Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕ್​ಲೈನ್ ವೆಂಕಟೇಶ್ ಸಹೋದರನ ಮನೆ ದರೋಡೆ: ಒಂದಲ್ಲ ಎರಡಲ್ಲ 3 ತಿಂಗಳು ಸ್ಕೆಚ್ ಹಾಕಿ ಕಳ್ಳತನ ಮಾಡಿದ್ದ ಗ್ಯಾಂಗ್ ಅರೆಸ್ಟ್

Rockline Venkatesh Brother House Robbery: ಸ್ಯಾಂಡಲ್‌ವುಡ್‌ ನಿರ್ಮಾಪಕ ರಾಕ್‌ಲೈನ್‌ ವೆಂಕಟೇಶ್‌ ಅವರ ಸಹೋದರನ ಮನೆ ದರೋಡೆ ಮಾಡಿದ್ದ ಗ್ಯಾಂಗ್​ ಅನ್ನು ಪೊಲೀಸರು ಬಂಧಿಸಿದ್ದಾರೆ. ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ತಿಂಗಳಗಳ ಕಾಲ ಸ್ಕೆಚ್​ ಹಾಕಿ ಮನೆ ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್​ ಅನ್ನು ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇನ್ನು ಈ ಗ್ಯಾಂಗ್​ ಕಳ್ಳತನ ಮಾಡಲು ಹೇಗೆ ಪ್ಲ್ಯಾನ್ ಮಾಡಿತ್ತು ಎನ್ನುವ ವಿವರ ಈ ಕೆಳಗಿನಂತಿದೆ.

ರಾಕ್​ಲೈನ್ ವೆಂಕಟೇಶ್ ಸಹೋದರನ ಮನೆ ದರೋಡೆ: ಒಂದಲ್ಲ ಎರಡಲ್ಲ 3 ತಿಂಗಳು ಸ್ಕೆಚ್ ಹಾಕಿ ಕಳ್ಳತನ ಮಾಡಿದ್ದ ಗ್ಯಾಂಗ್ ಅರೆಸ್ಟ್
ರಾಕ್​ಲೈನ್ ವೆಂಕಟೇಶ್
Follow us
Prajwal Kumar NY
| Updated By: ರಮೇಶ್ ಬಿ. ಜವಳಗೇರಾ

Updated on: Nov 28, 2023 | 11:55 AM

ಬೆಂಗಳೂರು, (ನವೆಂಬರ್ 28): ಸ್ಯಾಂಡಲ್‌ವುಡ್‌ ನಿರ್ಮಾಪಕ ಹಾಗೂ ನಟ ರಾಕ್‌ಲೈನ್‌ ವೆಂಕಟೇಶ್‌(rockline venkatesh)  ಅವರ ಸಹೋದರನ ಮನೆ ಕಳ್ಳತನ ಪ್ರಕರಣವನ್ನು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಠಾಣೆ ಪೊಲೀಸರು ಭೇದಿಸಿದ್ದು, ಕಳ್ಳತನ ಮಾಡಿದ್ದ ನೇಪಾಳಿ ಗ್ಯಾಂಗ್ ಅನ್ನು ಬಂಧಿಸಿದ್ದಾರೆ. ರಾಕ್‌ಲೈನ್‌ ವೆಂಕಟೇಶ್‌ ಅವರ ತಮ್ಮ ಭ್ರಮರೇಶ್ ಅವರು ಕುಟುಂಬ ಸಮೇತ ಕಳೆದ ತಿಂಗಳು ಯುರೋಪ್​ಗೆ ಪ್ರವಾಸ ಹೋಗಿದ್ದ ವೇಳೆ ಮನೆ ಕಳ್ಳತನವಾಗಿತ್ತು. ಈ ಸಂಬಂಧ ಇದೀಗ ಪೊಲೀಸರು, 7 ಆರೋಪಿಗಳ‌ ತಂಡವನ್ನು ಅರೆಸ್ಟ್ ಮಾಡಿದ್ದು, ಬಂಧಿತರಿಂದ ಸುಮಾರು ಮೂರು ಕೆ.ಜಿ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ.

ಒಂದಲ್ಲ ಎರಡಲ್ಲ 3 ತಿಂಗಳುಗಳ ಕಾಲ ಸ್ಕೆಚ್

ರಾಕ್‌ಲೈನ್‌ ವೆಂಕಟೇಶ್‌ ಅವರ ತಮ್ಮ ಭ್ರಮರೇಶ್ ಅವರ ಮನೆಗೆ ಕನ್ನ ಹಾಕಲು ಈ ನೇಪಾಳಿ ಗ್ಯಾಂಗ್ ಒಂದಲ್ಲ ಎರಡಲ್ಲ ಬರೋಬ್ಬರಿ ಮೂರು ತಿಂಗಳುಗಳ ಕಾಲ ಸ್ಕೆಚ್​ ಹಾಕಿತ್ತು ಎಂದು ತಿಳಿದುಬಂದಿದೆ. ಭ್ರಮರೇಶ್ ಅವರ ನಿವಾಸದ ಪಕ್ಕದ ನಿರ್ಮಾಣ ಹಂತದ ಕಟ್ಟಡದಿಂದಲ್ಲಿ ಕುಳಿತುಕೊಂಡು ಮನೆ ದರೋಡೆಗೆ ಪ್ಲ್ಯಾನ್ ಮಾಡಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: ರಾಕ್​ಲೈನ್​ ವೆಂಕಟೇಶ್​ ಸೋದರನ ಮನೆಯಲ್ಲಿ 5 ಕೆಜಿ ಚಿನ್ನ ಕಳ್ಳತನ; ದೂರು ದಾಖಲು

ಮೂರು ತಿಂಗಳನಿಂದ ಕಾದ ಈ ನೇಪಾಳಿ ಗ್ಯಾಂಗ್, ಭ್ರಮರೇಶ್ ಅವರು ಕುಟುಂಬ ಅಕ್ಟೋಬರ್​ನಲ್ಲಿ ಯೂರೋಪ್​ ಪ್ರವಾಸಕ್ಕೆ ಹೋಗುತ್ತಿದ್ದಂತೆಯೇ ಇತ್ತ ಮನೆಗೆ ಕನ್ನ ಹಾಕಿದ್ದು, ಸುಮಾರು 5 ಕೆಜಿ‌ ಚಿನ್ನಾಭರಣ ದೋಚಿ ಪರಾರಿಯಾಗಿತ್ತು. ಇನ್ನು ಪ್ರವಾಸ ಮುಗಿಸಿಕೊಂಡು ಅಕ್ಟೋಬರ್ 30ರಂದು ವಾಪಸ್ ಮನೆಗೆ ಬಂದ ಬಳಿಕ ಕಳ್ಳತನವಾಗಿರುವುದು ಬೆಳಕಿಗೆ ಬಂದಿತ್ತು. ಕೂಡಲೇ ಭ್ರಮರೇಶ್ ಅವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ಪೊಲೀಸ್ (Mahalakshmi Layout Police)​ ಠಾಣೆಗೆ ದೂರು ನೀಡಿದ್ದರು. ಈ ದೂರಿನ ಮೇರೆಗೆ ಪೊಲೀಸರು ನಿರಂತರ ಕಾರ್ಯಚರಣೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily Devotional: ಬ್ರಹ್ಮ ಮುಹೂರ್ತದ ಮಹತ್ವ ತಿಳಿಯಿರಿ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
Daily horoscope: ವೃಷಭ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿದೆ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?