AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭ್ರೂಣಹತ್ಯೆ ತಡೆಯಲು ಬೆಂಗಳೂರಿಗೆ ಆಂಧ್ರ ಮಾದರಿಯ ಹೊಸ ಯೋಜನೆ: ಗರ್ಭಿಣಿಯರಿಗಾಗಿ ಜಾರಿಗೆ ಬರಲಿದೆ ಸೇವ್ ಮಾಮ್!

ಮಂಡ್ಯದಲ್ಲಿ ನಡೆಯುತ್ತಿದ್ದ ಭ್ರೂಣಹತ್ಯೆ ಪ್ರಕರಣ ರಾಜ್ಯದಾದ್ಯಂತ ದೊಡ್ಡ ಸುದ್ದಿಗೆ ಗ್ರಾಸವಾಗಿತ್ತು. ಹೀಗೆಯೆ ಅನೇಕರು ಹೆಣ್ಣು ಮಗು ಎಂದೇ ಭ್ರೂಣವನ್ನು ತೆಗೆಸಿಹಾಕುತ್ತಿದ್ದ ಪ್ರಕರಣಗಳ ಬೆನ್ನಲ್ಲೇ ಬೆಂಗಳೂರು ನಗರದಲ್ಲಿ ಅನೇಕ ಗರ್ಭಿಣಿಯರ ಡೇಟಾ ಕೂಡಾ ಮಿಸ್ಸಿಂಗ್ ಆಗುತ್ತಿದ್ದವು. ಇದನ್ನು ತಡೆಗಟ್ಟಲು ಇದೀಗ ಆಂಧ್ರ ಪ್ರದೇಶ ಮಾದರಿಯ ಹೊಸ ಯೋಜನೆ ಜಾರಿಗೆ ತರಲಾಗುತ್ತಿದೆ.

ಭ್ರೂಣಹತ್ಯೆ ತಡೆಯಲು ಬೆಂಗಳೂರಿಗೆ ಆಂಧ್ರ ಮಾದರಿಯ ಹೊಸ ಯೋಜನೆ: ಗರ್ಭಿಣಿಯರಿಗಾಗಿ ಜಾರಿಗೆ ಬರಲಿದೆ ಸೇವ್ ಮಾಮ್!
ಸಾಂದರ್ಭಿಕ ಚಿತ್ರ
ವಿನಯ್​ ಕಾಶಪ್ಪನವರ್​
| Edited By: |

Updated on: Aug 28, 2025 | 8:26 AM

Share

ಬೆಂಗಳೂರು, ಆಗಸ್ಟ್ 28: ಅದೆಷ್ಟು ತಿಳಿವಳಿಕೆ, ಜಾಗೃತಿ ಮೂಡಿಸಿದರೂ ಕೂಡಾ ಎಲ್ಲೋ ಒಂದು ಕಡೆ ಭ್ರೂಣಹತ್ಯೆಗಳನ್ನು ತಡೆಯಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಹೆಣ್ಣು ಭ್ರೂಣವನ್ನು ಕಾಪಾಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿ ತರಲು ಸರ್ಕಾರ ಮುಂದಾಗಿದೆ. ಇದೀಗ ಆಂಧ್ರ ಪ್ರದೇಶ ಮಾದರಿಯನ್ನು ಬೆಂಗಳೂರಿನಲ್ಲಿ (Bengaluru) ಅಳವಡಿಸಲು ಚಿಂತನೆ ನಡೆಸಲಾಗಿದೆ. ಅದೆಷ್ಟೋ ಗರ್ಭಿಣಿಯರ ಡಾಟಾ ಮಿಸ್ಸಿಂಗ್ ಆಗುತ್ತಿವೆ. ಅವರು ಎಲ್ಲಿ ಹೋದರು, ಡೆಲಿವರಿ ಆಯ್ತಾ? ಯಾವ ಮಗು, ತಾಯಿ ಹಾಗೂ ಮಗು ಹೇಗಿದ್ದಾರೆ ಎಂಬ ಮಾಹಿತಿಯೇ‌ ಸಿಗುತ್ತಿಲ್ಲ. ಅನೇಕರು ಗರ್ಭಿಣಿಯರಾಗಿ ತಾಯಿ ಕಾರ್ಡ್ ಮಾಡಿಸುತ್ತಾರೆ. ಅದಾದ ಕೆಲ ತಿಂಗಳ ಬಳಿಕ ರೆಗ್ಯುಲರ್ ಚೆಕ್‌ಅಪ್ ಸೇರಿದಂತೆ ಅನೇಕ ಮಾಹಿತಿ ಸಿಗುತ್ತಿಲ್ಲ. ಅನೇಕರು ಗರ್ಭಪಾತ ಮಾಡಿಸಿಕೊಳ್ಳುತ್ತಿದ್ದರೂ, ಖಾಸಗಿ ಆಸ್ಪತ್ರೆಗೆ ಹೋಗುತ್ತಿರುವ ಪ್ರಕರಣ ಹೆಚ್ಚುತ್ತಿರುವ ಕಾರಣ ಮಾಹಿತಿಗಳ ಕೊರತೆ‌ ಹೆಚ್ಚಾಗುತ್ತಿದೆ. ಇಂಥ ಪ್ರಕರಣಗಳಲ್ಲಿ ಯಾವ ಕೆಟಗರಿಗೆ ಸೇರಿಸಬೇಕು ಎಂಬುದು ಕೂಡಾ ತಿಳಿಯಂದತಾಗಿದೆ.

