Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿ ವಿರುದ್ಧ ಸುಳ್ಳು ದೂರು: ಸ್ಯಾಂಟ್ರೋ ರವಿ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಲು ಸಿಸಿಬಿ ಸಿದ್ದತೆ

ಆರೋಪಿ ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ.

ಪತ್ನಿ ವಿರುದ್ಧ ಸುಳ್ಳು ದೂರು: ಸ್ಯಾಂಟ್ರೋ ರವಿ ವಿರುದ್ಧ ಬಿ ರಿಪೋರ್ಟ್​ ಸಲ್ಲಿಸಲು ಸಿಸಿಬಿ ಸಿದ್ದತೆ
ಸಿಸಿಬಿ
Follow us
ವಿವೇಕ ಬಿರಾದಾರ
|

Updated on: Jun 12, 2023 | 12:51 PM

ಬೆಂಗಳೂರು: ಅತ್ಯಾಚಾರ, ವೇಶ್ಯಾವಾಟಿಕೆ, ವಂಚನೆ, ಜಾತಿ ನಿಂದನೆ (Atrocity), ದೌರ್ಜನ್ಯ ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪಿ ಸ್ಯಾಂಟ್ರೋ ರವಿ (Santro Ravi) ಪತ್ನಿ ವಿರುದ್ಧ ಸುಳ್ಳು ದೂರು ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ (CCB) ಅಧಿಕಾರಿಗಳು ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ತನಿಖೆ ವೇಳೆ ಸುಳ್ಳು ಕೇಸ್​ನಲ್ಲಿ ಕಾಟನ್​ಪೇಟೆ ಇನ್ಸ್​​ಪೆಕ್ಟರ್ ಪ್ರವೀಣ್ ಶಾಮೀಲಾಗಿರವ ಬಗ್ಗೆ ಸಾಕ್ಷ್ಯ ಸಂಗ್ರಹಿಸಲಾಗಿದೆ. ಸ್ಯಾಂಟ್ರೋ ರವಿ ಷಂಡ್ಯತ್ರದಲ್ಲಿ ದೂರುದಾರ ನೆಲಮಂಗಲದ ಪ್ರಕಾಶ್, ಬಿಟಿಎಮ್​ ಲೇಔಟ್​​ನ ಶೇಖ್ ಕೈ ಜೋಡಿಸಿದ್ದರು. ಪತ್ನಿ ಮತ್ತು ನಾದಿನಿ ಇಬ್ಬರೂ ಸೇರಿ ಸಾಲ ಕೊಡುವ ನೆಪದಲ್ಲಿ ಚಾಕುವಿನಿಂದ ಇರಿದು ಹಣ ಮತ್ತು ಚಿನ್ನಾಭರಣ ದೋಚಿದ್ದಾರೆ ಎಂದು ಕಾಟನ್​ಪೇಟೆ ಪೊಲೀಸ್​ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಿದ್ದರು.

ಈ ಹಿನ್ನೆಲೆ ಸ್ಯಾಂಟ್ರೋ ರವಿ ಪತ್ನಿ ಮತ್ತು ನಾದಿನಿ ಕಾಟನ್​ಪೇಟೆ ಪೋಲಿಸರು ಬಂಧಿಸಿದ್ದರು. ಆದರೆ ಪ್ರಕರಣ ಗಂಭೀರವಾಗಿದ್ದ ಹಿನ್ನಲೆ ಸಿಸಿಬಿಗೆ ಪ್ರಕರಣ ವರ್ಗಾವಣೆ ಆಗಿತ್ತು. ಸುಳ್ಳು ಪ್ರಕರಣದಲ್ಲಿ ಪ್ಲಾನ್​ನಂತೆ ಇನ್ಸ್​​ಪೆಕ್ಟರ್ ಪ್ರವೀಣ್ ಶಾಮೀಲಾಗಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಇನ್ಸ್​ಪೆಕ್ಟರ್​​​ ಅನ್ನು ಅಮಾನತು ಮಾಡಲಾಗಿತ್ತು.

ಇದನ್ನೂ ಓದಿ: Santro Ravi: ಪತಿಯಿಂದ ಸುಳ್ಳು ಕೇಸ್ ದಾಖಲು ಪ್ರಕರಣ: ಸಿಸಿಬಿ ಕಚೇರಿಗೆ ಹಾಜರಾದ ಸ್ಯಾಂಟ್ರೋ ರವಿ ಪತ್ನಿ

ಏನಿದು ಪ್ರಕರಣ

ಸ್ಯಾಂಟ್ರೋ ರವಿ ಪತ್ನಿ ಆರ್ಥಿಕ ಸಮಸ್ಯೆ ಹೇಳಿಕೊಂಡು ತನ್ನ ಬಳಿಯಿಂದ 5 ಲಕ್ಷ ರೂ ಸಾಲ ಪಡೆದು ಮೂರು ತಿಂಗಳಲ್ಲಿ ವಾಪಸ್ ನೀಡುವುದಾಗಿ ಹೇಳಿದ್ದರು. ಈ ಸಂಬಂಧ ಒಂದು ಚೆಕ್, ಪಾಸ್​​ಬುಕ್ ಜೆರಾಕ್ಸ್ ಸಹ ನೀಡಿದ್ದರು. ಆದರೆ ಹಣ ವಾಪಸ್ ನೀಡುವುದಾಗಿ ಕರೆಸಿಕೊಂಡು ಹಣ ಕೊಡದೇ ಹಲ್ಲೆ ನಡೆಸಿ ತನ್ನ ಬಳಿ ಇದ್ದ ಚಿನ್ನ ಕದ್ದು ಪರಾರಿಯಾಗಿದ್ದಾರೆ ಎಂದು ಸ್ಯಾಂಟ್ರೋ ರವಿ ತನ್ನ ಪತ್ನಿ ವಿರುದ್ಧವೇ ಶಿವಪ್ರಕಾಶ್​ ಎಂಬುವವರ ಕಡೆಯಿಂದ ದೂರು ದಾಖಲಾಗುವಂತೆ ಮಾಡಿದ್ದನು.

