AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?

ಮಲೆನಾಡು ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ, ಕಾಡು ಪ್ರಾಣಿಗಳ ಹಾವಳಿ ಇದೆ. ಈ ನಡುವೆ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಹೇಗೆ ಕಾಲೇಜುಗಳಿಗೆ ಹೋಗ್ತಾರೆ ಎಂದು ಬೇಲೂರು ಶಾಸಕ ಲಿಂಗೇಶ್ ಪ್ರಸ್ತಾಪಿಸಿದ್ದಾರೆ.

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Sep 22, 2021 | 1:01 PM

Share

ಬೆಂಗಳೂರು: ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಇನ್ನೂ ಬಿಟ್ಟಿಲ್ಲ ಎಂದು ಬೇಲೂರು ಶಾಸಕ ಲಿಂಗೇಶ್ ಇಂದು ನಡೆದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಮಲೆನಾಡು ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ, ಕಾಡು ಪ್ರಾಣಿಗಳ ಹಾವಳಿ ಇದೆ. ಈ ನಡುವೆ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಹೇಗೆ ಕಾಲೇಜುಗಳಿಗೆ ಹೋಗ್ತಾರೆ ಎಂದು ಪ್ರಸ್ತಾಪಿಸಿದ್ದಾರೆ.

ಇನ್ನು ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಉತ್ತರಿಸಿದ್ದು, ಹಾಸನದಲ್ಲಿ 9 ಡಿಪೋಗಳಿವೆ. ಅಲ್ಲಿ ಒಟ್ಟು 696 ಬಸ್ಗಳಿವೆ. 59 ಬಸ್ಸುಗಳು ಓಡಾಡ್ತಿರಲಿಲ್ಲ. ಇದೀಗ ಅವುಗಳನ್ನು ಕೂಡಲೇ ಓಡಾಡಲು ಕ್ರಮ ವಹಿಸುತ್ತೇವೆ. ಮೊದಲ ಆದ್ಯತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಇಷ್ಟು ದಿನ ಕೊವಿಡ್ ಇರುವ ಕಾರಣ ನಿಲ್ಲಿಸಿರೋದು ಸತ್ಯ, ಇದೀಗ ಬಸ್ಸುಗಳು ಓಡಾಡೋ ರೀತಿ ಮಾಡ್ತೇವೆ ಎಂದರು.

ಇದೇ ವೇಳೆ ಸಾರಿಗೆ ನೌಕರರ ಮುಷ್ಕರ ಆಗದಂತೆ ಸಾರಿಗೆ ಇಲಾಖೆ ನೋಡಿಕೊಳ್ಳಬೇಕಿತ್ತು, ಮುಷ್ಕರ ಮಾಡಿದವರ ಮೇಲೆ ಕ್ರಮ ತೆಗೆದುಕೊಂಡಿದ್ದಕ್ಕೆ ಅವರ ಜೀವನ ದುಸ್ಥರ ಆಗಿದೆ, ಮುಗ್ಧರ ಮೇಲೆ ಕ್ರಮ ಕೈಗೊಳ್ಳಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪ ಮಾಡಿದ್ರು.

ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ಶ್ರೀರಾಮಲು, ಮುಷ್ಕರ ಸಮಯದಲ್ಲಿ 6644 ಸಾವಿರ ಪ್ರಕರಣ ದಾಖಲಾಗಿತ್ತು, ಕೆಲವರ ಸಸ್ಪೆಂಡ್, ಕೆಲವರ ವರ್ಗಾವಣೆ ಈ ರೀತಿ ದಾಖಲಾಗಿದೆ. ಅವರ ಯುನಿಯನ್ ಜೊತೆ, ಎಂಡಿಗಳ ಜೊತೆ ಮಾತಾಡಿದ್ದೇನೆ, ಬಿಎಂಟಿಸಿಯಲ್ಲಿ 3.500 ಪ್ರಕರಣ ದಾಖಲಾಗಿತ್ತು. 2100 ಕೇಸ್ ಬೇರೆ ಪ್ರಕರಣಗಳಲ್ಲಿ ದಾಖಲೆ ಆಗಿದೆ. ಆ ಕೇಸ್ ವಾಪಸ್ ಪಡೆಯುವ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಚಾಣಕ್ಯ ವಿವಿ ವಿಧೇಯಕ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ

ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್