ಈ‌ ಹಿನ್ನೆಲೆ ‘ಸೇವ್ ಮಾಮ್’ ಎಂಬ ಹೊಸ ಯೋಜನೆ ಬೆಂಗಳೂರಿನಲ್ಲಿ ಆರಂಭ ಮಾಡಲಾಗುತ್ತಿದೆ. ಆಂಧ್ರ ಪ್ರದೇಶದ ಮಾದರಿಯಲ್ಲಿ ಯೋಜನೆ ಜಾರಿಗೊಳಿಸಲು ರೂಪುರೆಷೆ ಸಿದ್ಧಪಡಿಸಲಾಗಿದೆ.

ಹೇಗಿರಲಿದೆ ಸೇವ್ ಮಾಮ್ ಯೋಜನೆ?

ಆನ್‌ಲೈನ್ ಅಪ್ಲಿಕೇಶನ್ ಮೂಲಕ ಡಾಟಾವನ್ನ ಆರೋಗ್ಯ ಇಲಾಖೆಯ ಪೋರ್ಟರ್​​ಗೆ ಕಳುಹಿಸುವ ಪ್ಲಾನ್ ಇದಾಗಿದೆ. ಅಂದರೆ, ಬೆಂಗಳೂರು ಹಾಗೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಗರ್ಭಿಣಿಯರನ್ನು ಅಪ್ಲಿಕೇಶನ್ ಮೂಲಕ ಟ್ರಾಕ್ ಮಾಡಲು ಉದ್ದೇಶಿಸಲಾಗಿದೆ. ಗರ್ಭಿಣಿಯರು ಖಾಸಗಿ ಅಥವಾ ಬೇರೆ ಊರಿನ ಆಸಪತ್ರೆಗಳಿಗೆ ಹೋದರೂ ಕೂಡಾ ಅವರ ಟ್ರಾಕಿಂಗ್ ಡೀಟೇಲ್ಸ್ ಸಿಗುವಂತೆ ಈ ಆ್ಯಪ್ ಅಭಿವೃದ್ಧಿಪಡಿಸಲಾಗಿದೆ.

ಇದನ್ನೂ ಓದಿ
Image
ಗರ್ಭಿಣಿಯರಲ್ಲಿ ಕ್ಯಾಲ್ಸಿಯಂ ಕೊರತೆಯಾಗುವುದನ್ನು ತಡೆಯಲು ಈ ರೀತಿ ಮಾಡಿ
Image
ಗರ್ಭಾವಸ್ಥೆಯಲ್ಲಿ ಪತಿಯ ಬೆಂಬಲ ಹೇಗಿರಬೇಕು?
Image
ಹೆಂಡತಿ ಗರ್ಭಿಣಿ ಇರುವಾಗ ಗಂಡ ಈ ವಿಷಯವನ್ನು ತಿಳಿದಿರಬೇಕು
Image
ಬೇರೊಬ್ಬರು ಬಳಸಿದ ಲೋಟದಲ್ಲಿ ನೀರು ಕುಡಿಯುವ ಮುನ್ನ ಎಚ್ಚರ!

