AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಇದ್ದ ಏಕೈಕ ಮಗನನ್ನ ಕಳೆದುಕೊಂಡ ಕುಟುಂಬದ ಕಣ್ಣೀರ ಕಥೆ

Organ Donation: ಬೆಂಗಳೂರಿನ ಕುಟುಂಬವೊಂದು ತಮ್ಮ ಏಕೈಕ ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದಿರುವಂತಹ ಘಟನೆ ನಡೆದಿದೆ. ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರನ ಅಂಗಾಂಗವನ್ನು ದಾನ ಮಾಡುವ ಮೂಲಕ ಏಳರಿಂದ ಎಂಟು ಜೀವಗಳಿಗೆ ಹೊಸ ಬದುಕು ನೀಡಿದ ಈ ಮಹತ್ವದ ಕಾರ್ಯ ಸಮಾಜಕ್ಕೆ ಮಾದರಿಯಾಗಿದೆ.

ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ: ಇದ್ದ ಏಕೈಕ ಮಗನನ್ನ ಕಳೆದುಕೊಂಡ ಕುಟುಂಬದ ಕಣ್ಣೀರ ಕಥೆ
ಅಂಗಾಂಗ ದಾನ ಮಾಡಿದ ಪೋಷಕರುImage Credit source: tv9 kannada
ರಾಮು, ಆನೇಕಲ್​
| Edited By: |

Updated on: Jul 18, 2026 | 4:56 PM

Share

ಮುಖ್ಯಾಂಶಗಳು

  • ಏಕೈಕ ಪುತ್ರನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬ ಸದಸ್ಯರು
  • ಮೆದುಳು ನಿಷ್ಕ್ರಿಯಗೊಂಡಿದ್ದ ಪುತ್ರ ಸಂಜನ್ ಅಂಗಾಂಗ ದಾನ
  • ಜುಲೈ 8ರಂದು ರಾಯಕೋಟೆ ಬಳಿ ಲಾರಿ, ಕಾರಿನ ನಡುವೆ ಡಿಕ್ಕಿ

ಆನೇಕಲ್, ಜುಲೈ 18: ಮಗನನ್ನು ಕಳೆದುಕೊಂಡ ನೋವು ಒಂದೆಡೆ, ಮಗನ ಅಂಗಾಂಗ ದಾನದ (Organ Donation) ಮೂಲಕ ಹಲವು ಜೀವಗಳಿಗೆ ಹೊಸ ಬದುಕು ನೀಡಿದ ಹೆಮ್ಮೆ ಮತ್ತೊಂದೆಡೆ. ರ‍್ಯಾಂಕ್​ ವಿದ್ಯಾರ್ಥಿಯಾಗಿದ್ದ 19 ವರ್ಷದ  ಸಂಜನ್​,​ ಅಪಘಾತದಲ್ಲಿ ಮೆದುಳು ನಿಷ್ಕ್ರಿಯಗೊಂಡ ಬಳಿಕ, ಕುಟುಂಬ ತೆಗೆದುಕೊಂಡ ಮಾನವೀಯ ನಿರ್ಧಾರ ಇದೀಗ ಹಲವರಿಗೆ ಜೀವ ದಾನವಾಗಿದೆ. ಆನೇಕಲ್‌ನ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆ ಈ  ಮನಕಲಕುವ ಘಟನೆಗೆ ಸಾಕ್ಷಿಯಾಗಿದೆ.

ಬೆಂಗಳೂರಿನ ರಾಜಾಜಿನಗರದ ನಿವಾಸಿ 19 ವರ್ಷದ ಸಂಜನ್, ರ‍್ಯಾಂಕ್​ ವಿದ್ಯಾರ್ಥಿಯಾಗಿದ್ದ. ದೊಡ್ಡ ಉದ್ಯಮಿಯಾಗುವ ಕನಸು ಹೊತ್ತಿದ್ದ. ತಂದೆ ನಡೆಸುತ್ತಿದ್ದ ಆಟೋಮೊಬೈಲ್ ಸ್ಪೇರ್ ತಯಾರಿಕಾ ಸಂಸ್ಥೆಯನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಕನಸು ಕಂಡಿದ್ದ. ಆದರೆ ವಿಧಿಯಾಟ ಬೇರೆ ಇತ್ತು.

ನಡೆದಿದ್ದೇನು?

ಜುಲೈ 8ರಂದು ಕುಟುಂಬದೊಂದಿಗೆ ತಿರುಚ್ಚಂದೂರು ಮುರುಗನ್ ದೇವಸ್ಥಾನಕ್ಕೆ ತೆರಳಿ ವಾಪಸ್ಸಾಗುತ್ತಿದ್ದ ವೇಳೆ ರಾಯಕೋಟೆ ಸಮೀಪ ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಸಂಜನ್ ಹಾಗೂ ಅವರ ಅಜ್ಜಿ ಸುಬ್ಬಲಕ್ಷ್ಮಿ ಗಂಭೀರವಾಗಿ ಗಾಯಗೊಂಡಿದ್ದರು. ಸಂಜನ್ ತಲೆಗೆ ತೀವ್ರ ಪೆಟ್ಟು ಬಿದ್ದಿತ್ತು. ತಮಿಳುನಾಡು ಪೊಲೀಸರು ತಕ್ಷಣ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸದೇ ಸುಮಾರು ಅರ್ಧ ಗಂಟೆ ವಿಳಂಬ ಮಾಡಿದ್ದರು. ಬಳಿಕ ಮೀರಾ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಅಲ್ಲಿಂದ ಹೊಸೂರಿನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಶಸ್ತ್ರಚಿಕಿತ್ಸೆ ನಡೆದರೂ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬರಲಿಲ್ಲ. ನಂತರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿ ಆಸ್ಪತ್ರೆಗೆ ಸ್ಥಳಾಂತರಿಸಲಾಯಿತು. ಆದರೆ ವೈದ್ಯರ ಎಲ್ಲಾ ಪ್ರಯತ್ನಗಳ ನಡುವೆಯೂ ಸಂಜನ್​​ ಮೆದುಳು ಸಂಪೂರ್ಣ ನಿಷ್ಕ್ರಿಯಗೊಂಡಿತ್ತು. ಬದುಕುಳಿಯುವ ಸಾಧ್ಯತೆ ಇಲ್ಲ ಎಂದು ವೈದ್ಯರು ಕುಟುಂಬಕ್ಕೆ ತಿಳಿಸಿದರು.

