AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ

ಕರ್ನಾಟಕದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಶಾಲಾ ದಾಖಲಾತಿಗಳ ಸಂಖ್ಯೆ ಕಳೆದ ವರ್ಷಕ್ಕಿಂತ ಸುಮಾರು 4 ಲಕ್ಷದಷ್ಟು ಕುಸಿದಿದೆ. ಒಂದನೇ ತರಗತಿ ಪ್ರವೇಶಕ್ಕೆ ಕಡ್ಡಾಯಗೊಳಿಸಲಾದ 6 ವರ್ಷದ ವಯೋಮಿತಿ ನಿಯಮ ಹಾಗೂ ಖಾಸಗಿ ಶಾಲೆಗಳ ಶುಲ್ಕ ಏರಿಕೆಯು ಈ ಕುಸಿತಕ್ಕೆ ಮುಖ್ಯ ಕಾರಣ ಎಂದು ಹೇಳಲಾಗಿದೆ. ಸರ್ಕಾರದ ಗೊಂದಲದ ನಿರ್ಧಾರಗಳಿಂದಾಗಿ ಸಾವಿರಾರು ಮಕ್ಕಳು ಶಾಲೆಯಿಂದ ಹೊರಗುಳಿಯುವಂತಾಗಿದೆ.

ರಾಜ್ಯದಲ್ಲಿ ಈ ವರ್ಷ ಶಾಲಾ ದಾಖಲಾತಿ ಭಾರಿ ಕುಸಿತ: 4 ಲಕ್ಷ ವಿದ್ಯಾರ್ಥಿಗಳ ಕೊರತೆ
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Aug 08, 2026 | 8:34 AM

Share

ಮುಖ್ಯಾಂಶಗಳು

  • ಕರ್ನಾಟಕದಲ್ಲಿ ಈ ವರ್ಷ ಶಾಲಾ ದಾಖಲಾತಿಗಳು ನಾಲ್ಕು ಲಕ್ಷದಷ್ಟು ಕುಸಿದಿವೆ.
  • ಒಂದನೇ ತರಗತಿ ದಾಖಲಾತಿಗೆ ತಂದ ವಯಸ್ಸಿನ ನಿಯಮವೇ ಕುಸಿತಕ್ಕೆ ಕಾರಣ.
  • ಖಾಸಗಿ ಶಾಲೆಗಳ ಭಾರಿ ಶುಲ್ಕ ಏರಿಕೆಯು ಪೋಷಕರಿಗೆ ಆರ್ಥಿಕ ಹೊರೆಯಾಗಿದೆ.

ಬೆಂಗಳೂರು, ಆಗಸ್ಟ್ 08: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಕರ್ನಾಟಕದಾದ್ಯಂತ ಶಾಲಾ ದಾಖಲಾತಿಗಳ (School Admissions) ಸಂಖ್ಯೆಯಲ್ಲಿ ಭಾರಿ ಕುಸಿತ ಕಂಡುಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ರಾಜ್ಯದ ಶಾಲೆಗಳಲ್ಲಿ ದಾಖಲಾತಿ ಪಡೆಯುವ ವಿದ್ಯಾರ್ಥಿಗಳ ಸಂಖ್ಯೆ ಬರೋಬ್ಬರಿ ನಾಲ್ಕು ಲಕ್ಷದಷ್ಟು ಕಡಿಮೆಯಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಖಾಸಗಿ ಹಾಗೂ ಸರ್ಕಾರಿ ಶಾಲೆಗಳೆರಡರಲ್ಲೂ ಈ ಇಳಿಕೆ ಕಂಡುಬಂದಿದ್ದು, ಶಿಕ್ಷಣ ಇಲಾಖೆ ಮತ್ತು ಶಾಲಾ ಆಡಳಿತ ಮಂಡಳಿಗಳಲ್ಲಿ ಆತಂಕ ಮೂಡಿಸಿದೆ.

