ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ; ಬಿಬಿಎಂಪಿ ಆವರಣ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು!

ಪೌರಕಾರ್ಮಿಕರು ಬಿಬಿಎಂಪಿ ಆವರಣವನ್ನು ಸ್ವಚ್ಛಗೊಳಿಸದೆ ಧರಣಿ ನಡೆಸಿದ್ದಾರೆ. ಇತ್ತ ಶಾಸಕರು, ಸಚಿವರ ಮನೆಯಿಂದ ಕೂಡ ಕಸ ಸಂಗ್ರಹ ಮಾಡದೆ, 16 ಸಾವಿರ ಜನ ಪೌರಕಾರ್ಮಿಕರು, 10 ಸಾವಿರ ಕಸದ ಆಟೋ-ಟಿಪ್ಪರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ಕೆಲಸ ಕಾಯಂಗೆ ಆಗ್ರಹಿಸಿ 16 ಸಾವಿರ ಪೌರಕಾರ್ಮಿಕರಿಂದ ಪ್ರತಿಭಟನೆ; ಬಿಬಿಎಂಪಿ ಆವರಣ ಸ್ವಚ್ಛಗೊಳಿಸದೆ ಹಾಗೆಯೇ ಬಿಟ್ಟರು!
ಕೆಲಸ ಕಾಯಂಗೆ ಆಗ್ರಹಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ
Follow us
| Updated By: preethi shettigar

Updated on:Sep 06, 2021 | 12:37 PM

ಬೆಂಗಳೂರು: 16 ಸಾವಿರ ಪೌರಕಾರ್ಮಿಕರನ್ನು ಖಾಯಂ ನೇಮಕಾತಿ ಮಾಡಿಕೊಳ್ಳಬೇಕೆಂದು ಒತ್ತಾಯಿಸಿ ಬೆಂಗಳೂರಿನಲ್ಲಿ ಪೌರಕಾರ್ಮಿಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಿನಲ್ಲಿ ಇಂದು ಸ್ವಚ್ಛತಾ ಕಾರ್ಯ ಸ್ಥಗಿತಗೊಳಿಸಿದ ಪೌರಕಾರ್ಮಿಕರು, ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾರೆ.

ಇಂದು ಪೌರಕಾರ್ಮಿಕರ ಪ್ರತಿಭಟನೆ ಹಿನ್ನಲೆ ಬೆಂಗಳೂರಿನ ಮನೆ ಮನೆಯಿಂದ ಕಸ ಸಂಗ್ರಹಣೆ, ಕಸ ಗುಡಿಸುವ ಕೆಲಸ ಬಂದ್ ಆಗಿದೆ. ಅಲ್ಲದೆ ಪೌರಕಾರ್ಮಿಕರು ಬಿಬಿಎಂಪಿ ಆವರಣವನ್ನು ಸ್ವಚ್ಛಗೊಳಿಸದೆ ಧರಣಿ ನಡೆಸಿದ್ದಾರೆ. ಇತ್ತ ಶಾಸಕರು, ಸಚಿವರ ಮನೆಯಿಂದ ಕೂಡ ಕಸ ಸಂಗ್ರಹ ಮಾಡದೆ, 16 ಸಾವಿರ ಜನ ಪೌರಕಾರ್ಮಿಕರು, 10 ಸಾವಿರ ಕಸದ ಆಟೋ-ಟಿಪ್ಪರ್ ಚಾಲಕರು ಪ್ರತಿಭಟನೆ ನಡೆಸಿದ್ದಾರೆ.

ಮೌರ್ಯ ಸರ್ಕಲ್‌ನಲ್ಲಿ ಪೌರಕಾರ್ಮಿಕರಿಂದ ಪ್ರತಿಭಟನೆ ರಾಜ್ಯದಲ್ಲಿರುವ ಎಲ್ಲಾ ಪೌರಕಾರ್ಮಿಕರನ್ನು ಖಾಯಂ ಮಾಡುವಂತೆ ಒತ್ತಾಯಿಸಿ ಮೌರ್ಯ ಸರ್ಕಲ್‌ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಖಾಯಂ ಮಾಡದಿದ್ದರೆ ಮುಂದಿನ ತಿಂಗಳು ಅನಿರ್ದಿಷ್ಟಾವಧಿ ಧರಣಿ ಮಾಡುತ್ತೇವೆ ಎಂದು ಪೌರಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ನಾರಾಯಣ ಹೇಳಿಕೆ ನೀಡಿದ್ದಾರೆ.

