AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೊರೊನಾ ವ್ಯಾಕ್ಸಿನೇಷನ್ ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಮುಂದೆ ಬರುತ್ತಿಲ್ಲ.

ಕೊರೊನಾ ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆಗೆ ಜನರು ಹಿಂದೇಟು, ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದ ತಾಂತ್ರಿಕ ಸಲಹಾ ಸಮಿತಿ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Nov 12, 2021 | 10:08 AM

Share

ಬೆಂಗಳೂರು: ಕೊರೊನಾ ವೈರಸ್ ಸೋಂಕಿತರ ಸಂಖ್ಯೆಯಲ್ಲಿ ಸದ್ಯ ಇಳಿ ಮುಖ ಕಂಡಿದೆ. ಇದರಿಂದ ಜನ ಮಹಾಮಾರಿಯನ್ನು ಸಂಪೂರ್ಣವಾಗಿ ಮರೆತು ಮುಂದೆ ಹೆಜ್ಜೆ ಹಾಕುತ್ತಿದ್ದಾರೆ. ಇದರ ನಡುವೆ ಕೊರೊನಾ ಇಲ್ಲವಲ್ಲ ಎಂದು 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ತಾಂತ್ರಿಕ ಸಲಹಾ ಸಮಿತಿ ಸರ್ಕಾರದ ಮುಂದೆ ವ್ಯಾಕ್ಸಿನೇಷನ್‌ಗೆ ಸಿಂಗಾಪುರ ಮಾಡೆಲ್ ಪ್ರಸ್ತಾಪ ಮಾಡಿದೆ.

ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆ ಬೆನ್ನಲ್ಲೇ 2ನೇ ಡೋಸ್ ಲಸಿಕೆ ಹಾಕಿಸಿಕೊಳ್ಳಲು ಜನರು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಕೊರೊನಾ ವ್ಯಾಕ್ಸಿನೇಷನ್ ಆರೋಗ್ಯ ಇಲಾಖೆಗೆ ತಲೆನೋವಾಗಿದೆ. ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಮುಂದೆ ಬರುತ್ತಿಲ್ಲ. 2ನೇ ಡೋಸ್ ಲಸಿಕೆ ಹಾಕಲು ಆರೋಗ್ಯ ಇಲಾಖೆ ಹರಸಾಹಸ ಪಡುತ್ತಿದೆ. ಸದ್ಯ ಈ ಸಮಸ್ಯೆಯನ್ನು ಬಗೆ ಹರಿಸಲು ತಾಂತ್ರಿಕ ಸಲಹಾ ಸಮಿತಿ ತಜ್ಞರು ಸಿಂಗಾಪುರ ಮಾಡೆಲ್ ಪ್ರಸ್ತಾಪಿಸಿದ್ದಾರೆ.

ವ್ಯಾಕ್ಸಿನೇಷನ್‌ ರೀಚ್ ಆಗಬೇಕು ಅಂದರೆ ಈ ಮಾಡೆಲ್ ಅನುಸರಿಸಿ ಅಂತಾ ತಾಂತ್ರಿಕ ಸಲಹಾ ಸಮಿತಿ ಶಿಫಾರಸ್ಸು ಮಾಡಿದೆ. ಯಾರು ಲಸಿಕೆ ಪಡೆಯುವುದಿಲ್ಲವೂ ಅವರಿಗೆ ಉಚಿತ ಚಿಕಿತ್ಸೆ ಇಲ್ಲ ಎಂದು ಶಿಫಾರಸ್ಸು ಮಾಡಿದೆ. ಲಸಿಕೆ ಪಡೆಯದವರಿಗೆ ಸಿಂಗಾಪುರದಲ್ಲಿ ಉಚಿತವಾಗಿ ಚಿಕಿತ್ಸೆ ನೀಡಲ್ಲ. ಅದೇ ಮಾದರಿಯನ್ನು ಇಲ್ಲೂ ಅನುಸರಿಸಿ ಎಂದು ಪ್ರಸ್ತಾಪಿಸಿದೆ.

ಇನ್ನು ಅವಧಿ ಮುಗಿದ್ರೂ ಸೆಕೆಂಡ್ ಡೋಸ್ ಪಡೆಯಲು ಜನ ಹಿಂದೇಟು ಹಾಕುತ್ತಿದ್ದಾರೆ. ರಾಜ್ಯದಲ್ಲಿ 45,14,612 ಜನ ವ್ಯಾಕ್ಸಿನ್ ಪಡೆದಿಲ್ಲ. ಸೆಕೆಂಡ್ ಡೋಸ್ ವ್ಯಾಕ್ಸಿನೇಷನ್‌ ನೀಡುವ ವೇಗಕ್ಕೆ ಹಿನ್ನಡೆಯಾಗಿದೆ. ಆರೋಗ್ಯ ಕಾರ್ಯಕರ್ತರು, ಫ್ರಂಟ್ ಲೈನ್ ವಾರಿಯರ್ಸ್, ಬಿಬಿಎಂಪಿ ವ್ಯಾಪ್ತಿಯಲ್ಲೇ ಹೆಚ್ಚು ಜನ 2ನೇ ಡೋಸ್ ಪಡೆದಿಲ್ಲ. ಉತ್ತರ ಕರ್ನಾಟಕ ಭಾಗದಲ್ಲೂ ವ್ಯಾಕ್ಸಿನ್ ಪಡೆಯಲು ಹಿಂದೇಟು ಹಾಕುತ್ತಿದ್ದಾರೆ. 2ನೇ ಡೋಸ್ಗಾಗಿ ಕರೆ ಮಾಡಿದ್ರೆ ಬಹುತೇಕ ನಂ. ಸ್ವಿಚ್ ಆಫ್ ಮಾಡಲಾಗುತ್ತಿದೆ. 2ನೇ ಡೋಸ್ ವ್ಯಾಕ್ಸಿನೇಷನ್‌ ಆರೋಗ್ಯ ಇಲಾಖೆಗೆ ಸವಾಲಾಗಿದೆ.

ಜಿಲ್ಲೆಯಲ್ಲಿ 2ನೇ ಡೋಸ್ ವ್ಯಾಕ್ಸಿನೇಷನ್‌ ಪಡೆಯದವರು ಬಿಬಿಎಂಪಿ -11,84,072 ಬೆಳಗಾವಿ -2,54,564 ಮೈಸೂರು -2,39,175 ಬೆಂಗಳೂರು ನಗರ -2,19,336 ಕಲಬುರಗಿ -1,72,111 ರಾಯಚೂರು -1,69,946 ಧಾರವಾಡ -1,69,599 ತುಮಕೂರು -1,66,934 ಬಳ್ಳಾರಿ -1,52,579 ದಾವಣಗೆರೆ -1,44,604 ಶಿವಮೊಗ್ಗ -1,40,677 ದಕ್ಷಿಣ ಕನ್ನಡ -1,22,511 ವಿಜಯಪುರ -1,23,792 ಮಂಡ್ಯ -1,09,024 ಬೆಂ. ಗ್ರಾಮಾಂತರ -1,08,330 ಬೀದರ್ -1,05,780 ಒಟ್ಟು= 45,14,612

ಇದನ್ನೂ ಓದಿ: ಕೊರೊನಾ ಲಸಿಕೆ ನೀಡಿಕೆಯಲ್ಲಿ ಹಿಂದುಳಿದ ಜಿಲ್ಲೆಗಳ ಮೇಲೆ ಪ್ರಧಾನಿ ಮೋದಿ ಕಣ್ಣು; ನವೆಂಬರ್​ 3ರಂದು ಪರಿಶೀಲನಾ ಸಭೆ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!