AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿಜಾಬ್ ಗಲಾಟೆಯ ಹಿಂದೆ SDPI ಇದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಪೂರ್ಣ ಮಾಹಿತಿ ನೀಡಿದ ಕರಾವಳಿ ಕಾಂಗ್ರೆಸ್

ಉಡುಪಿ ಮತ್ತು ಕುಂದಾಪುರದಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆಯ ಹಿಂದೆ ಎಸ್​ಡಿಪಿಐ ಇದೆ. ಎಸ್​ಡಿಪಿಐ ಕಾರ್ಯಕರ್ತಎ ಒತ್ತಡಕ್ಕೆ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇಲ್ಲಿನ ಸ್ಥಳೀಯ ಕಾಂಗ್ರೆಸ್​ ಮುಖಂಡರು ತಿಳಿಸಿದ್ದಾರೆ.

ಹಿಜಾಬ್ ಗಲಾಟೆಯ ಹಿಂದೆ SDPI ಇದೆ: ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್​ಗೆ ಸಂಪೂರ್ಣ ಮಾಹಿತಿ ನೀಡಿದ ಕರಾವಳಿ ಕಾಂಗ್ರೆಸ್
ಹಿಜಾಬ್ ಧರಿಸಿರುವ ವಿದ್ಯಾರ್ಥಿನಿಯರು
TV9 Web
| Edited By: |

Updated on:Feb 05, 2022 | 9:38 AM

Share

ಬೆಂಗಳೂರು: ಹಿಜಾಬ್ ಗಲಾಟೆ ವಿಚಾರವಾಗಿ ರಾಜ್ಯದಾದ್ಯಂತ ವಿವಾದ ಸೃಷ್ಟಿಯಾಗಿದೆ. ಕಾಲೇಜಿಗೆ ಹಿಜಾಬ್(Hijab)​ ಧರಿಸಲು ಅವಕಾಶ ನೀಡಿ ಎಂದು ಮುಸ್ಲಿಂ ವಿದ್ಯಾರ್ಥಿನಿಯರು(Students) ಮನವಿ ಮಾಡಿಕೊಳ್ಳುತ್ತಿದ್ದರೆ, ಇತ್ತ ಹಿಂದೂ ವಿದ್ಯಾರ್ಥಿಗಳು ಕೆಸರಿ ಶಾಲು ಧರಿಸಿ ಕಾಲೇಜುಗಳಿಗೆ ಆಗಮಿಸುತ್ತಿದ್ದಾರೆ. ಈ ವಿವಾದ ಸದ್ಯ ರಾಜಕೀಯ ವಲಯದಲ್ಲೂ ಹೆಚ್ಚು ಸದ್ದು ಮಾಡುತ್ತಿದೆ. ಹೀಗಿರುವಾಗಲೇ ಕರಾವಳಿ ಭಾಗದ ಸ್ಥಳಿಯ ಕಾಂಗ್ರೆಸ್(Congress) ‌ಮುಖಂಡರಿಂದ ಈ ಬಗ್ಗೆ ಮಾಹಿತಿ ಪಡೆದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಈ ಗಲಾಟೆಗೆ ಎಸ್​ಡಿಪಿಐ(SDPI) ಕಾರಣ ಎಂದು ತಿಳಿಸಿದ್ದಾರೆ. ಉಡುಪಿ ಮತ್ತು ಕುಂದಾಪುರದಲ್ಲಿ ನಡೆಯುತ್ತಿರುವ ಹಿಜಾಬ್ ಗಲಾಟೆಯ ಹಿಂದೆ ಎಸ್​ಡಿಪಿಐ ಇದೆ. ಎಸ್​ಡಿಪಿಐ ಕಾರ್ಯಕರ್ತಎ ಒತ್ತಡಕ್ಕೆ ವಿಧ್ಯಾರ್ಥಿಗಳು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಇಲ್ಲಿನ ಸ್ಥಳೀಯ ಕಾಂಗ್ರೆಸ್​ ಮುಖಂಡರು ತಿಳಿಸಿದ್ದಾರೆ.

15 ದಿನಗಳ ಹಿಂದೆ ಎಸ್​ಡಿಪಿಐ ಬೆಂಬಲಿತ ವಿದ್ಯಾರ್ಥಿಗಳು ಮ್ಯಾನೇಜ್ಮೆಂಟ್ ಜೊತೆ ಕೆಲ ವೈಯುಕ್ತಿಕ ವಿಚಾರಕ್ಕೆ ಗದ್ದಲ ಮಾಡಿಕೊಂಡಿದ್ದರು.ಈ ಸಂದರ್ಭದಲ್ಲಿ ಎಸ್​ಡಿಪಿಐ ವಿಧ್ಯಾರ್ಥಿಗಳ ಸಂಘ ದುಡ್ಡಿಗೆ ಕೂಡ ಬೇಡಿಕೆ ಇಟ್ಟಿತ್ತು ಎಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ.

