AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಕಳ್ಳಾಟ? ಡಿಸ್ಚಾರ್ಜ್ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟ ಸಿಬ್ಬಂದಿ

ಬೆಂಗಳೂರಿನ ಜಯನಗರದಲ್ಲಿರೋ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಂದ ಡಿಸ್ಚಾರ್ಜ್ ವೇಳೆ ಹಣ ಪಡೆಯಲಾಗ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ಇನ್ನು ಯಶಸ್ವಿನಿ ಕಾರ್ಡ್, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಅಥವಾ ರಿಯಾಯಿತಿ ನೀಡಬೇಕು ಅನ್ನೋ ನಿಯಮವಿದೆ. ಆದರೆ ಡಿಸ್ಚಾರ್ಜ್ ಬಿಲ್​ನಲ್ಲಿ ಯಾವುದಕ್ಕೆ ಹಣ ಪಡೆದಿದ್ದಾರೆ ಅನ್ನೋದನ್ನ ನಮೂದಿಸದೇ ಇರೋದು ಹಲವು ಅನುಮಾನ ಮೂಡಿಸಿದೆ.

ಪ್ರತಿಷ್ಠಿತ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಕಳ್ಳಾಟ? ಡಿಸ್ಚಾರ್ಜ್ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟ ಸಿಬ್ಬಂದಿ
ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ
TV9 Web
| Edited By: |

Updated on: Jan 13, 2024 | 7:13 AM

Share

ಬೆಂಗಳೂರು, ಜ.13: ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಗಳಲ್ಲಿ ಒಂದಾದ ಸಂಜಯ್ ಗಾಂಧಿ ಟ್ರಾಮಾ ಮತ್ತು ಅಸ್ಥಿ ಚಿಕಿತ್ಸಾ ಸಂಸ್ಥೆ (Sanjay Gandhi Institute of Trauma and Orthopaedics) ವಿರುದ್ಧ ಯಶಸ್ವಿನಿ ಕಾರ್ಡ್ (Yashaswini Card), ಬಿಪಿಎಲ್ ಕಾರ್ಡ್ (BPL Card) ಫಲಾನುಭವಿಗಳಿಂದ ಹಣ ಕಟ್ಟಿಸಿಕೊಂಡ ಆರೋಪ ಕೇಳಿಬಂದಿದೆ. ರೋಗಿಗಳು ಡಿಸ್ಚಾರ್ಜ್ ಆಗೋ ವೇಳೆ ಅಡ್ವಾನ್ಸ್ ಅಂತಾ ಹಣ ಪಡೆದು ಬಿಲ್ ಕೊಟ್ಟಿರೋ ಆರೋಪ ಕೇಳಿಬಂದಿದೆ. ಒಳ್ಳೆಯ ಚಿಕಿತ್ಸೆ ಸಿಗುತ್ತೆ ಅಂತಾ ಆಸ್ಪತ್ರೆಗೆ ಬಂದ ರೋಗಿಗಳು, ಇದೀಗ ಬಿಲ್ ಕೊಟ್ಟಿದ್ದನ್ನ ಕಂಡು ಕಂಗಾಲಾಗಿದ್ದಾರೆ.

ಬೆಂಗಳೂರಿನ ಜಯನಗರದಲ್ಲಿರೋ ಸಂಜಯ್ ಗಾಂಧಿ ಆಸ್ಪತ್ರೆಯಲ್ಲಿ ಯಶಸ್ವಿನಿ ಕಾರ್ಡ್ ಫಲಾನುಭವಿಗಳಿಂದ ಡಿಸ್ಚಾರ್ಜ್ ವೇಳೆ ಹಣ ಪಡೆಯಲಾಗ್ತಿದೆ ಅನ್ನೋ ಆರೋಪ ಕೇಳಿಬಂದಿದೆ. ತುಮಕೂರು ಮೂಲದ ಯುವಕನೊಬ್ಬ ಡಿಸೆಂಬರ್ 30ನೇ ತಾರೀಕು ಕಾಲಿನ ಶಸ್ತ್ರಚಿಕಿತ್ಸೆಗೆ ದಾಖಲಾಗಿದ್ರು, ಚಿಕಿತ್ಸೆ ಮುಗಿಸಿ ಡಿಸ್ಚಾರ್ಜ್ ಆಗೋ ವೇಳೆ ಆಸ್ಪತ್ರೆ ಸಿಬ್ಬಂದಿ 3 ಸಾವಿರ ರೂಪಾಯಿ ಪಡೆದು ಬಿಲ್ ಕೈಗಿಟ್ಟಿದ್ದಾರೆ. ಬಿಲ್ ನಲ್ಲಿ ಸೇವೆಯ ವಿವರ ಇಲ್ಲದ್ದನ್ನ ಕಂಡ ರೋಗಿ ಸಂಬಂಧಿಕರು, ಹಣ ಯಾಕೆ ಪಡಿತಿದ್ದಾರೆ ಅಂತಾ ತಮ್ಮ ಜಿಲ್ಲೆಯ ಯಶಸ್ವಿನಿ ಸಂಯೋಜಕರನ್ನ ಕೇಳಿದಾಗ, ದೂರು ನೀಡಿವಂತೆ ಸೂಚನೆ ಕೊಟ್ಟಿದ್ದಾರೆ.

