AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಾಲೆ ಆರಂಭದ ಬೆನ್ನಲ್ಲೇ ಶುರುವಾಯ್ತು ಫೀಸ್ ಫೈಟ್, ಗೊಂದಲದಲ್ಲಿ ಪೋಷಕರು

ಸೆಪ್ಟೆಂಬರ್‌ 6ರಿಂದ ರಾಜ್ಯದಲ್ಲಿ ಶಾಲೆಗಳು ತೆರೆಯಲಿದ್ದು 6, 7, 8ನೇ ತರಗತಿಗಳು ಶುರು ಆಗಲಿವೆ. ಇದರ ಜೊತೆಗೆ ಖಾಸಗಿ ಶಾಲೆಗಳಿಂದ ಫೀಸ್ ಫೈಟ್ ಶುರುವಾಗಿದೆ.

ಶಾಲೆ ಆರಂಭದ ಬೆನ್ನಲ್ಲೇ ಶುರುವಾಯ್ತು ಫೀಸ್ ಫೈಟ್, ಗೊಂದಲದಲ್ಲಿ ಪೋಷಕರು
ಶಾಲಾ ಕೊಠಡಿಗಳನ್ನು ಸ್ಯಾನಿಟೈಜ್​ ಮಾಡುತ್ತಿರುವ ಸಿಬ್ಬಂದಿ
TV9 Web
| Edited By: |

Updated on: Sep 01, 2021 | 7:36 AM

Share

ಬೆಂಗಳೂರು: ಮಹಾಮಾರಿ ಕೊರೊನಾದಿಂದ ಬಂದ್ ಆಗಿದ್ದ ಶಾಲೆಗಳು ಕೊನೆಗೂ ತೆರೆಯುತ್ತಿವೆ. ಶಾಲೆ ಆರಂಭಕ್ಕೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಆದ್ರೆ ಇದರ ಬೆನ್ನಲ್ಲೇ ಫೀಸ್ ಫೈಟ್ ಶುರುವಾಗಿದೆ. ಸೆಪ್ಟೆಂಬರ್‌ 6ರಿಂದ ರಾಜ್ಯದಲ್ಲಿ ಶಾಲೆಗಳು ತೆರೆಯಲಿದ್ದು 6, 7, 8ನೇ ತರಗತಿಗಳು ಶುರು ಆಗಲಿವೆ. ಇದರ ಜೊತೆಗೆ ಖಾಸಗಿ ಶಾಲೆಗಳಿಂದ ಫೀಸ್ ಫೈಟ್ ಶುರುವಾಗಿದೆ.

ಶಾಲೆಗೆ ಮಕ್ಕಳು ಎಂಟ್ರಿಯಾಗುತ್ತಿದ್ದಂತೆ ಶುಲ್ಕ ಸಮರ ಶುರುವಾಗಿದೆ. ಕಳೆದ ವರ್ಷ 70% ಫೀಸ್ ಕಟ್ಬೇಕು ಅಂತಾ ಸರ್ಕಾರ ಹೇಳಿತ್ತು. ಆದ್ರೆ ಇವಾಗ ಫೀಸ್ ಕಡಿತ ವಿಚಾರ ಕೋರ್ಟ್ ನಲ್ಲಿದೆ. ಸರ್ಕಾರ ಹಾಗೂ ಶಿಕ್ಷಣ ಸಚಿವರು ಪೀಸ್ ವಿಚಾರ ಕೋರ್ಟ್ ನಲ್ಲಿದೆ ಅಂತಿದ್ದಾರೆ. ಕೋರ್ಟ್ ಹೆಗಲಿಗೆ ಹಾಕಿ ಕೈ ತೊಳೆದುಕೊಳ್ಳುತ್ತಿದ್ದಾರೆ. ಹೀಗಾಗಿ ಖಾಸಗಿ ಶಾಲೆಗಳು ಫುಲ್ ಫೀಸ್ಗೆ ಮುಂದಾಗಿವೆ. ಮಕ್ಕಳ ಶಾಲೆಗಳ ಎಂಟ್ರಿಗೂ ಮೊದಲೆ ಫೀಸ್ ಡಿಮ್ಯಾಂಡ್ ಶುರುವಾಗಿದೆ.