ಕಳೆದ ಬಾರಿ ಬಿಬಿಎಂಪಿ ಪೌರಕಾರ್ಮಿಕರಿಂದ ಗುತ್ತಿಗೆದಾರರ ಮನೆ ಮುಂದೆ ಧರಣಿ ಮಾರ್ಚ್​ನಲ್ಲಿ ಪ್ರತಿಭಟನೆ ನಡೆಸಲಾಗಿತ್ತು. ಕಳೆದ 6 ತಿಂಗಳಿಂದ ಬಿಬಿಎಂಪಿ ಪೌರಕಾರ್ಮಿಕರಿಗೆ ವೇತನ ನೀಡದೆ ತಾತ್ಸಾರ ಮಾಡುತ್ತಿದ್ದಾರೆ ಎಂಬ ಕಾರಣಕ್ಕೆ ಕಾರ್ಮಿಕರು  ಬೆಂಗಳೂರಿನ ಗುತ್ತಿಗೆದಾರರ ಮನೆ ಮುಂದೆ ಧರಣಿ ನಡೆಸಿದ್ದರು. ಗುತ್ತಿಗೆದಾರರಾದ ಹರ್ಷವರ್ಧನ್ ರೆಡ್ಡಿ ಮನೆ ಮುಂದೆ ಕಾರ್ಮಿಕರು ಧರಣಿ ನಡೆಸಿದ್ದರು. ​ಸಂಬಳ ಕೊಡಿ, ಮನೆಯಿಂದ ಹೊರಗೆ ಹೋಗಿ ಎಂದು ಹರ್ಷವರ್ಧನ್​ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದ್ದರು..

170 ಜನ ಗುತ್ತಿಗೆ ಆಧಾರದ ಪೌರಕಾರ್ಮಿಕರಿಗೆ ವೇತನ ನೀಡದೆ ಸತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಎಸ್​ಆರ್​ಪಿ ಕಂಪನಿ ಗುತ್ತಿಗೆದಾರ ಹರ್ಷವರ್ಧನ್ ವಿರುದ್ಧ ಧರಣಿ ನಡೆಸಲಾಗಿದೆ. 6 ತಿಂಗಳ ಸಂಬಳ ನೀಡದೇ ಆಟವಾಡಿಸುತ್ತಿರುವ ಪಾಲಿಕೆ ಹಾಗೂ ಗುತ್ತಿಗೆದಾರರ ಮೇಲೆ ಕಾರ್ಮಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತುಮಕೂರು: ಗುಬ್ಬಿ ಚಾಲಕರ ಮಿಂಚಿನ ಪ್ರತಿಭಟನೆ ಮೃತ ದೇಹ ಸಾಗಿಸಲು ಆಗಲ್ಲ ಎಂದ ಮ್ಯಾಕ್ಸಿ ಕ್ಯಾಬ್ ಚಾಲಕನ ಮೇಲೆ ಇಲ್ಲಸಲ್ಲದ ಕೇಸ್ ದಾಖಲಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಪಿಎಸ್ಐ ಕ್ಯಾಬ್ ಚಾಲಕನ ಮೇಲೆ ಪ್ರಕರಣ ದಾಖಲಿಸಿದ್ದು, ಚಾಲಕನ ಬಳಿಯೇ ತನ್ನ ಜೀಪ್ ಡ್ರೈವರ್ ಖಾತೆಗೆ ಲಂಚದ ಹಣವನ್ನು ಫೋನ್ ಪೇ ಮಾಡಿಸಿಕೊಂಡಿರುವ ಆರೋಪ ತುಮಕೂರು ಜಿಲ್ಲೆ ಗುಬ್ಬಿ ಪೊಲೀಸರ ಮೇಲೆ ಕೇಳಿ ಬಂದಿದೆ.

ಗುಬ್ಬಿಯ ಎಂ.ಹೆಚ್.ಪಟ್ಟಣದ ಬಳಿ ನಿನ್ನೆ ಅಪಘಾತವಾಗಿ ಬೈಕ್ ಸವಾರನೊಬ್ಬ ಸ್ಥಳದಲ್ಲಿಯೇ ಮೃತಪಟ್ಟಿದ್ದ. ಬಳಿಕ ಸ್ಥಳಕ್ಕೆ ತೆರಳಿದ್ದ ಗುಬ್ಬಿ ಪೊಲೀಸ್ ಸಬ್ ಇನ್ಸ್​ಪೆಕ್ಟರ್​ ಜ್ಞಾನಮೂರ್ತಿ ಪ್ರಕರಣವನ್ನು ದಾಖಲಿಸಿಕೊಂಡಿದ್ದರು. ನಂತರ ಮೃತದೇಹವನ್ನು ಸಾಗಿಸಲು ಮುಂದಾದ ಪಿಎಸ್​ಐ ಬೆಂಗಳೂರಿನಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆಗೆ ಹೋಗುತ್ತಿದ್ದ ತರಕಾರಿ ಸಾಗಿಸುವ ಮ್ಯಾಕ್ಸಿ ಕ್ಯಾಬ್​ನ ಚಾಲಕ ಶಕೀಲ್ನ​ನ್ನು ತಡೆದು ಶವವನ್ನು ಸಾಗಿಸುವಂತೆ ತಿಳಿಸಿದ್ದಾರೆ.