ಮಗನ ಅಂಗಾಂಗ ದಾನ ಮಾಡಿದ ಹೆತ್ತವರು

ಏಕೈಕ ಮಗನನ್ನು ಕಳೆದುಕೊಳ್ಳುವ ನೋವಿನಲ್ಲಿದ್ದ ತಂದೆ ಲೋಕೇಶ್ ಹಾಗೂ ತಾಯಿ ಶ್ವೇತಾ, ದುಃಖದ ನಡುವೆಯೂ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ. ಮಗನ ಅಂಗಾಂಗ ದಾನಕ್ಕೆ ನಿರ್ಧರಿಸಿದರು. ಸಂಜನ್  ಕಣ್ಣು, ಹೃದಯ, ಶ್ವಾಸಕೋಶ, ಲಿವರ್ ಹಾಗೂ ಕಿಡ್ನಿಗಳನ್ನು ದಾನ ಮಾಡಲಾಗಿದೆ. ಈ ಅಂಗಾಂಗ ದಾನದ ಮೂಲಕ ಏಳರಿಂದ ಎಂಟು ಜನರಿಗೆ ಹೊಸ ಬದುಕಿನ ಆಶಾಕಿರಣ ಮೂಡಿದೆ. ಭವಿಷ್ಯದ ಬಗ್ಗೆ ದೊಡ್ಡ ಕನಸುಗಳನ್ನು ಹೊತ್ತಿದ್ದ ಸಂಜನ್ ಇಂದು ಇಲ್ಲದಿದ್ದರೂ, ಅವರ ಅಂಗಾಂಗಗಳು ಹಲವು ಜೀವಗಳಲ್ಲಿ ಹೊಸ ಉಸಿರಾಗಿದೆ. ಮಗನ ಸಾವಿನಲ್ಲೂ ಸಾರ್ಥಕತೆ ಮೆರೆದ ಕುಟುಂಬದ ನಿರ್ಧಾರ ಸಮಾಜಕ್ಕೆ ಮಾದರಿಯಾಗಿದೆ.

ಇದನ್ನೂ ಓದಿ: ತುಂಗಾ ತುಂಬಿ ಹರಿಯುತ್ತಿದ್ದರೂ ಶಿವಮೊಗ್ಗದಲ್ಲಿ ನೀರಿಗೆ ಹಾಹಾಕಾರ: ನೀರಿಗಾಗಿ ಜೀವದ ಹಂಗು ತೊರೆದ ಜನರು

ಒಂದೆಡೆ ಮಗನನ್ನು ಕಳೆದುಕೊಂಡ ದುಃಖ. ಮತ್ತೊಂದೆಡೆ ಮಗನ ಅಂಗಾಂಗ ದಾನದ ಮೂಲಕ ಹಲವರಿಗೆ ಹೊಸ ಬದುಕು ನೀಡಿದ ತೃಪ್ತಿ. ಸಂಜನ್ ಅವರ ಕುಟುಂಬದ ಈ ಮಾನವೀಯ ನಿರ್ಧಾರ ಅಂಗಾಂಗ ದಾನದ ಮಹತ್ವವನ್ನು ಮತ್ತೊಮ್ಮೆ ಸಮಾಜಕ್ಕೆ ಸಾರಿದೆ. ಕಣ್ಣೀರಿನ ನಡುವೆಯೂ ಬದುಕಿನ ಬೆಳಕು ಹಂಚಿದ ಸಂಜನ್ ಕುಟುಂಬದ ಈ ನಿರ್ಧಾರ ನಿಜಕ್ಕೂ ಎಲ್ಲರಿಗೂ ಮಾದರಿ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
ಬರದ ನಡುವೆ ಮರುಬಿತ್ತನೆ ಮಾಡಿದ ವೃದ್ಧ ದಂಪತಿ!
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
SIR ಗೆ ಶಿಕ್ಷಕರ ನಿಯೋಜನೆ: ತರಗತಿಗಳು ಸ್ಥಗಿತ, ವಿದ್ಯಾರ್ಥಿಗಳ ಪ್ರತಿಭಟನೆ
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಮೈಸೂರು ದಸರಾದಲ್ಲಿ ಕಂಬಳಕ್ಕೆ ವಿರೋಧಿಸ್ತಿರೋ ಪ್ರತಿಭಟನಾಕಾರರು ಹೇಳಿದ್ದೇನು?
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