ಬಾಕಿ ಇರುವ ಹಾಗೂ ಪ್ರಸ್ತುತ ಸಾಲಿನ ಫೀಸ್ ಕಟ್ಟುವಂತೆ ಒತ್ತಡ ಹಾಕುತ್ತಿವೆ. ಅಲ್ಲದೇ ಕಳೆದ ವರ್ಷಕ್ಕಿಂತ ಈ ವರ್ಷ ಫೀಸ್ ಜಾಸ್ತಿ ಮಾಡಿದ್ದಾರೆ. ಪೋಷಕರು ಎಷ್ಟು ಫೀಸ್ ಕಟ್ಟಬೇಕು ಅಂತಾ ಅರ್ಥವಾಗುತ್ತಿಲ್ಲ. ಎಷ್ಟು ಫೀಸ್ ಕಟ್ಟಬೇಕು ಅನ್ನೊ ಗೊಂದಲದಲ್ಲಿ ಪೋಷಕರಿದ್ದೇವೆ ಎಂದು ವಿದ್ಯಾರ್ಥಿಗಳ ಪೋಷಕರು ಅಳಲು ತೋಡಿಕೊಂಡಿದ್ದಾರೆ.

ನಾಳೆಯಿಂದ ಶಾಲೆಗಳು ಆರಂಭ ನಾಳೆಯಿಂದ ಮಕ್ಕಳ ಶಾಲಾ ದಾಖಲಾತಿಯನ್ನು ಪ್ರಾರಂಭಿಸಿ, ಆಗಸ್ಟ್ 31ರ ಒಳಗೆ ದಾಖಲಾತಿ ಮುಕ್ತಾಯಗೊಳಿಸಬೇಕು. ಲಾಕ್​ಡೌನ್​ ಇರುವ ಜಿಲ್ಲೆಗಳಲ್ಲಿ ಪಾಸ್ ಪಡೆದು ಶಾಲೆಗೆ ಬರಬೇಕು. ಈಗಾಗಲೇ ಒಂದು ಶೈಕ್ಷಣಿಕ ವರ್ಷ ತಡವಾಗಿದೆ. ಶಿಕ್ಷಕರು ಅನ್ಯ ಕಾರಣ ನೀಡುವಂತಿಲ್ಲ. ಕೊವಿಡ್ ಸಮಯದಲ್ಲಿ ವೈದ್ಯರು ಪೌರಕಾರ್ಮಿಕರ ಮಾದರಿಯಲ್ಲಿ ಶಿಕ್ಷಕರು ಕೆಲಸ ಮಾಡಬೇಕು ಎಂದು ಅನ್ಬುಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ವಿದ್ಯಾರ್ಥಿಗಳ ಶೈಕ್ಷಣಿಕ ಜೀವನದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಹೀಗಾಗಿ ಶೈಕ್ಷಣಿಕ ವರ್ಷ ಮೂಂದುಡುವ ಪ್ರಶ್ನೆಯೇ ಇಲ್ಲ. ಕೊವಿಡ್ ಹಿನ್ನೆಲೆ ತರಗತಿಗಳನ್ನು ಭೌತಿಕವಾಗಿ ನಡೆಸಲು ಸಾಧ್ಯವಾಗದೆ ಇದ್ದರೆ ಪರ್ಯಾಯವಾಗಿ ಆನ್​ಲೈನ್​, ದೂರದರ್ಶನ, ಅಂತರ್ಜಾಲ ಕಲಿಕೆಯನ್ನು ನೀಡಬೇಕಾಗುತ್ತದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಅನ್ಬುಕುಮಾರ್ ಟಿವಿ9ಗೆ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶುಲ್ಕದ ಲೆಕ್ಕದಲ್ಲಿ ಶಾಲೆ ಕಳ್ಳಾಟ; ಫುಲ್ ಫೀಸ್ ಕಟ್ಟಿದ ಸಿಬಿಎಸ್​ಇ 10ನೇ ತರಗತಿ ವಿದ್ಯಾರ್ಥಿಗಳಿಗೆ ಫುಲ್ ಮಾರ್ಕ್ಸ್

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