ಇದನ್ನೂ ಓದಿ: ಯುವನಿಧಿ: ಮಾರ್ಗ ಮಧ್ಯೆ ಕೆಟ್ಟುನಿಂತ ಕೆಎಸ್​ಆರ್​ಟಿಸಿ ಬಸ್​ ತಳ್ಳಿದ ವಿದ್ಯಾರ್ಥಿಗಳು

ಇನ್ನು ಯಶಸ್ವಿನಿ ಕಾರ್ಡ್, ಬಿಪಿಎಲ್ ಕಾರ್ಡ್ ದಾರರಿಗೆ ಉಚಿತ ಚಿಕಿತ್ಸೆ ಅಥವಾ ರಿಯಾಯಿತಿ ನೀಡಬೇಕು ಅನ್ನೋ ನಿಯಮವಿದೆ. ಆದರೆ ಡಿಸ್ಚಾರ್ಜ್ ಬಿಲ್​ನಲ್ಲಿ ಯಾವುದಕ್ಕೆ ಹಣ ಪಡೆದಿದ್ದಾರೆ ಅನ್ನೋದನ್ನ ನಮೂದಿಸದೇ ಇರೋದು ಹಲವು ಅನುಮಾನ ಮೂಡಿಸಿದೆ. ಇನ್ನು ಈ ಬಗ್ಗೆ ಆಸ್ಪತ್ರೆಯ ನಿರ್ದೇಶಕರನ್ನ ಕೇಳಿದ್ರೆ, ಆ ರೀತಿ ಸುಮ್ಮ ಸುಮ್ಮನೆ ಹಣ ತೆಗೆದುಕೊಳ್ಳಲ್ಲ, ಒಂದು ವೇಳೆ ಏನಾದ್ರೂ ಸಮಸ್ಯೆಯಾಗಿದ್ರೆ ಹಣ ಹಿಂದಿರುಗಿಸ್ತೀವೆ ಅಂತಿದ್ದಾರೆ. ಆದರೆ ಆಸ್ಪತ್ರೆಗೆ ಬಂದು ಡಿಸ್ಚಾರ್ಜ್ ಆದ ಕೆಲ ರೋಗಿಗಳು, ಹಣ ಹಿಂತಿರುಗಿಸಿ ಅಂತಾ ಈ ಹಿಂದೆ ಇದ್ದ ನಿರ್ದೇಶಕರಿಗೆ ಪತ್ರ ಬರೆದಿದ್ದು, ಇದರಿಂದ ಹಣ ಎಷ್ಟರಮಟ್ಟಿಗೆ ರೋಗಿಗಳಿಗೆ ವಾಪಸ್ ಆಗ್ತಿದೆ ಅನ್ನೋ ಪ್ರಶ್ನೆ ಮೂಡಿಸಿದೆ.

ಸದ್ಯ ಆಸ್ಪತ್ರೆಯ ಡಿಸ್ಚಾರ್ಜ್ ಬಿಲ್ ಪಡೆದ ರೋಗಿ ಹಾಗೂ ಆತನ ಸಂಬಂಧಿಕರು, ಯಶಸ್ವಿನಿ ಕಾರ್ಡ್ ಸೇವೆಯಲ್ಲಿ ಏನೋ ಗೋಲ್ ಮಾಲ್ ಆಗ್ತಿದೆ ಅಂತಾ ಅನುಮಾನ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಬಗ್ಗೆ ಯಶಸ್ವಿನಿ ಸೇವೆ ನಿರ್ವಹಣಾಧಿಕಾರಿಗಳಿಗೂ ದೂರು ಕೊಡಲು ಕೂಡ ನಿರ್ಧರಿಸಿದ್ದಾರೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು