ಶಾಲಾ ಆಡಳಿತ ಮಂಡಳಿ, ಚಾಲಕನ ಬೇಜವಾಬ್ದಾರಿಗೆ ಪುಟ್ಟ ಜೀವ ಬಲಿ; ಶಾಲಾ ಬಸ್​ ಹರಿದು 2ನೇ ತರಗತಿ ವಿದ್ಯಾರ್ಥಿ ಸಾವು

ಆನೇಕಲ್ ತಾಲೂಕಿನ ಎಂ.ಮೇಡಹಳ್ಳಿಯಲ್ಲಿ ಟ್ಯೂಷನ್ ಮುಗಿಸಿ ಬರುವಾಗ ಶಾಲಾ ಬಸ್​ ಹರಿದು ಬಿದರಗೆರೆಯ SSV ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು ಸಿಂಗ್​(8) ಸಾವು.

ಶಾಲಾ ಆಡಳಿತ ಮಂಡಳಿ, ಚಾಲಕನ ಬೇಜವಾಬ್ದಾರಿಗೆ ಪುಟ್ಟ ಜೀವ ಬಲಿ; ಶಾಲಾ ಬಸ್​ ಹರಿದು 2ನೇ ತರಗತಿ ವಿದ್ಯಾರ್ಥಿ ಸಾವು
ದಿವ್ಯಾಂಶು
Edited By: ಆಯೇಷಾ ಬಾನು

Updated on: Jul 07, 2023 | 9:46 AM

ಆನೇಕಲ್: ಶಾಲಾ ಬಸ್​ ಹರಿದು(School Bus) 2ನೇ ತರಗತಿ ವಿದ್ಯಾರ್ಥಿ(Student Killed) ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್(Anekal) ತಾಲೂಕಿನ ಎಂ.ಮೇಡಹಳ್ಳಿ ಗ್ರಾಮದಲ್ಲಿ ನಡೆದಿದೆ. ದಿವ್ಯಾಂಶು ಸಿಂಗ್​(8) ಮೃತ ಬಾಲಕ. ಬಿದರಗೆರೆಯ ಎಸ್.ಎಸ್.ವಿ ಶಾಲೆಯ 2ನೇ ತರಗತಿ ವಿದ್ಯಾರ್ಥಿ ದಿವ್ಯಾಂಶು, ನಿನ್ನೆ(ಜು.06) ಸಂಜೆ 6 ಗಂಟೆಗೆ ಟ್ಯೂಷನ್ ಮುಗಿಸಿ ಶಾಲಾ ವಾಹನದಿಂದ ಇಳಿದು ರಸ್ತೆ ದಾಟುತ್ತಿದ್ದಾಗ ಅದೇ ಶಾಲೆಯ ವಾಹನದ ಚಕ್ರಕ್ಕೆ ಸಿಲುಕಿ ಮೃತಪಟ್ಟಿದ್ದಾನೆ.

ಚಾಲಕನ ಬೇಜವಾಬ್ದಾರಿಗೆ ಬಾಲಕ ಬಲಿ

ಮೇಡಹಳ್ಳಿಯ ಸಾಯಿ ಪ್ಯಾರಡೈಸ್ ಬಡಾವಣೆಯಲ್ಲಿ ವಾಸವಿದ್ದ ದಿವ್ಯಾಂಶು ಪೋಷಕರು, ಎಂದಿನಂತೆ ಮಗನನ್ನು ಶಾಲೆಗೆ ಕಳಿಸಿದ್ದಾರೆ. ದಿವ್ಯಾಂಶು ಶಾಲೆಗೆ ಹೋಗಿ ಸಂಜೆ ಟ್ಯೂಷನ್ ಮುಗಿಸಿ ಶಾಲಾ ಬಸ್​ನಲ್ಲಿಯೇ ಹಿಂತಿರುಗುತ್ತಿದ್ದ. ನಿನ್ನೆ ಸಂಜೆ 6 ಗಂಟೆಯ ಸುಮಾರಿಗೆ ಶಾಲಾ ವಾಹನದಲ್ಲಿ ಮನೆ ಸಮೀಪ ಇಳಿದಿದ್ದ ದಿವ್ಯಾಂಶು, ಶಾಲಾ ವಾಹನದ ಮುಂಭಾಗದಿಂದ ರಸ್ತೆ ದಾಟಿ ಮನೆಯ ಕಡೆಗೆ ಹೋಗಲು ಮುಂದಾಗಿದ್ದಾನೆ. ಈ ವೇಳೆ ಚಾಲಕನ ಅಜಾಗರುಕತೆಯಿಂದ ಬಾಲಕನ ಮೇಲೆ ಬಸ್ ಹರಿದಿದೆ. ಶಾಲಾ ವಾಹನದ ಚಕ್ರಕ್ಕೆ ಸಿಲುಕಿ ಬಾಲಕ ಮೃತಪಟ್ಟಿದ್ದಾನೆ. ವಾಹನಕ್ಕೆ ಸಿಬ್ಬಂದಿ ನೇಮಿಸದೆ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದ್ದು ಚಾಲಕನ ಬೇಜವಾಬ್ದಾರಿಗೆ ಪುಟ್ಟ ಬಾಲಕನ ಜೀವ ಹೋಗಿದೆ.

ಇದನ್ನೂ ಓದಿ: Bengaluru Mysuru Highway: ಎಕ್ಸ್‌ಪ್ರೆಸ್‌ ವೇನಲ್ಲೂ ಶುರುವಾಯ್ತು ವ್ಹೀಲಿಂಗ್, ಪುಂಡರ ಹೆಡೆಮುರಿ ಕಟ್ಟಿದ ಪೊಲೀಸ್ರು

ಶಾಲಾ ಮಕ್ಕಳನ್ನ ಜೋಪಾನವಾಗಿ ವಾಹನದಿಂದ ಇಳಿದ ಬಳಿಕ ಶಾಲಾ ಸಿಬ್ಬಂದಿ ರಸ್ತೆ ದಾಟಿಸಿ ಬರಬೇಕು. ಆದ್ರೆ ಶಾಲಾ ಬಸ್ ನಲ್ಲಿ ಡ್ರೈವರ್ ಹೊರತುಪಡಿಸಿ ಕ್ಲೀನರ್ ಸೇರಿದಂತೆ ಯಾವೊಬ್ಬ ಸಿಬ್ಬಂದಿಯು ಇರಲಿಲ್ಲ. ಹೀಗಾಗಿ ಈ ದುರಂತ ಸಂಭವಿಸಿದೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು ಬಾಲಕನ ಮೃತದೇಹ ಅತ್ತಿಬೆಲೆ ಆಕ್ಸ್‌ಫರ್ಡ್ ಆಸ್ಪತ್ರೆಗೆ ರವಾನಿಸಲಾಗಿದೆ. ಇನ್ನು ಘಟನೆ ಸಂಬಂಧ ಅತ್ತಿಬೆಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us