ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಸರ್ವ ಜನಾಂಗದವರನ್ನು ಸಮಭಾವದಿಂದ ಕಂಡಿದ್ದರು. ಸರ್ವ ಜನಾಂಗದ ತೋಟ ನಿರ್ಮಿಸಿದ್ದರು. ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ತಾರತಮ್ಯ ಮಾಡಲಾಗಿದೆ ಎಂದು ಆರೋಪಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡಿದ್ದಾರೆ. ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದು, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಟಾರ್ಗೆಟ್ ಮಾಡಲಾಗಿದೆ. ನಿನ್ನೆ ಯಲಹಂಕ ಕ್ಷೇತ್ರದ ಬೆಳೆ ಹಾನಿ ಪ್ರದೇಶ ವೀಕ್ಷಣೆಗೆ ತೆರಳಿದ್ದೆ, ಆಗ ನನಗೆ ‘ರಿಪಬ್ಲಿಕ್ ಆಫ್ ಯಲಹಂಕ’ದ ಮಹಾದರ್ಶನವೇ ಆಯಿತು. ನೈಜ ಸಂತ್ರಸ್ತರೇ ಅಹವಾಲು ಹೇಳಿಕೊಳ್ಳಲು ಮುಂದೆ ಬರಲಿಲ್ಲ. ಸಂತ್ರಸ್ತರು ಬಾರದೇ ಇರುವುದು ನನ್ನನ್ನು ಚಕಿತಗೊಳಿಸಿತು ಎಂದು ಹೆಚ್.ಡಿ. ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ಸರ್ವ ಜನಾಂಗದ ಜನರನ್ನು ಸಮಭಾವದಿಂದ ಕಂಡು ಸರ್ವ ಜನಾಂಗದ ತೋಟ ನಿರ್ಮಿಸಿದ್ದರು ನಾಡಪ್ರಭು ಕೆಂಪೇಗೌಡರು.
ಪ್ರಭುಗಳು ಕಟ್ಟಿದ ಬೆಂಗಳೂರಿನ ಯಲಹಂಕದಲ್ಲಿ ಅಭಿವೃದ್ಧಿ ವಿಚಾರದಲ್ಲಿ ನಿರ್ದಿಷ್ಟವಾಗಿ ಒಂದು ಸಮುದಾಯವನ್ನೇ ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿ, ಅವರು ವಾಸಿಸುವ ಬಡಾವಣೆಯನ್ನು ಕಡೆಗಣಿಸಿ ಅವರನ್ನು ಟಾರ್ಗೆಟ್ ಮಾಡಲಾಗಿದೆ. 1/9 pic.twitter.com/8bzNngh4lF
— H D Kumaraswamy (@hd_kumaraswamy) May 22, 2022
ಚುನಾವಣೆಯಲ್ಲಿ ಚಿಕ್ಕಬೆಟ್ಟಹಳ್ಳಿ ಜನ ಮತ ಕೊಡಲಿಲ್ಲ ಅಂತ ಕಡೆಗಣಸಲಾಗಿದೆ. ಇದಕ್ಕಿಂತ ಮಿಗಿಲಾದ ಪಾಪದ ಕೆಲಸ ಮತ್ತೊಂದಿಲ್ಲ. ಶಾಸಕರು ಇಷ್ಟೊಂದು ಕೀಳು ಮಟ್ಟದ ರಾಜಕಾರಣ ಮಾಡಬಾರದು. ನಾನೆಂದೂ, ಎಲ್ಲಿಯೂ ಇಂಥ ಕೆಟ್ಟ ರಾಜಕೀಯ ನೋಡಿಲ್ಲ. ಡಾಂಬರು ಇಲ್ಲದ ರಸ್ತೆಗಳು, ವಿದ್ಯುತ್ ದೀಪಗಳು ಇಲ್ಲದ ಬೀದಿಗಳು, ಕನಿಷ್ಠ ಮೂಲಸೌಕರ್ಯವೂ ಇಲ್ಲದ ಪ್ರದೇಶಗಳು ನನಗೆ ಕಂಡವು. ನನ್ನನ್ನು ಭೇಟಿಯಾಗಿ ದೂರು ನೀಡದಂತೆ ಸ್ಥಳೀಯ ಶಾಸಕರು ಬೆದರಿಕೆ ಹಾಕಿದ್ದಾರೆ. ಶಾಸಕರು & ಅವರ ಪಟಾಲಂ ಹೆದರಿಸಿದ್ದಾರೆನ್ನುವ ಮಾಹಿತಿ ಸಿಕ್ಕಿತು. ದೂರು ಕೊಟ್ಟರೆ ಇಡೀ ಅಪಾರ್ಟ್ಮೆಂಟ್ ನೆಲಸಮ ಮಾಡಿಸುತ್ತೇವೆ. ಅಲ್ಲಿನ ಸ್ಥಳೀಯ ನಿವಾಸಿಗಳನ್ನು ಶಾಸಕ ವಿಶ್ವನಾಥ್ ಬೆದರಿಕೆ ಹಾಕಿದ್ದಾರೆ. ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ ಎಂದು ಶಾಸಕ S.R.ವಿಶ್ವನಾಥ್ಗೆ ಟ್ವೀಟ್ ಮೂಲಕ ಕುಮಾರಸ್ವಾಮಿ ವಾರ್ನಿಂಗ್ ಮಾಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನ ಏರ್ಪೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ! ಫ್ಲೈಓವರ್ ಮೇಲಿಂದ ಕೆಳಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ
ಚಿಕ್ಕಬೆಟ್ಟಹಳ್ಳಿಗೆ ಒಂದು ತಿಂಗಳ ಒಳಗಾಗಿ ಮೂಲಸೌಕರ್ಯ ಕಲ್ಪಿಸುವ ಕೆಲಸಗಳು ಶುರುವಾಗಬೇಕು. ತಪ್ಪಿದರೆ ಖುದ್ದು ನಾನೇ ಅಲ್ಲಿಗೆ ಹೋಗಿ ಧರಣಿ ಕೂರಬೇಕಾಗುತ್ತದೆ. ಜಾತಿ, ಧರ್ಮದ ಹೆಸರಿನಲ್ಲಿ ಅಭಿವೃದ್ಧಿ ತಾರತಮ್ಯ ಮಾಡುವುದು ಹೇಯ, ರಾಕ್ಷಸಿ ಮನಸ್ಥಿತಿ ಎನ್ನದೇ ವಿಧಿ ಇಲ್ಲ. 9/9#ರಿಪಬ್ಲಿಕ್_ಆಫ್_ಯಲಹಂಕ
— H D Kumaraswamy (@hd_kumaraswamy) May 22, 2022
ಸಿಲಿಕಾನ್ ಸಿಟಿಯನ್ನು ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ. ದೇಶದ್ರೋಹಿಗಳು, ಇವರು ರಾಷ್ಟ್ರವಿರೋಧಿಗಳು ಎಂದು ಹಣೆಪಟ್ಟಿ ಕಟ್ಟುವ ಬಿಜೆಪಿ ನಾಯಕರು ಮತ್ತು ಶಾಸಕರು, ಅಭಿವೃದ್ಧಿಯಲ್ಲಿ ನಿರ್ದಿಷ್ಟ ಸಮುದಾಯದ ಜನ ವಾಸಿಸುತ್ತಿರುವ ಪ್ರದೇಶಕ್ಕೆ ತಾರತಮ್ಯ ಎಸಗಿರುವುದೇ ದೊಡ್ಡ ದೇಶದ್ರೋಹ ಎಂದು ಹೇಳಿದ್ದಾರೆ.
ಸಿಲಿಕಾನ್ ಸಿಟಿಯನ್ನು ಸ್ವಿಮ್ಮಿಂಗ್ ಪೂಲ್ ಮಾಡಿದ ಹೆಗ್ಗಳಿಕೆ ಬಿಜೆಪಿ ಸರಕಾರಕ್ಕೇ ಸಲ್ಲಬೇಕು. ಅಭಿವೃದ್ಧಿಯಲ್ಲಿ ಕ್ಷೇತ್ರವಾರು ತಾರತಮ್ಮ ಮಾಡಿ, ಒಂದು ಕಣ್ಣಿಗೆ ಸುಣ್ಣ, ಇನ್ನೊಂದು ಕಣ್ಣಿಗೆ ಬೆಣ್ಣೆ ಎನ್ನುವ ನೀತಿ ಖಂಡನೀಯ. ಅನುದಾಲದ ಹೊಳೆ ಹರಿದ ಕ್ಷೇತ್ರಗಳೇ ಈಗ ನೀರಿನಲ್ಲಿ ತೇಲುತ್ತಿವೆ. 8/9#ರಿಪಬ್ಲಿಕ್_ಆಫ್_ಯಲಹಂಕ
— H D Kumaraswamy (@hd_kumaraswamy) May 22, 2022
ಇಂದು ಕೂಡ ಮಲೆ ಹಾನಿ ಪ್ರದೇಶಗಳಿಗೆ ಕುಮಾರಸ್ವಾಮಿ ಭೇಟಿ
ಬೆಂಗಳೂರಿನ ಮಳೆ ಹಾನಿ ಪ್ರದೇಶಗಳಿಗೆ ಹೆಚ್.ಡಿ. ಕುಮಾರಸ್ವಾಮಿ ಇಂದು ಕೂಡ ಭೇಟಿ ನೀಡಲಿದ್ದು, ರಾಜರಾಜೇಶ್ವರಿನಗರ, ಗೋವಿಂದರಾಜನಗರ, ಸರ್ವಜ್ಞನಗರ, ಮಹಾಲಕ್ಷ್ಮಿಲೇಔಟ್, ಕೆ.ಆರ್.ಪುರಂ ಕ್ಷೇತ್ರದಲ್ಲಿ ಪರಿಶೀಲನೆ ಮಾಡಿ, ಮಳೆ ಹಾನಿ ಪ್ರದೇಶಗಳ ಜನರ ಸಮಸ್ಯೆ ಆಲಿಸಲಿದ್ದಾರೆ.
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.