AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ವಿರುದ್ಧ ಸುಳ್ಳು ದೂರು: ಸ್ಯಾಂಟ್ರೋ ರವಿ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಲು ಸಿಸಿಬಿ ಸಿದ್ದತೆ

ಆರೋಪಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.

ಪತ್ನಿ ವಿರುದ್ಧ ಸುಳ್ಳು ದೂರು: ಸ್ಯಾಂಟ್ರೋ ರವಿ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಲು ಸಿಸಿಬಿ ಸಿದ್ದತೆ
ಸಿಸಿಬಿ
ವಿವೇಕ ಬಿರಾದಾರ
|

Updated on: Jun 12, 2023 | 12:51 PM

Share

ಬೆಂಗಳೂರು: ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ (Atrocity), ದೌರ್ಜನ್ಯ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಸ್ಯಾಂಟ್ರೋ ರವಿ (Santro Ravi) ಪತ್ನಿ ವಿರುದ್ಧ ಸುಳ್ಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ತನಿಖೆ ವೇಳೆ ಸುಳ್ಳು ಕೇಸ್​ನಲ್ಲಿ ಕಾಟನ್​ಪೇಟೆ ಇನ್ಸ್​​ಪೆಕ್ಟರ್ ಪ್ರವೀಣ್ ಶಾಮೀಲಾಗಿರವ ಬಗ್ಗೆ ಸಾಕ್ಷ್ಯ ಸಂಗ್ರಹಿಸಲಾಗಿದೆ. ಸ್ಯಾಂಟ್ರೋ ರವಿ ಷಂಡ್ಯತ್ರದಲ್ಲಿ ದೂರುದಾರ ನೆಲಮಂಗಲದ ಪ್ರಕಾಶ್, ಬಿಟಿಎಮ್​ ಲೇಔಟ್​​ನ ಶೇಖ್ ಕೈ ಜೋಡಿಸಿದ್ದರು. ಪತ್ನಿ ಮತ್ತು ನಾದಿನಿ ಇಬ್ಬರೂ ಸೇರಿ ಸಾಲ ಕೊಡುವ ನೆಪದಲ್ಲಿ ಚಾಕುವಿನಿಂದ ಇರಿದು ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ ಎಂದು ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ್ದರು.

ಈ ಹಿನ್ನೆಲೆ ಸ್ಯಾಂಟ್ರೋ ರವಿ ಪತ್ನಿ ಮತ್ತು ನಾದಿನಿ ಕಾಟನ್​ಪೇಟೆ ಪೋಲಿಸರು ಬಂಧಿಸಿದ್ದರು. ಆದರೆ ಪ್ರಕರಣ ಗಂಭೀರವಾಗಿದ್ದ ಹಿನ್ನಲೆ ಸಿಸಿಬಿಗೆ ಪ್ರಕರಣ ವರ್ಗಾವಣೆ ಆಗಿತ್ತು. ಸುಳ್ಳು ಪ್ರಕರಣದಲ್ಲಿ ಪ್ಲಾನ್​ನಂತೆ ಇನ್ಸ್​​ಪೆಕ್ಟರ್ ಪ್ರವೀಣ್ ಶಾಮೀಲಾಗಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಇನ್ಸ್​ಪೆಕ್ಟರ್​​​ ಅನ್ನು ಅಮಾನತು ಮಾಡಲಾಗಿತ್ತು.

ಇದನ್ನೂ ಓದಿ: Santro Ravi: ಪತಿಯಿಂದ ಸುಳ್ಳು ಕೇಸ್ ದಾಖಲು ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ಸ್ಯಾಂಟ್ರೋ ರವಿ ಪತ್ನಿ

ಏನಿದು ಪ್ರಕರಣ

ಸ್ಯಾಂಟ್ರೋ ರವಿ ಪತ್ನಿ ಆರ್ಥಿಕ ಸಮಸ್ಯೆ ಹೇಳಿಕೊಂಡು ತನ್ನ ಬಳಿಯಿಂದ 5 ಲಕ್ಷ ರೂ ಸಾಲ ಪಡೆದು ಮೂರು ತಿಂಗಳಲ್ಲಿ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಸಂಬಂಧ ಒಂದು ಚೆಕ್, ಪಾಸ್​​ಬುಕ್ ಜೆರಾಕ್ಸ್ ಸಹ ನೀಡಿದ್ದರು. ಆದರೆ ಹಣ ವಾಪಸ್ ನೀಡುವುದಾಗಿ ಕರೆಸಿಕೊಂಡು ಹಣ ಕೊಡದೇ ಹಲ್ಲೆ ನಡೆಸಿ ತನ್ನ ಬಳಿ ಇದ್ದ ಚಿನ್ನ ಕದ್ದು ಪರಾರಿಯಾಗಿದ್ದಾರೆ ಎಂದು ಸ್ಯಾಂಟ್ರೋ ರವಿ ತನ್ನ ಪತ್ನಿ ವಿರುದ್ಧವೇ ಶಿವಪ್ರಕಾಶ್​ ಎಂಬುವವರ ಕಡೆಯಿಂದ ದೂರು ದಾಖಲಾಗುವಂತೆ ಮಾಡಿದ್ದನು.

ಅಲ್ಲದೇ ಸ್ಯಾಂಟ್ರೋ ರವಿ ಪತ್ನಿ ಬಳಿಯಿದ್ದ ಲ್ಯಾಪ್​ಟಾಪ್​ ಅನ್ನು ಪಡೆದುಕೊಳ್ಳಲು ತನ್ನ ಪತ್ನಿಯ ವಿರುದ್ಧವೇ ಸಂಚು ರೂಪಿಸಿದ್ದ. ಇದಕ್ಕಾಗಿ ಆತ ಕಾಟನ್​ಪೇಟೆ ಠಾಣಾ ಇನ್ಸ್​ಪೆಕ್ಟರ್​ ಪ್ರವೀಣ್​ ಅವರನ್ನು ಬಳಕೆ ಮಾಡಿಕೊಂಡಿದ್ದನು. ವರ್ಗಾವಣೆ ತಡೆ ಆಮಿಷವೊಡ್ಡಿ ಇನ್ಸ್​​ಪೆಕ್ಟರ್ ಮೂಲಕ ನಕಲಿ ವಂಚನೆ ಪ್ರಕರಣ ದಾಖಲಿಸಿದ್ದನು. ಅದರಂತೆ ಇನ್ಸ್​ಪೆಕ್ಟರ್ ಮೂವರು ಅಮಾಯಕರನ್ನು ಬಂಧಿಸಿದ್ದರು. ಇವರು ಜೈಲುವಾಸ ಅನುಭವಿಸಿ ಹೊರಬಂದ ನಂತರ ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ, ವಂಚನೆ , ಜಾತಿನಿಂದನೆ ಸಂಬಂಧ ದೂರುಗಳನ್ನು ದಾಖಲಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