ಬೇಡಿಕೆ ತಿರಸ್ಕಾರ ಮಾಡಿದ ಹಿನ್ನೆಲೆ ಮುಂದೆ ನಿಮಗೆ ಬುದ್ದಿ ಕಳಿಸುತ್ತೇವೆಂದು ಹೇಳಿ ತೆರಳಿದ್ದ ಎಸ್​ಡಿಪಿಐ ವಿಧ್ಯಾರ್ಥಿ ಸಂಘಟನೆಯ ಮುಖಂಡರು, 15 ದಿನಗಳಲ್ಲಿ ಹಿಜಾಬ್ ಗಲಾಟೆ ಮಾಡಿದ್ದಾರೆ. ವಿಧ್ಯಾರ್ಥಿನಿಯರನ್ನು ಎಸ್​ಡಿಪಿಐ ಸಂಘಟನೆ ಎತ್ತಿಕಟ್ಟಿದೆ ಎಂದು ಉಡುಪಿ ಜಿಲ್ಲೆ ಕಾಂಗ್ರೆಸ್ ನಾಯಕರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಮಾಹಿತಿ ನೀಡಿದ್ದಾರೆ.

ಸರ್ಕಾರಿ ಕಾಲೇಜುಗಳಲ್ಲಿ ಹಿಜಾಬ್, ಕೇಸರಿ ಶಾಲು ವಿವಾದ: ಸಿಎಂಗೆ ಪತ್ರ ಬರೆದ ಹಿಂದೂ ಜಾಗರಣ ವೇದಿಕೆ

ದಿನದಿಂದ ದಿನಕ್ಕೆ ಹಿಜಾಬ್ ಮತ್ತು ಕೇಸರಿ ಶಾಲು ವಿವಾದ ತಾರಕಕ್ಕೇರುತ್ತಿದೆ. ಹೀಗಿರುವಾಗಲೇ ಸಮಾನತೆಯನ್ನು ಬೋಧಿಸುವ ಶಾಲಾ-ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯ ಮಾಡುವಂತೆ ಹಿಂದೂ ಜಾಗರಣ ವೇದಿಕೆ ಒತ್ತಾಯ ಮಾಡಿದೆ. ಸಿಎಂ ಬಸವರಾಜ ಬೊಮ್ಮಾಯಿಗೆ ಪತ್ರ ಬರೆದ ಎಲ್ಲಾ ಜಿಲ್ಲಾ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು, ಜಿಲ್ಲಾಧಿಕಾರಿಗಳ ಮೂಲಕ ಸಿಎಂಗೆ ಮನವಿ ಮಾಡಿದ್ದಾರೆ.

ಹಿಜಾಬ್​ಗೆ ವಿರುದ್ಧವಾಗಿ ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಹಾಕುತ್ತಿದ್ದಾರೆ. ಇದು ಮುಂದಿನ ದಿನಗಳಲ್ಲಿ ಎಲ್ಲಾ ಕೋಮಿನ ಸಂಘರ್ಷಕ್ಕೆ ಕಾರಣವಾಗುತ್ತದೆ. ಇದರಿಂದ ಶೈಕ್ಷಣಿಕ ವಾತವರಣ ಸಂಪೂರ್ಣ ಹದಗೆಡುತ್ತದೆ. ಹೀಗಾಗಿ ಸರ್ಕಾರ ಶಿಕ್ಷಣ ಇಲಾಖೆ ಗೊಂದಲಕಾರಿ ಕ್ರಮಗಳಿಗೆ ಅವಕಾಶ ನೀಡಬಾರದು. ಒಂದು ವೇಳೆ ಸರ್ಕಾರ ಹಾಗೂ ಶಿಕ್ಷಣ ಇಲಾಖೆ ಅವಕಾಶ ನೀಡಿದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹಿಂದೂ ಜಾಗರಣ ವೇದಿಕೆ ಸಿಎಂಗೆ ಅಗ್ರಹಪತ್ರ ಬರೆದಿದೆ.

ಇದನ್ನೂ ಓದಿ:

Hijab Controversy: ಉಡುಪಿಯಲ್ಲಿ ಹಿಜಾಬ್ ವಿವಾದ: ಹಿಜಾಬ್​ ಬೇಕೆನ್ನುವವರಿಗೆ ಆನ್​ಲೈನ್ ಕ್ಲಾಸ್​ಗೆ ಅವಕಾಶ ನೀಡಲು ನಿರ್ಧಾರ

ಕರಾವಳಿಯಿಂದ ಬೆಳಗಾವಿ ಜಿಲ್ಲೆಗೆ ವ್ಯಾಪಿಸಿದ ಹಿಜಾಬ್ ವಿವಾದ; ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದ ಪಿಯು ವಿದ್ಯಾರ್ಥಿಗಳು

Published On - 9:09 am, Sat, 5 February 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