AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಂಬರುವ ಆಸೆಂಬ್ಲಿ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಸ್​ಡಿಪಿಐ!

ಮುಂಬರುವ ವಿಧಾನಸಭಾ ಚುನಾವಣೆಗೆ ಎಸ್​ಡಿಪಿಐ ಪಕ್ಷ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಮುಂಬರುವ ಆಸೆಂಬ್ಲಿ ಚುನಾವಣೆಗೆ ಮೊದಲ ಪಟ್ಟಿ ಬಿಡುಗಡೆ ಮಾಡಿದ ಎಸ್​ಡಿಪಿಐ!
ಎಸ್‌ಡಿಪಿಐ
TV9 Web
| Updated By: ಆಯೇಷಾ ಬಾನು|

Updated on:Jan 07, 2023 | 1:30 PM

Share

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಗೆ ಎಸ್​ಡಿಪಿಐ ಪಕ್ಷ ತನ್ನ ಮೊದಲ ಪಟ್ಟಿ ಬಿಡುಗಡೆ ಮಾಡಿದೆ. ಈ ಬಗ್ಗೆ ಮಾತನಾಡಿದ ಎಸ್​ಡಿಪಿಐನ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, 2023ರ ಚುನಾವಣೆಗೆ 10 ಮಂದಿಯ ಪ್ರಥಮ ಹಂತದ ಪಟ್ಟಿಯನ್ನ ಬಿಡುಗಡೆ ಮಾಡಿದ್ದೇವೆ. ಒಟ್ಟು 54 ವಿಧಾನಸಭಾ ಕ್ಷೇತ್ರದಲ್ಲಿ ಇವತ್ತು ಪ್ರಥಮ ಹಂತದಲ್ಲಿ ಕ್ಷೇತ್ರ ಅಂತಿಮಗೊಳಿಸಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

ನಮ್ಮ ಅಧಿಕಾರವನ್ನು ಮೆರೆಯಲು ರಾಜಕಾರಣ ಮಾಡಲ್ಲ. ನಮ್ಮದು ಜನಪರ ರಾಜಕಾರಣ. ದೇಶದ ಹಿತಾಸಕ್ತಿಯೇ ನಮ್ಮ ರಾಜಕಾರಣ. ನಮ್ಮ ಕರ್ನಾಟಕದಲ್ಲಿ ಇದುವರೆಗೂ 300 ಜನಪ್ರತಿನಿಧಿಗಳು ಯಾವುದೇ ಭ್ರಷ್ಟಾಚಾರವಿಲ್ಲದೇ ಅಧಿಕಾರ ಮಾಡಿದ್ದಾರೆ. ಮುಂದಿನ ದಿನಗಳಲ್ಲೂ ಜನಪರ ಸೇವೆಯನ್ನ ನಾವೂ ಮಾಡುತ್ತೇವೆ. ಅದಕ್ಕೆ ನೀವೂ ಅನುಕೂಲ ಮಾಡಬೇಕು ಅಂತಾ 7 ಕೋಟಿ ಜನರಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

2023ರ ಚುನಾವಣೆಗೆ ಎಸ್​ಡಿಪಿಐ 10 ಮಂದಿಯ ಪ್ರಥಮ ಹಂತದ ಪಟ್ಟಿ ಹೀಗಿದೆ

  • ನರಸಿಂಹ ರಾಜ- ಅಬ್ದುಲ್ ಮಜೀದ್
  • ಪುಲಕೇಶಿ ನಗರ- ಭಾಸ್ಕರ್ ಪ್ರಸಾದ್.
  • ಸರ್ವಜ್ಞ ನಗರ – ಅಬ್ದುಲ್ ಹನ್ನಾನ್
  • ಬಂಟ್ವಾಳ- ಇಲ್ಯಾಸ್ ಮಹಮ್ಮದ್
  • ಮೂಡಬಿದರೆ- ಅಲ್ಪಾನ್ಸೋ ಫ್ರಾಂಕೋ
  • ಬೆಳ್ತಂಗಡಿ-ಅಕ್ಬರ್ ಬೆಳ್ತಂಗಡಿ.
  • ಕಾಪು -ಹನೀಶ್ ಮುಳೂರು
  • ದಾವಣಗೆರೆ ದಕ್ಷಿಣ -ಇಸ್ಮಾಯಿಲ್ ಝಬಿಯುಲ್ಲಾ
  • ಚಿತ್ರದುರ್ಗ ಶ್ರೀನಿವಾಸ್ ಬಾಳೆಕಾಯಿ
  • ವಿಜಯನಗರ- ನಜೀರ್ ಖಾನ್

ಕೆಜಿಎಫ್​ ಬಾಬುರನ್ನು ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತಿರಾ?

ಕಾಂಗ್ರೆಸ್​ನಿಂದ ಕೆಜಿಎಫ್ ಬಾಬು ಉಚ್ಛಾಟನೆಯಾಗಿದ್ದಾರೆ. ನಿಮ್ಮ ಪಕ್ಷಕ್ಕೆ ಬಂದ್ರೆ ಅವಕಾಶ ಕೊಡ್ತೀರಾ ಎಂಬ ಪ್ರಶ್ನೆಗೆ ಎಸ್​ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ಪಕ್ಷಕ್ಕೆ ಒಂದು ಸಿದ್ದಾಂತವಿದೆ, ಶಿಸ್ತಿದೆ. ರೀತಿ ನೀತಿಗಳಿವೆ. ನಮ್ಮದು ಭ್ರಷ್ಟಾಚಾರ ಮುಕ್ತ ಪಕ್ಷ. ನಮ್ಮ ಪಕ್ಷದ ಸಿದ್ದಾಂತವನ್ನ ಒಪ್ಪಿ, ಜನಪರ ಕಾಳಜಿಯಿಂದ ಬರುವವರಿಗೆ ನಮ್ಮ ಪಕ್ಷದಲ್ಲಿ ಅವಕಾಶವಿದೆ ಎಂದರು.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:30 pm, Sat, 7 January 23

ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ಟೀಮ್ ಇಂಡಿಯಾ ಆಟಗಾರರ ಶತಕ ತಪ್ಪಿಸಲು ಮುಂದಾಗಿದ್ದ ಸ್ಟೋಕ್ಸ್
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ವರಮಹಾಲಕ್ಷ್ಮೀ ಹಬ್ಬ ಆಚರಣೆ ದಿನಾಂಕ ಯಾವಾಗ? ಆಚರಣೆ ಹೇಗೆ , ಫಲಗಳೇನು?
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಇಂದು ವಿನಾಯಕಿ ಚತುರ್ಥಿ: ದ್ವಾದಶ ರಾಶಿ ಭವಿಷ್ಯ ಹೇಗಿದೆ ನೋಡಿ
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ಪ್ರಥಮ್​ ಮೇಲೆ ಅಟ್ಯಾಕ್: ಅಲ್ಲೇ ಇದ್ದರು ರಕ್ಷಕ್ ಸುಮ್ಮನಿದ್ದಿದ್ದು ಏಕೆ?
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ರೌಡಿಗಳ ಜೊತೆಗೆ ರಕ್ಷಕ್​ಗೆ ಏನು ಕೆಲಸ: ಪ್ರಥಮ್ ಆಕ್ರೋಶ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
ಚಡ್ಡಿಯಲ್ಲಿ ಬಂದು ಒಣಗಲು ಹಾಕಿದ್ದ ಬಟ್ಟೆಗಳನ್ನು ಕದ್ದು ಓಡಿದ ಭೂಪ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
‘ಸು ಫ್ರಮ್ ಸೋ’ ನಿರ್ದೇಶಕರಿಗೆ ತಾಯಿಯಿಂದ ಸಿಕ್ತು ಬೆಸ್ಟ್ ಪ್ರತಿಕ್ರಿಯೆ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಬಿಳಿ ಪಂಚೆ ಧರಿಸಿ ಚೋಳಪುರಂ ದೇವಸ್ಥಾನಕ್ಕೆ ಭೇಟಿ ಕೊಟ್ಟ ಪ್ರಧಾನಿ ಮೋದಿ
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಮೈಸೂರಿನಲ್ಲೇ ಡ್ರಗ್ಸ್​ ತಯಾರಿಕಾ ಘಟಕ: ಸ್ಫೋಟಕ ಅಂಶ ಬಾಯ್ಬಿಟ್ಟ ಪೆಡ್ಲರ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್
ಆರಂಭಿಕನಾಗಿ ಕಣಕ್ಕಿಳಿದು 6 ಸಿಕ್ಸ್ ಸಿಡಿಸಿದ ಗ್ಲೆನ್ ಮ್ಯಾಕ್ಸ್​ವೆಲ್