ಮಗು ಹುಟ್ಟಿ 2 ವರ್ಷದ ವರೆಗೂ ಟ್ರಾಕ್

ಗರ್ಭಿಣಿಯಾಗಿನಿಂದ ಮಗು ಹುಟ್ಟಿ ಎರಡು ವರ್ಷದವರೆಗೂ ಮಾಹಿತಿ ಟ್ರಾಕಿಂಗ್ ಮಾಡಲಾಗುತ್ತದೆ . ಆಶಾ ಕಾರ್ಯಕರ್ತೆಯರ ಮೂಲಕ ಈ ಆ್ಯಪ್‌ನಲ್ಲಿ ಸಂಪೂರ್ಣ ಮಾಹಿತಿ ಅಪ್ಲೋಡ್ ಮಾಡಿಸಿ, ಸಂಪೂರ್ಣ ಮಾಹಿತಿಯನ್ನು ಕಲೆಹಾಕಲಾಗುತ್ತದೆ. ಈಗಾಗಲೇ ಪ್ರಾಯೋಗಿಕ ಯೋಜನೆ ಸಿದ್ಧವಾಗಿದ್ದು, ಶೀಘ್ರದಲ್ಲೇ ಪೂರ್ಣ ಪ್ರಮಾಣದಲ್ಲಿ ಯೋಜನೆ ಆರಂಭವಾಗಲಿದೆ.

ಇದನ್ನೂ ಓದಿ: ಗರ್ಭಿಣಿಯರಲ್ಲಿ ಕ್ಯಾಲ್ಸಿಯಂ ಕೊರತೆಯಾದರೆ ಯಾವ ರೀತಿಯ ಆರೋಗ್ಯ ಸಮಸ್ಯೆಗಳು ಬರುತ್ತೆ ನೋಡಿ

ಒಟ್ಟಿನಲ್ಲಿ ಗರ್ಭಿಣಿಯರ ಮಾಹಿತಿ ಮಿಸ್ಸಿಂಗ್ ಒಂದು ರೀತಿ ಆತಂಕವನ್ನು ಹುಟ್ಟಿಸಿದೆ. ಈ ಸಮಸ್ಯೆ ಬಗೆಹರಿಸಲು ಹೊಸ ಯೋಜನೆ ಜಾರಿಗೆ ತರಲಾಗುತ್ತಿದ್ದು, ಇದರಿಂದ ಯಾವ ರೀತಿ ಪ್ರಯೋಜನವಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
ಇಡಿ ವಿಚಾರಣೆಗೆ ಹಾಜರಾದ ಮಾಜಿ ಸಚಿವ ಬಿ. ನಾಗೇಂದ್ರ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
108 ಆ್ಯಂಬುಲೆನ್ಸ್ ನೌಕರರ ಪ್ರತಿಭಟನೆ: ಸಚಿವ ಖಾದರ್ ಖಡಕ್ ಎಚ್ಚರಿಕೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಆಸ್ತಿಗಾಗಿ ತಂದೆಯ ಶವ ತಂದು ತಹಶೀಲ್ದಾರ್ ಕಚೇರಿ ಮುಂದೆ ಮಕ್ಕಳ ಪ್ರತಿಭಟನೆ
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಸರ್ಕಾರಿ ನಿವಾಸ ಖಾಲಿ ಮಾಡುವಂತೆ ಮಹದೇವಪ್ಪಗೆ ಸಚಿವ ಭೈರತಿ ಸುರೇಶ್​​ ಒತ್ತಡ?
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಯುವತಿಗೆ ಮಗು ಕರುಣಿಸಿ ವಂಚಿಸಿದ್ದ ಯುವಕನಿಗೆ ಪೊಲೀಸರಿಂದಲೇ ಮದುವೆ
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ಕೆಪಿಎಸ್​ಸಿ ಅಭ್ಯರ್ಥಿಗಳಿಗೆ ಡೀಲ್ ಮಾಡಿದ ಪ್ಲ್ಯಾನ್‌ ನೋಡಿ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಏಕಾಂಗಿಯಾಗಿ ಶಾಸಕ ಶರಣಗೌಡ ಪ್ರತಿಭಟನೆ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ಪ್ರಜಾ ಸೇವಾ ಆಂದೋಲನದಲ್ಲಿ ಕಾಂಗ್ರೆಸ್ ಶಾಸಕ ಎಚ್.ವಿ. ವೆಂಕಟೇಶ್ ದರ್ಪ!
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ನೈಸ್ ಟೋಲ್ ಸಿಬ್ಬಂದಿಗೆ ಕ್ಲಾಸ್ ತಗೊಂಡ ಯುವತಿ
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್
ಬೆಂಗಳೂರು: ಗಣೇಶೋತ್ಸವ ಸಂಭ್ರಮದಲ್ಲಿ ಇರುವವರಿಗೆ ಪೊಲೀಸರ ಶಾಕ್