ವಯಸ್ಸಿನ ಮಿತಿ ನಿಯಮ ಮತ್ತು ಪೋಷಕರ ಗೊಂದಲ

ದಾಖಲಾತಿಗಳು ಈ ಮಟ್ಟಿಗೆ ಕುಸಿಯಲು ಸರ್ಕಾರ ಜಾರಿಗೆ ತಂದಿರುವ ಕಡ್ಡಾಯ ವಯಸ್ಸಿನ ಮಿತಿ ಪ್ರಮುಖ ಕಾರಣ ಎನ್ನಲಾಗುತ್ತಿದೆ. ಒಂದನೇ ತರಗತಿ ಪ್ರವೇಶಕ್ಕೆ ಜೂನ್ 1ರ ವೇಳೆಗೆ ಮಗುವಿಗೆ ಕಡ್ಡಾಯವಾಗಿ 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಸರ್ಕಾರ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮುಂದಾಗಿತ್ತು.

ಇದರಿಂದಾಗಿ ಕೋವಿಡ್-19 ಸಾಂಕ್ರಾಮಿಕದ ಅವಧಿಯಲ್ಲಿ ಜನಿಸಿದ ಹಾಗೂ ಈಗಾಗಲೇ ಎಲ್‌ಕೆಜಿ, ಯುಕೆಜಿ ಮುಗಿಸಿ ಒಂದನೇ ತರಗತಿಗೆ ಹೋಗಬೇಕಿದ್ದ ಸುಮಾರು 4 ಲಕ್ಷಕ್ಕೂ ಹೆಚ್ಚು ಮಕ್ಕಳು ಶಾಲೆಯಿಂದ ಹೊರಗುಳಿಯುವ ಭೀತಿ ಎದುರಾಗಿತ್ತು. ಪೋಷಕರ ಭಾರಿ ಒತ್ತಡ ಮತ್ತು ಪ್ರತಿಭಟನೆಯ ನಂತರ ಸರ್ಕಾರ ಕೊನೆಯ ಕ್ಷಣದಲ್ಲಿ 60 ದಿನಗಳ ವಯೋಮಿತಿ ಸಡಿಲಿಕೆ ಘೋಷಿಸಿ, 5 ವರ್ಷ 10 ತಿಂಗಳು ತುಂಬಿದ ಮಕ್ಕಳಿಗೂ ಪ್ರವೇಶಾವಕಾಶ ನೀಡಿತು. ಆದಾಗ್ಯೂ, ಈ ದೀರ್ಘಾವಧಿ ಗೊಂದಲ ಹಾಗೂ ಇಲಾಖೆಯ ಆದೇಶಗಳ ವಿಳಂಬದಿಂದಾಗಿ ಸಾವಿರಾರು ಪೋಷಕರು ತಮ್ಮ ಮಕ್ಕಳನ್ನು ಈ ವರ್ಷ ಶಾಲೆಗೆ ಸೇರಿಸದೆ ಪ್ರವೇಶ ಪ್ರಕ್ರಿಯೆಯಿಂದ ದೂರ ಉಳಿದಿದ್ದಾರೆ.

ಖಾಸಗಿ ಶಾಲೆಗಳ ಶುಲ್ಕ ಏರಿಕೆಯ ಬಿಸಿ

ದಾಖಲಾತಿ ಕುಸಿತಕ್ಕೆ ವಯೋಮಿತಿ ಗೊಂದಲ ಮಾತ್ರವಲ್ಲದೆ, ಖಾಸಗಿ ಶಾಲೆಗಳಲ್ಲಿ ಕಂಡುಬಂದಿರುವ 10 ರಿಂದ 20 ಪ್ರತಿಶತದಷ್ಟು ಅತಿಯಾದ ಶುಲ್ಕ ಏರಿಕೆ ಕೂಡ ಮತ್ತೊಂದು ಪ್ರಮುಖ ಕಾರಣವಾಗಿದೆ. ಮಧ್ಯಮ ಮತ್ತು ಬಡ ಕುಟುಂಬಗಳಿಗೆ ಒಮ್ಮೆಗೇ ಲಕ್ಷಾಂತರ ರೂಪಾಯಿ ಪ್ರವೇಶ ಶುಲ್ಕ ಭರಿಸುವುದು ಕಷ್ಟಸಾಧ್ಯವಾಗಿದ್ದು, ಇದು ಕೂಡ ದಾಖಲಾತಿ ಪ್ರಮಾಣ ತಗ್ಗಲು ಕಾರಣವಾಗಿದೆ ಎಂದು ಶಿಕ್ಷಣ ತಜ್ಞರು ವಿಶ್ಲೇಷಿಸಿದ್ದಾರೆ.

