Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!

Vande Bharat Express: ಪ್ರಸ್ತುತ ಸಿಕಂದರಾಬಾದ್ ಮತ್ತು ಬೆಂಗಳೂರು ನಡುವಿನ ಪ್ರಯಾಣದ ಸಮಯ ಸುಮಾರು 11 ಗಂಟೆಗಳು. ಅದರೆ ಇನ್ಮುಂದೆ ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಯಾಣವನ್ನು ಏಳು ಗಂಟೆಗೆ ಇಳಿಸಲು ರೈಲ್ವೆ ಅಧಿಕಾರಿಗಳು ಸನ್ನದ್ಧವಾಗಿದ್ದಾರೆ.

Secunderabad To Bengaluru Vande Bharat Express: ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್ ಸಂಚರಿಸಲಿದೆ!
ಇನ್ನು 7 ಗಂಟೆಗಳಲ್ಲೇ ಸಿಕಂದರಾಬಾದ್ -ಬೆಂಗಳೂರು ಮಧ್ಯೆ ವಂದೇ ಭಾರತ್ ಟ್ರೈನ್
Follow us
|

Updated on: Apr 21, 2023 | 5:50 PM

ಸಿಕಂದರಾಬಾದ್‌: ಇನ್ನು ಕೆಲವೇ ದಿನಗಳಲ್ಲಿ ಸಿಕಂದರಾಬಾದ್‌ನಿಂದ ವಂದೇ ಭಾರತ್ ರೈಲು (Vande Bharat Express) ಸಂಚರಿಸಲಿದೆ. ಸಿಕಂದರಾಬಾದ್ ಮತ್ತು ಬೆಂಗಳೂರು ನಡುವೆ ವಂದೇ ಭಾರತ್ ಎಕ್ಸ್‌ಪ್ರೆಸ್ ಆರಂಭಿಸಲು ರೈಲ್ವೆ ಸಚಿವಾಲಯ ಸಿದ್ಧತೆ ನಡೆಸಿದೆ. ದಕ್ಷಿಣ ಮಧ್ಯ ರೈಲ್ವೆ ಅಧಿಕಾರಿಗಳು ರೈಲು ಮಾರ್ಗದ ನಕ್ಷೆಯನ್ನು ಬಹುತೇಕ ಅಂತಿಮಗೊಳಿಸಿದ್ದಾರೆಂದು ಟಿವಿ9 ತೆಲುಗು ವರದಿ ಮಾಡಿದೆ. ಸಿಕಂದರಾಬಾದ್ ಮತ್ತು ಬೆಂಗಳೂರು ನಡುವೆ (Secunderabad To Bengaluru Vande Bharat Express) ಸುಮಾರು ಏಳು ರೈಲು ಸೇವೆಗಳು ಈಗಾಗಲೇ ಓಡುತ್ತಿವೆ. ಈ ಎರಡು ನಗರಗಳ ನಡುವಿನ ಪ್ರಯಾಣದ ಸಮಯ ಸುಮಾರು 11 ಗಂಟೆಗಳು. ವಂದೇ ಭಾರತ್ ಎಕ್ಸ್‌ಪ್ರೆಸ್‌ನ ಪ್ರಯಾಣವನ್ನು ಏಳು ಗಂಟೆಗಳಿಗೆ ಇಳಿಸಲು ರೈಲ್ವೆ ಅಧಿಕಾರಿಗಳು ವೇಳಾಪಟ್ಟಿಯೊಂದಿಗೆ ಸನ್ನದ್ಧವಾಗಿದ್ದಾರೆ.

ಏತನ್ಮಧ್ಯೆ, ಪ್ರಸ್ತುತ ಸಿಕಂದರಾಬಾದ್‌ನಿಂದ ಬೆಂಗಳೂರಿಗೆ ಎರಡು ಮಾರ್ಗಗಳಲ್ಲಿ ರೈಲುಗಳು ಓಡುತ್ತಿವೆ. ಅದರಲ್ಲಿ ಒಂದು ವಿಕಾರಾಬಾದ್ (Vikarabad), ತಾಂಡೂರು, ರಾಯಚೂರು, ಗುಂತಕಲ್ಲು ಮೂಲಕ.. ಇನ್ನೊಂದು ಮಹೆಬೂಬ್ ನಗರ, ಕರ್ನೂಲ್, ಗುಂತಕಲ್ಲು ಮಾರ್ಗವಾಗಿ. ಸದ್ಯ ರೈಲ್ವೇ ಅಧಿಕಾರಿಗಳು ಹಳಿಯ ಸಾಮರ್ಥ್ಯ ಹಾಗೂ ರೈಲಿನ ವೇಗದ ಬಗ್ಗೆ ಗಮನ ಹರಿಸಿದ್ದಾರೆ ಎಂದು ವರದಿಯಾಗಿದೆ. ಈ ರೈಲು ಮುಂದಿನ ತಿಂಗಳು 21 ರಂದು ಪ್ರಾರಂಭವಾಗುವ ನಿರೀಕ್ಷೆಯಿದೆ. ಸಮಯಗಳು ಇನ್ನೂ ಸ್ಪಷ್ಟವಾಗಬೇಕಿದೆ. ಸದ್ಯದಲ್ಲೇ ಅಧಿಕೃತ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

Also Read:

Vande Bharat Express: ಸಿಕಂದರಾಬಾದ್ – ತಿರುಪತಿ ವಂದೇ ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ

ಏತನ್ಮಧ್ಯೆ, ಈಗಾಗಲೇ ಎರಡು ವಂದೇ ಭಾರತ್ ರೈಲುಗಳು ತೆಲುಗು ರಾಜ್ಯಗಳ ನಡುವೆ ಓಡುತ್ತಿವೆ. ಅವುಗಳಲ್ಲಿ ಒಂದು ಸಿಕಂದರಾಬಾದ್-ವಿಶಾಖಪಟ್ಟಣ ಮತ್ತು ಇನ್ನೊಂದು ಸಿಕಂದರಾಬಾದ್-ತಿರುಪತಿ ಈ ಎರಡೂ ಮಾರ್ಗಗಳಲ್ಲಿ ರೈಲುಗಳ ಆಕ್ಯುಪೆನ್ಸಿ ತುಂಬಾ ಚೆನ್ನಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಅಲ್ಲದೆ ಸಿಕಂದರಾಬಾದ್-ತಿರುಪತಿ ವಂದೇಭಾರತ್ ರೈಲಿನ ಬೋಗಿಗಳನ್ನು ಹೆಚ್ಚಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