AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?

ಮಲೆನಾಡು ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ, ಕಾಡು ಪ್ರಾಣಿಗಳ ಹಾವಳಿ ಇದೆ. ಈ ನಡುವೆ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಹೇಗೆ ಕಾಲೇಜುಗಳಿಗೆ ಹೋಗ್ತಾರೆ ಎಂದು ಬೇಲೂರು ಶಾಸಕ ಲಿಂಗೇಶ್ ಪ್ರಸ್ತಾಪಿಸಿದ್ದಾರೆ.

ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಬಿಟ್ಟಿಲ್ಲ ವಿಧಾನಸಭೆಯಲ್ಲಿ ಬೇಲೂರು ಶಾಸಕ ಪ್ರಸ್ತಾಪ, ಇದಕ್ಕೆ ಸಾರಿಗೆ ಸಚಿವರು ನೀಡಿದ ಉತ್ತರ ಏನು?
ಸಾಂದರ್ಭಿಕ ಚಿತ್ರ
TV9 Web
| Updated By: ಆಯೇಷಾ ಬಾನು|

Updated on: Sep 22, 2021 | 1:01 PM

Share

ಬೆಂಗಳೂರು: ಶಾಲಾ ಕಾಲೇಜು ಪ್ರಾರಂಭ ಆದರೂ ಬಸ್ಗಳನ್ನು ಇನ್ನೂ ಬಿಟ್ಟಿಲ್ಲ ಎಂದು ಬೇಲೂರು ಶಾಸಕ ಲಿಂಗೇಶ್ ಇಂದು ನಡೆದ ವಿಧಾನಸಭೆಯ ಶೂನ್ಯ ವೇಳೆಯಲ್ಲಿ ಪ್ರಸ್ತಾಪಿಸಿದ್ದಾರೆ. ಮಲೆನಾಡು ಭಾಗದಲ್ಲಿ ವಿದ್ಯಾರ್ಥಿಗಳಿಗೆ ತೊಂದರೆ ಆಗ್ತಿದೆ, ಕಾಡು ಪ್ರಾಣಿಗಳ ಹಾವಳಿ ಇದೆ. ಈ ನಡುವೆ ವಿದ್ಯಾರ್ಥಿಗಳು ಬಸ್ಗಳಿಲ್ಲದೆ ಹೇಗೆ ಕಾಲೇಜುಗಳಿಗೆ ಹೋಗ್ತಾರೆ ಎಂದು ಪ್ರಸ್ತಾಪಿಸಿದ್ದಾರೆ.

ಇನ್ನು ಇದಕ್ಕೆ ಸಾರಿಗೆ ಸಚಿವ ಶ್ರೀರಾಮುಲು ಉತ್ತರಿಸಿದ್ದು, ಹಾಸನದಲ್ಲಿ 9 ಡಿಪೋಗಳಿವೆ. ಅಲ್ಲಿ ಒಟ್ಟು 696 ಬಸ್ಗಳಿವೆ. 59 ಬಸ್ಸುಗಳು ಓಡಾಡ್ತಿರಲಿಲ್ಲ. ಇದೀಗ ಅವುಗಳನ್ನು ಕೂಡಲೇ ಓಡಾಡಲು ಕ್ರಮ ವಹಿಸುತ್ತೇವೆ. ಮೊದಲ ಆದ್ಯತೆ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ಇಷ್ಟು ದಿನ ಕೊವಿಡ್ ಇರುವ ಕಾರಣ ನಿಲ್ಲಿಸಿರೋದು ಸತ್ಯ, ಇದೀಗ ಬಸ್ಸುಗಳು ಓಡಾಡೋ ರೀತಿ ಮಾಡ್ತೇವೆ ಎಂದರು.

ಇದೇ ವೇಳೆ ಸಾರಿಗೆ ನೌಕರರ ಮುಷ್ಕರ ಆಗದಂತೆ ಸಾರಿಗೆ ಇಲಾಖೆ ನೋಡಿಕೊಳ್ಳಬೇಕಿತ್ತು, ಮುಷ್ಕರ ಮಾಡಿದವರ ಮೇಲೆ ಕ್ರಮ ತೆಗೆದುಕೊಂಡಿದ್ದಕ್ಕೆ ಅವರ ಜೀವನ ದುಸ್ಥರ ಆಗಿದೆ, ಮುಗ್ಧರ ಮೇಲೆ ಕ್ರಮ ಕೈಗೊಳ್ಳಬಾರದು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಸ್ತಾಪ ಮಾಡಿದ್ರು.

ಇದಕ್ಕೆ ಉತ್ತರಿಸಿದ ಸಾರಿಗೆ ಸಚಿವ ಶ್ರೀರಾಮಲು, ಮುಷ್ಕರ ಸಮಯದಲ್ಲಿ 6644 ಸಾವಿರ ಪ್ರಕರಣ ದಾಖಲಾಗಿತ್ತು, ಕೆಲವರ ಸಸ್ಪೆಂಡ್, ಕೆಲವರ ವರ್ಗಾವಣೆ ಈ ರೀತಿ ದಾಖಲಾಗಿದೆ. ಅವರ ಯುನಿಯನ್ ಜೊತೆ, ಎಂಡಿಗಳ ಜೊತೆ ಮಾತಾಡಿದ್ದೇನೆ, ಬಿಎಂಟಿಸಿಯಲ್ಲಿ 3.500 ಪ್ರಕರಣ ದಾಖಲಾಗಿತ್ತು. 2100 ಕೇಸ್ ಬೇರೆ ಪ್ರಕರಣಗಳಲ್ಲಿ ದಾಖಲೆ ಆಗಿದೆ. ಆ ಕೇಸ್ ವಾಪಸ್ ಪಡೆಯುವ ಕೆಲಸ ಮಾಡುತ್ತೇವೆ ಎಂದರು.

ಇದನ್ನೂ ಓದಿ: ವಿಧಾನಸಭೆಯಲ್ಲಿ ಚಾಣಕ್ಯ ವಿವಿ ವಿಧೇಯಕ ಅಂಗೀಕಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರೋಧ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