ಆದರೆ, ಕೇವಲ 60 ದಿನಗಳ ಸಡಿಲಿಕೆ ಸಾಲದು, ಇದನ್ನು ಕನಿಷ್ಠ 90 ದಿನಗಳಿಗೆ ವಿಸ್ತರಿಸಬೇಕು ಅಥವಾ ಡಿಸೆಂಬರ್ 31 ರವರೆಗಿನ ಅವಧಿಯನ್ನು ಪರಿಗಣಿಸಬೇಕು ಎಂದು ಪೋಷಕರ ಸಂಘಟನೆಗಳು ಇಂದಿಗೂ ಆಗ್ರಹಿಸುತ್ತಿವೆ. ಒಂದು ವೇಳೆ ಸರ್ಕಾರ ಮತ್ತಷ್ಟು ವಯೋಮಿತಿ ಸಡಿಲಿಕೆ ನೀಡದಿದ್ದರೆ, ಮುಂಬರುವ ದಿನಗಳಲ್ಲೂ ಈ ದಾಖಲಾತಿ ಕೊರತೆ ಮುಂದುವರಿಯುವ ಸಾಧ್ಯತೆಯಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ವೃಷಭ ರಾಶಿ ರೋಹಿಣಿ ನಕ್ಷತ್ರದಲ್ಲಿ ಚಂದ್ರನ ಸಂಚಾರ: 12 ರಾಶಿಗಳ ದಿನ ಭವಿಷ್ಯ
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಬಿಗ್​​ಬಾಸ್​ ಸ್ಪರ್ಧಿಗಳಿಗೆ ಅಗ್ನಿಪರೀಕ್ಷೆ: ಮಾಜಿ ​​ಸ್ಪರ್ಧಿಗಳ ಕೆಲಸವೇನು?
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
ಒಡಿಶಾದಲ್ಲಿ ಕೈಮಗ್ಗದ ಬಟ್ಟೆ ಖರೀದಿಸಿದ ಪ್ರಲ್ಹಾದ್ ಜೋಶಿ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
‘ಬಾಸ್’ ಸಿನಿಮಾ ನೋಡಿದ ದರ್ಶನ್ ಅಭಿಮಾನಿಗಳು ಹೀಗೆಂದರಂತೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಕೈ ಮುಖಂಡನ ಮೇಲೆ ಗುಂಡಿನ ದಾಳಿ ನಡೆಸಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
ದೆಹಲಿಯಲ್ಲಿ ಭಾರೀ ಮಳೆ; ರಸ್ತೆಯಲ್ಲಿ ನಿಂತ ನೀರಲ್ಲಿ ಈಜಾಡಿದ ಮಕ್ಕಳು
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
5 ಸ್ಟಾರ್ ಹೋಟೆಲ್​​ಗಳಲ್ಲಿ ಕೊಳೆತ ತರಕಾರಿ, ಮಾಂಸ ಪತ್ತೆ: ಕಠಿಣ ಕ್ರಮ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ಕಬಿನಿ ನದಿ ಪಾತ್ರದಲ್ಲಿರುವ ಸಾರ್ವಜನಿಕರು ಎಚ್ಚರಿಕೆಯಿಂದ ಇರಲು ಸೂಚನೆ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ರಸ್ತೆ ಮಧ್ಯೆ ದೊಡ್ಡ ಕಂದಕ; ಇದು 'ನರಕದ ಹಾದಿ' ಎಂದು ನೆಟ್ಟಿಗರ ಆಕ್ರೋಶ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ
ದುಬಾರೆ ದುರಂತಕ್ಕೆ 2.5 ತಿಂಗಳು: ಇಂದಿಗೂ ಜಾರಿಯಾಗದ ಎಸ್‌ಒಪಿ