ಗುಬ್ಬಿ ಪಿಎಸ್​ಐ ಜ್ಞಾನಮೂರ್ತಿ ಹೇಳಿದ್ದನ್ನು ಒಪ್ಪದ ಶಕೀಲ್, ಗಾಯಾಳು ಗಂಭೀರ ಸ್ಥಿತಿಯಲ್ಲಿ ಇದ್ದಿದರೆ ಅವರನ್ನು ಆಸ್ಪತ್ರೆಗೆ ಸಾಗಿಸುತ್ತಿದ್ದೆ. ಆದರೆ, ಶವವನ್ನು ನಾನು ಸಾಗಿಸುವುದಕ್ಕೆ ಆಗಲ್ಲ ಎಂದಿದ್ದಾರೆ. ಕೂಡಲೇ ದರ್ಪ ತೋರಿದ ಪಿಎಸ್​ಐ ಜ್ಞಾನಮೂರ್ತಿ ಮ್ಯಾಕ್ಸಿ ಕ್ಯಾಬ್​ ಅನ್ನು ವಶಕ್ಕೆ ಪಡೆದು ಇಲ್ಲಸಲ್ಲದ ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕಿ, ವಾಹನವನ್ನು ಬಿಡಬೇಕು ಅಂದರೆ ನೂರು ರೂ. ರಶೀದಿ ಪಡೆದು 7 ಸಾವಿರ ರೂಗಳನ್ನು ನನ್ನ ಡ್ರೈವರ್ ಖಾತೆಗೆ ಜಮಾ ಮಾಡು ಎಂದು ಹೇಳಿದ್ದಾರೆ ಎಂದು ಚಾಲಕ ಶಕೀಲ್ ಆರೋಪಿಸಿದ್ದಾರೆ.

ಇದನ್ನೂ ಓದಿ: ಮುಜಾಫರ್ ನಗರದಲ್ಲಿ ಕಿಸಾನ್ ಮಹಾಪಂಚಾಯತ್; ಕೃಷಿ ಕಾನೂನು ವಿರುದ್ಧ ಪ್ರತಿಭಟನೆ ಮುಂದುವರಿಸಲು ರೈತರ ನಿರ್ಧಾರ

ಕೆರೆಯಂತಾದ ಅಂಜನಾಪುರ ಮುಖ್ಯರಸ್ತೆಯಲ್ಲಿ ತೆಪ್ಪ ಬಿಟ್ಟು ಪ್ರತಿಭಟನೆ! ಕೆಸರು ಗದ್ದೆಯಲ್ಲಿ ನಾಟಿ ಮಾಡುತ್ತಿರುವ ಸ್ಥಳೀಯರು

Published On - 11:54 am, Mon, 6 September 21

ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಹೈಕಮಾಂಡ್ ಸುಪರ್ದಿಗೆ ಬಿಟ್ಟಿದ್ದು: ಸಚಿವ
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ವಿರಾಟ್ ಕೊಹ್ಲಿ ಎರಡನೇ ಇನ್ನಿಂಗ್ಸ್​ನಲ್ಲಿ ತಮ್ಮ ಸ್ಪರ್ಶ ಕಂಡುಕೊಳ್ಳುವರೇ?
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಮೆಜೆಸ್ಟಿಕ್​​ನಲ್ಲಿ ರಸ್ತೆ ಗುಂಡಿಗಳ ದರ್ಬಾರ್, ಸ್ವಲ್ಪ ಯಾಮಾರಿದರೆ ಡೇಂಜರ್
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ಶಿವಮೊಗ್ಗ: 20 ಕೆಜಿ ಕೇಕ್​ ಕತ್ತರಿಸಿ ಗೂಳಿಯ ಜನ್ಮದಿನ ಆಚರಣೆ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
ದಾವಣಗೆರೆಯಲ್ಲಿ ರೈತರ ಬೆಳೆ ಹಾಳು, ಮಳೆಯಾದರೂ ರೈತನಿಗೆ ಸಂಕಷ್ಟ ತಪ್ಪಿದ್ದಲ್ಲ
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
‘ಇನ್ನೊಂದು ಅವಕಾಶ ಕೊಡಿ ಬಿಗ್ ಬಾಸ್’; ರಂಜಿತ್ ಹೊರಹೋಗುತ್ತಿದ್ದಂತೆ ಕಣ್ಣೀರು
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಪೂಜೆ ಸಮಯದಲ್ಲಿ ರೇಷ್ಮೆ ವಸ್ತ್ರ ಧರಿಸುವುದರ ಮಹತ್ವ ತಿಳಿಯಿರಿ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಈ ರಾಶಿಯವರು ಇಂದು ಕೆಲಸ ಕಾರ್ಯಗಳಲ್ಲಿ ಜಯಶಾಲಿಯಾಗುತ್ತಾರೆ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