ್ಸ್‌ ಸೇವೆ ಆರಂಭಿಸುವ ಬಗ್ಗೆ ಚರ್ಚಿಸಿದ್ದೇವೆ. ವರ್ಷಕ್ಕೆ ಇಷ್ಟು ಅಂತ ಏರ್‌ ಆ್ಯಂಬುಲೆನ್ಸ್‌ ಬಳಸಲು ಪ್ಲ್ಯಾನ್‌ ಇದ್ದು, ಸೇವೆ ಸಂಬಂಧ ಖಾಸಗಿಯವರ ಜತೆ ಚರ್ಚೆ ಮಾಡಲಾಗುತ್ತಿದೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್​ ಹೇಳಿದರು.

ನಾಳೆ ಮಹತ್ವದ ಸಭೆ ನಡೆಸಲಿರುವ ಆರೋಗ್ಯ ‌ಇಲಾಖೆ

ನಾಳೆ ಎಂದಿನಂತೆ 108 ಆ್ಯಂಬುಲೆನ್ಸ್ ಸೇವೆ ಸಿಗಲಿದೆ. ನಾಳೆ ಆರೋಗ್ಯ ‌ಇಲಾಖೆ ಮಹತ್ವದ ಸಭೆ ನಡೆಸಲಿದೆ. ಆರೋಗ್ಯ ಇಲಾಖೆ ಆಯುಕ್ತ ರಂದೀಪ್ ನೇತೃತ್ವದಲ್ಲಿ ಸಭೆ ನಡೆಯಲಿದ್ದು, ಯಾವುದೇ ಕಾರಣಕ್ಕೂ ತುರ್ತು ಸೇವೆ ನಿಲ್ಲಿಸದಿರಲು ಮನವಿ ಮಾಡಲಾಗಿದೆ. ಹೀಗಾಗಿ ನಾಳೆ ಆ್ಯಂಬುಲೆನ್ಸ್ ಸೇವೆಯಲ್ಲಿ ವ್ಯತ್ಯಯ ಇರೋದಿಲ್ಲ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳ್ನನು ಓದಲು ಇಲ್ಲಿ ಕ್ಲಿಕ್ ಮಾಡಿ.

ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?
ಮೈಸೂರು ಅರಮನೆ ಬಳಿ ವ್ಯಾಪಾರಿಗಳ ಮೇಲೆ ನಿಗಾ ಇಡಲಾಗುತ್ತಾ?