Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೊರೊನಾ ವ್ಯಾಕ್ಸಿನೇಷನ್ ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಮುಂದೆ ಬರುತ್ತಿಲ್ಲ.

ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ
ಸಾಂಕೇತಿಕ ಚಿತ್ರ
Follow us
TV9 Web
| Updated By: ಆಯೇಷಾ ಬಾನು

Updated on: Nov 12, 2021 | 10:08 AM

ಬೆಂಗಳೂರು: ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಸದ್ಯ ಇಳಿ ಮುಖ ಕಂಡಿದೆ. ಇದರಿಂದ ಜನ ಮಹಾಮಾರಿಯನ್ನು ಸಂಪೂರ್ಣವಾಗಿ ಮರೆತು ಮುಂದೆ ಹೆಜ್ಜೆ ಹಾಕುತ್ತಿದ್ದಾರೆ. ಇದರ ನಡುವೆ ಕೊರೊನಾ ಇಲ್ಲವಲ್ಲ ಎಂದು 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ತಾಂತ್ರಿಕ ಸಲಹಾ ಸಮಿತಿ ಸರ್ಕಾರದ ಮುಂದೆ ವ್ಯಾಕ್ಸಿನೇಷನ್‌ಗೆ ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೊರೊನಾ ವ್ಯಾಕ್ಸಿನೇಷನ್ ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಮುಂದೆ ಬರುತ್ತಿಲ್ಲ. 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ. ಸದ್ಯ ಈ ಸಮಸ್ಯೆಯನ್ನು ಬಗೆ ಹರಿಸಲು ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಿಂಗಾಪುರ ಮಾಡೆಲ್ ಪ್ರಸ್ತಾಪಿಸಿದ್ದಾರೆ.

ವ್ಯಾಕ್ಸಿನೇಷನ್‌ ರೀಚ್ ಆಗಬೇಕು ಅಂದರೆ ಈ ಮಾಡೆಲ್ ಅನುಸರಿಸಿ ಅಂತಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಯಾರು ಲಸಿಕೆ ಪಡೆಯುವುದಿಲ್ಲವೂ ಅವರಿಗೆ ಉಚಿತ ಚಿಕಿತ್ಸೆ ಇಲ್ಲ ಎಂದು ಶಿಫಾರಸ್ಸು ಮಾಡಿದೆ. ಲಸಿಕೆ ಪಡೆಯದವರಿಗೆ ಸಿಂಗಾಪುರದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲ್ಲ. ಅದೇ ಮಾದರಿಯನ್ನು ಇಲ್ಲೂ ಅನುಸರಿಸಿ ಎಂದು ಪ್ರಸ್ತಾಪಿಸಿದೆ.

ಇನ್ನು ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಹಿಂದೇಟು ಹಾಕುತ್ತಿದ್ದಾರೆ. ರಾಜ್ಯದಲ್ಲಿ 45,14,612 ಜನ ವ್ಯಾಕ್ಸಿನ್ ಪಡೆದಿಲ್ಲ. ಸೆಕೆಂಡ್ ಡೋಸ್ ವ್ಯಾಕ್ಸಿನೇಷನ್‌ ನೀಡುವ ವೇಗಕ್ಕೆ ಹಿನ್ನಡೆಯಾಗಿದೆ. ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್, ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು ಜನ 2ನೇ ಡೋಸ್ ಪಡೆದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೂ ವ್ಯಾಕ್ಸಿನ್ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. 2ನೇ ಡೋಸ್ಗಾಗಿ ಕರೆ ಮಾಡಿದ್ರೆ ಬಹುತೇಕ ನಂ. ಸ್ವಿಚ್ ಆಫ್ ಮಾಡಲಾಗುತ್ತಿದೆ. 2ನೇ ಡೋಸ್ ವ್ಯಾಕ್ಸಿನೇಷನ್‌ ಆರೋಗ್ಯ ಇಲಾಖೆಗೆ ಸವಾಲಾಗಿದೆ.

ಜಿಲ್ಲೆಯಲ್ಲಿ 2ನೇ ಡೋಸ್ ವ್ಯಾಕ್ಸಿನೇಷನ್‌ ಪಡೆಯದವರು ಬಿಬಿಎಂಪಿ -11,84,072 ಬೆಳಗಾವಿ -2,54,564 ಮೈಸೂರು -2,39,175 ಬೆಂಗಳೂರು ನಗರ -2,19,336 ಕಲಬುರಗಿ -1,72,111 ರಾಯಚೂರು -1,69,946 ಧಾರವಾಡ -1,69,599 ತುಮಕೂರು -1,66,934 ಬಳ್ಳಾರಿ -1,52,579 ದಾವಣಗೆರೆ -1,44,604 ಶಿವಮೊಗ್ಗ -1,40,677 ದಕ್ಷಿಣ ಕನ್ನಡ -1,22,511 ವಿಜಯಪುರ -1,23,792 ಮಂಡ್ಯ -1,09,024 ಬೆಂ. ಗ್ರಾಮಾಂತರ -1,08,330 ಬೀದರ್ -1,05,780 ಒಟ್ಟು= 45,14,612

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಮೊದಲ ಬಾರಿ ಶಾಸಕನಾಗಿರುವ ಧೀರಜ್ ಬಹಳಷ್ಟು ಅರ್ಥಮಾಡಿಕೊಳ್ಳಬೇಕಿದೆ: ಕೆಎಂಎಸ್
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಒತ್ತುವರಿ ತೆರವು ಕಾರ್ಯಾಚರಣೆಯಿಂದ ಕುಮಾರಸ್ವಾಮಿ ಭಯಗೊಂಡಿಲ್ಲ: ಮಂಜು
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಯಾದಗಿರಿ ಜಿಲ್ಲೆಯ ಜನ ಹನಿಹನಿ ನೀರಿಗಾಗಿ ಪರಿತಪಿಸುತ್ತಿದ್ದಾರೆ: ಶರಣಗೌಡ
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
ಗ್ಯಾರಂಟಿ ಯೋಜನೆಗಳ ಬಗ್ಗೆ ತನ್ನದೇನೂ ತಕರಾರಿಲ್ಲವೆಂದ ಶರಣಗೌಡ ಕಂದ್ಕೂರ್
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
Video: ಕೇಂದ್ರ ಸಚಿವರ ಜತೆ ರೈತ ಮುಖಂಡರ ಮಾತುಕತೆ
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಮಜಾ ಟಾಕೀಸ್​ಗೆ ಮಜಾ ಹೆಚ್ಚಿಸೋಕೆ ಬಂದ ಕ್ರಿಕೆಟ್ ಕಾಮೆಂಟೇಟರ್ಸ್
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ಬಿಜೆಪಿ ಯಾವತ್ತಿಗೂ ಮುಸ್ಲಿಂ ವಿರೋಧಿ ಪಕ್ಷ ಅಲ್ಲ: ವಿಜಯೇಂದ್ರ
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ದರ್ಶನ್ ಮಾದರಿ ಅನುಸರಿಸುವಂತೆ ಬೇರೆ ಸದಸ್ಯರನ್ನು ಕೋರಿದ ಖಾದರ್
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ
ಖಾಸಗಿ ಸಂಸ್ಥೆಯ ಸಿಬ್ಬಂದಿ ಇದ್ದ ವಾಹನಕ್ಕೆ ಬೆಂಕಿ, ನಾಲ್ಕು ಮಂದಿ ಸಜೀವ ದಹನ