ಅಲ್ಲದೇ ಸ್ಯಾಂಟ್ರೋ ರವಿ ಪತ್ನಿ ಬಳಿಯಿದ್ದ ಲ್ಯಾಪ್​ಟಾಪ್​ ಅನ್ನು ಪಡೆದುಕೊಳ್ಳಲು ತನ್ನ ಪತ್ನಿಯ ವಿರುದ್ಧವೇ ಸಂಚು ರೂಪಿಸಿದ್ದ. ಇದಕ್ಕಾಗಿ ಆತ ಕಾಟನ್​ಪೇಟೆ ಠಾಣಾ ಇನ್ಸ್​ಪೆಕ್ಟರ್​ ಪ್ರವೀಣ್​ ಅವರನ್ನು ಬಳಕೆ ಮಾಡಿಕೊಂಡಿದ್ದನು. ವರ್ಗಾವಣೆ ತಡೆ ಆಮಿಷವೊಡ್ಡಿ ಇನ್ಸ್​​ಪೆಕ್ಟರ್ ಮೂಲಕ ನಕಲಿ ವಂಚನೆ ಪ್ರಕರಣ ದಾಖಲಿಸಿದ್ದನು. ಅದರಂತೆ ಇನ್ಸ್​ಪೆಕ್ಟರ್ ಮೂವರು ಅಮಾಯಕರನ್ನು ಬಂಧಿಸಿದ್ದರು. ಇವರು ಜೈಲುವಾಸ ಅನುಭವಿಸಿ ಹೊರಬಂದ ನಂತರ ಸ್ಯಾಂಟ್ರೋ ರವಿ ವಿರುದ್ಧ ಅತ್ಯಾಚಾರ, ವಂಚನೆ , ಜಾತಿನಿಂದನೆ ಸಂಬಂಧ ದೂರುಗಳನ್ನು ದಾಖಲಿಸಿದ್ದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
ನಿಮ್ಮಲ್ಲಿನ ದುಶ್ಚಟಗಳನ್ನು ಇನ್ನೊಬ್ಬರಿಗೆ ಕಲಿಸಿದರೆ ಉಂಟಾಗುವ ಪರಿಣಾಮವೇನು?
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Horoscope: ಶುಕ್ರವಾರ, ಇಂದಿನ ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ತವರಿನಲ್ಲಿ ಗೆದ್ದ ಆರ್​ಸಿಬಿ; ಮುಗಿಲು ಮುಟ್ಟಿದ ಫ್ಯಾನ್ಸ್ ಸಂಭ್ರಮ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
ಒಳ್ಳೆಯ ಸಿನಿಮಾ ಮಾಡಿದ್ರೂ ಜನ ಬರಲ್ಲ ಯಾಕೆ? ಪಾಸಿಟಿವ್ ಉತ್ತರ ನೀಡಿದ ರಾಘಣ್ಣ
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
‘ರಾಜ್​ಕುಮಾರ್ ಎಂಬ ಹೆಸರು ಕನ್ನಡ ಸಿನಿಮಾದ ಅಭಿವೃದ್ಧಿಗೆ ಕಾರಣ’: ಬರಗೂರು
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಪಹಲ್ಗಾಮ್ ದಾಳಿ ಹಿನ್ನೆಲೆ ದೆಹಲಿಯಲ್ಲಿ ಸರ್ವ ಪಕ್ಷಗಳ ಸಭೆ ಆರಂಭ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಸಿಡಿದ ಒಂದೇ ಗುಂಡು ಕ್ಷಣಾರ್ಧದಲ್ಲಿ ಪತಿಯ ಪ್ರಾಣ ತೆಗೆದುಕೊಂಡಿತು: ಪಲ್ಲವಿ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಅಣ್ಣಾವ್ರ ಹುಟ್ಟುಹಬ್ಬವನ್ನು ಭಿನ್ನವಾಗಿ ಆಚರಿಸಿದ ‘ಸಿಟಿಲೈಟ್ಸ್’ ತಂಡ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಚೆನಾಬ್ ನದಿಗೆ ನಿರ್ಮಿಸಿದ ಬಾಗ್ಲಿಹಾರ್ ಡ್ಯಾಂ ವಿಡಿಯೋ ಇಲ್ಲಿದೆ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ
ಭರತ್ ಭೂಷಣ್ ಅಂತಿಮ ಸಂಸ್ಕಾರವನ್ನು ನೆರವೇರಿಸಿದ ಸಹೋದರ ಪ್ರೀತಂ