AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಕಳ್ಳಾಟ? ಡಿಸ್ಚಾರ್ಜ್ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟ ಸಿಬ್ಬಂದಿ

ಬೆಂಗಳೂರಿನ ಜಯನಗರದಲ್ಲಿರೋ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಂದ ಡಿಸ್ಚಾರ್ಜ್ ವೇಳೆ ಹಣ ಪಡೆಯಲಾಗ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ಇನ್ನು ಯಶಸ್ವಿನಿ ಕಾರ್ಡ್, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಅಥವಾ ರಿಯಾಯಿತಿ ನೀಡಬೇಕು ಅನ್ನೋ ನಿಯಮವಿದೆ. ಆದರೆ ಡಿಸ್ಚಾರ್ಜ್ ಬಿಲ್​ನಲ್ಲಿ ಯಾವುದಕ್ಕೆ ಹಣ ಪಡೆದಿದ್ದಾರೆ ಅನ್ನೋದನ್ನ ನಮೂದಿಸದೇ ಇರೋದು ಹಲವು ಅನುಮಾನ ಮೂಡಿಸಿದೆ.

ಪ್ರತಿಷ್ಠಿತ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಕಳ್ಳಾಟ? ಡಿಸ್ಚಾರ್ಜ್ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟ ಸಿಬ್ಬಂದಿ
ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ
TV9 Web
| Edited By: ಆಯೇಷಾ ಬಾನು|

Updated on: Jan 13, 2024 | 7:13 AM

Share

ಬೆಂಗಳೂರು, ಜ.13: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ (Sanjay Gandhi Institute of Trauma and Orthopaedics) ವಿರುದ್ಧ ಯಶಸ್ವಿನಿ ಕಾರ್ಡ್ (Yashaswini Card), ಬಿಪಿಎಲ್ ಕಾರ್ಡ್ (BPL Card) ಫಲಾನುಭವಿಗಳಿಂದ ಹಣ ಕಟ್ಟಿಸಿಕೊಂಡ ಆರೋಪ ಕೇಳಿಬಂದಿದೆ. ರೋಗಿಗಳು ಡಿಸ್ಚಾರ್ಜ್ ಆಗೋ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟಿರೋ ಆರೋಪ ಕೇಳಿಬಂದಿದೆ. ಒಳ್ಳೆಯ ಚಿಕಿತ್ಸೆ ಸಿಗುತ್ತೆ ಅಂತಾ ಆಸ್ಪತ್ರೆಗೆ ಬಂದ ರೋಗಿಗಳು, ಇದೀಗ ಬಿಲ್ ಕೊಟ್ಟಿದ್ದನ್ನ ಕಂಡು ಕಂಗಾಲಾಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿರೋ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಂದ ಡಿಸ್ಚಾರ್ಜ್ ವೇಳೆ ಹಣ ಪಡೆಯಲಾಗ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ತುಮಕೂರು ಮೂಲದ ಯುವಕನೊಬ್ಬ ಡಿಸೆಂಬರ್ 30ನೇ ತಾರೀಕು ಕಾಲಿನ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ರು, ಚಿಕಿತ್ಸೆ ಮುಗಿಸಿ ಡಿಸ್ಚಾರ್ಜ್ ಆಗೋ ವೇಳೆ ಆಸ್ಪತ್ರೆ ಸಿಬ್ಬಂದಿ 3 ಸಾವಿರ ರೂಪಾಯಿ ಪಡೆದು ಬಿಲ್ ಕೈಗಿಟ್ಟಿದ್ದಾರೆ. ಬಿಲ್ ನಲ್ಲಿ ಸೇವೆಯ ವಿವರ ಇಲ್ಲದ್ದನ್ನ ಕಂಡ ರೋಗಿ ಸಂಬಂಧಿಕರು, ಹಣ ಯಾಕೆ ಪಡಿತಿದ್ದಾರೆ ಅಂತಾ ತಮ್ಮ ಜಿಲ್ಲೆಯ ಯಶಸ್ವಿನಿ ಸಂಯೋಜಕರನ್ನ ಕೇಳಿದಾಗ, ದೂರು ನೀಡಿವಂತೆ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಯುವನಿಧಿ: ಮಾರ್ಗ ಮಧ್ಯೆ ಕೆಟ್ಟುನಿಂತ ಕೆಎಸ್​ಆರ್​ಟಿಸಿ ಬಸ್​ ತಳ್ಳಿದ ವಿದ್ಯಾರ್ಥಿಗಳು

ಇನ್ನು ಯಶಸ್ವಿನಿ ಕಾರ್ಡ್, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಅಥವಾ ರಿಯಾಯಿತಿ ನೀಡಬೇಕು ಅನ್ನೋ ನಿಯಮವಿದೆ. ಆದರೆ ಡಿಸ್ಚಾರ್ಜ್ ಬಿಲ್​ನಲ್ಲಿ ಯಾವುದಕ್ಕೆ ಹಣ ಪಡೆದಿದ್ದಾರೆ ಅನ್ನೋದನ್ನ ನಮೂದಿಸದೇ ಇರೋದು ಹಲವು ಅನುಮಾನ ಮೂಡಿಸಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ನಿರ್ದೇಶಕರನ್ನ ಕೇಳಿದ್ರೆ, ಆ ರೀತಿ ಸುಮ್ಮ ಸುಮ್ಮನೆ ಹಣ ತೆಗೆದುಕೊಳ್ಳಲ್ಲ, ಒಂದು ವೇಳೆ ಏನಾದ್ರೂ ಸಮಸ್ಯೆಯಾಗಿದ್ರೆ ಹಣ ಹಿಂದಿರುಗಿಸ್ತೀವೆ ಅಂತಿದ್ದಾರೆ. ಆದರೆ ಆಸ್ಪತ್ರೆಗೆ ಬಂದು ಡಿಸ್ಚಾರ್ಜ್ ಆದ ಕೆಲ ರೋಗಿಗಳು, ಹಣ ಹಿಂತಿರುಗಿಸಿ ಅಂತಾ ಈ ಹಿಂದೆ ಇದ್ದ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದರಿಂದ ಹಣ ಎಷ್ಟರಮಟ್ಟಿಗೆ ರೋಗಿಗಳಿಗೆ ವಾಪಸ್ ಆಗ್ತಿದೆ ಅನ್ನೋ ಪ್ರಶ್ನೆ ಮೂಡಿಸಿದೆ.

ಸದ್ಯ ಆಸ್ಪತ್ರೆಯ ಡಿಸ್ಚಾರ್ಜ್ ಬಿಲ್ ಪಡೆದ ರೋಗಿ ಹಾಗೂ ಆತನ ಸಂಬಂಧಿಕರು, ಯಶಸ್ವಿನಿ ಕಾರ್ಡ್ ಸೇವೆಯಲ್ಲಿ ಏನೋ ಗೋಲ್ ಮಾಲ್ ಆಗ್ತಿದೆ ಅಂತಾ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ಯಶಸ್ವಿನಿ ಸೇವೆ ನಿರ್ವಹಣಾಧಿಕಾರಿಗಳಿಗೂ ದೂರು ಕೊಡಲು ಕೂಡ ನಿರ್ಧರಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!