AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!

ಪ್ರಧಾನಿ ನರೇಂದ್ರ ಮೋದಿ ಅವರ ಬೆಂಗಳೂರು ಭೇಟಿ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳಿದ್ದ ಬಾಕ್ಸ್ ಪತ್ತೆಯಾಗಿತ್ತು. ಕಗ್ಗಲೀಪುರದ ತಾತಗುಣಿ ಬಳಿ ಜಿಲೆಟಿನ್ ಕಡ್ಡಿಗಳು ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸರು ಹೈ ಅಲರ್ಟ್ ಆಗಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ವಿಶೇಷ ತಂಡಗಳು ತನಿಖೆ ನಡೆಸುತ್ತಿದ್ದು, ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9 ಗೆ ಲಭ್ಯವಾಗಿದೆ.

ಪ್ರಧಾನಿ ಮೋದಿ ಸಂಚರಿಸುವ ಮಾರ್ಗದಲ್ಲೇ ಜಿಲೆಟಿನ್ ಪತ್ತೆ: ಸ್ಫೋಟಕ ತುಂಬಿದ ಬಾಕ್ಸ್​ಗೆ ಟೇಪ್ ಸುತ್ತಿ ಬಿಸಾಡಿದ್ದ ಆರೋಪಿ!
ಸ್ಫೋಟಕ ತುಂಬಿದ್ದ ಬಾಕ್ಸ್
ಪ್ರಶಾಂತ್​ ಬಿ.
| Edited By: |

Updated on:May 11, 2026 | 9:16 AM

Share

ರಾಮನಗರ, ಮೇ 11: ಪ್ರಧಾನಿ ನರೇಂದ್ರ ಮೋದಿ ಅವರು ನಿನ್ನೆ ನಗರಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಾರೀ ಭದ್ರತಾ ಲೋಪದ ಶಂಕೆ ವ್ಯಕ್ತವಾಗಿತ್ತು. ಮೋದಿ ಅವರು ಸಂಚರಿಸುವ ಮಾರ್ಗದ ಪಕ್ಕದಲ್ಲೇ ಸ್ಫೋಟಕಗಳು (Explosive) ಪತ್ತೆಯಾಗಿದ್ದು, ಇಡೀ ಪೊಲೀಸ್ ಇಲಾಖೆಯನ್ನು ಬೆಚ್ಚಿಬೀಳಿಸಿತ್ತು. ಈ ಘಟನೆಗೆ ಸಂಬಂಧಿಸಿದ ಎಕ್ಸ್‌ಕ್ಲೂಸಿವ್ ಫೋಟೋ ಟಿವಿ9ಗೆ ಲಭ್ಯವಾಗಿದೆ.

ಮುಖ್ಯಾಂಶಗಳು

  • ಮೋದಿ ಬರುವ ಮಾರ್ಗದಲ್ಲಿ ಎರಡು ಜಿಲೆಟಿನ್ ಕಡ್ಡಿಗಳಿದ್ದ ಬಾಕ್ಸ್ ಪತ್ತೆಯಾಗಿ ಆತಂಕ.
  •  ಪೊಲೀಸ್ ಪೇದೆಯ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ; ಬಾಂಬ್ ಸ್ಕ್ವಾಡ್‌ನಿಂದ ತೀವ್ರ ತಪಾಸಣೆ.
  •  ಪ್ರಕರಣ ಭೇದಿಸಲು ಆರು ವಿಶೇಷ ತಂಡಗಳ ರಚನೆ; ಕ್ವಾರಿಗಳ ಮೇಲೆ ಪೊಲೀಸರ ಕಣ್ಣು.

ಏನಾಗಿತ್ತು?

ನಿನ್ನೆ (ಮೇ 10) ಪ್ರಧಾನಿ ಮೋದಿ ಅವರು ‘ಆರ್ಟ್ ಆಫ್ ಲಿವಿಂಗ್’ ಆಶ್ರಮಕ್ಕೆ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದರು. ಅವರು ಬರುವ ಕೇವಲ ಎರಡು ಗಂಟೆಗಳ ಮೊದಲು, ಅಂದರೆ ಬೆಳಿಗ್ಗೆ 9 ಗಂಟೆ ವೇಳೆಗೆ, ಬೆಂಗಳೂರು ದಕ್ಷಿಣ ತಾಲೂಕಿನ ವಡೇರಹಳ್ಳಿ ಗೇಟ್ ಸಮೀಪ ಅನುಮಾನಾಸ್ಪದ ಬಾಕ್ಸ್ ಒಂದು ಪತ್ತೆಯಾಗಿತ್ತು. ಭದ್ರತೆಗೆ ನಿಯೋಜನೆಗೊಂಡಿದ್ದ ಪೇದೆಯೊಬ್ಬರು ರಸ್ತೆ ಪಕ್ಕದಲ್ಲಿ ಬಿದ್ದಿದ್ದ ಈ ಬಾಕ್ಸ್ ಅನ್ನು ಗಮನಿಸಿದ್ದರು.

ಬಾಕ್ಸ್‌ನಲ್ಲಿ ಏನಿತ್ತು?

ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ (Bomb Squad) ಸ್ಥಳಕ್ಕೆ ಧಾವಿಸಿತ್ತು. ಬಾಕ್ಸ್ ಅನ್ನು ತೆರೆದು ಪರಿಶೀಲಿಸಿದಾಗ ಅದರಲ್ಲಿ ಎರಡು ಜಿಲೆಟಿನ್ ಕಡ್ಡಿಗಳು, ನಾಲ್ಕು ಗಂಧದ ಕಡ್ಡಿಗಳು, ಒಂದು ಮ್ಯಾಚ್ ಬಾಕ್ಸ್ ಹಾಗೂ ಎರಡು ಬ್ಯಾಟರಿಗಳು ಕಂಡುಬಂದಿದ್ದವು. ಆರೋಪಿಯು ಸ್ಫೋಟಕಗಳನ್ನು ಬಾಕ್ಸ್‌ನಲ್ಲಿಟ್ಟು ಸುತ್ತಲೂ ಟೇಪ್ ಅಂಟಿಸಿದ್ದನು. ತಕ್ಷಣವೇ ಸ್ಫೋಟಕಗಳನ್ನು ವಶಕ್ಕೆ ಪಡೆದ ಪೊಲೀಸರು, ಇಡೀ ಮಾರ್ಗವನ್ನು ಮತ್ತೊಮ್ಮೆ ತೀವ್ರ ತಪಾಸಣೆಗೆ ಒಳಪಡಿಸಿದ್ದಾರೆ. ಸಂಪೂರ್ಣ ಭದ್ರತೆ ಖಚಿತವಾದ ನಂತರವಷ್ಟೇ ಪ್ರಧಾನಿ ಸಂಚಾರಕ್ಕೆ ಅವಕಾಶ ನೀಡಲಾಯಿತು.

ಇದನ್ನೂ ಓದಿ ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: ತನಿಖೆ ಬಗ್ಗೆ ಕೇಂದ್ರ ವಲಯ ಡಿಐಜಿ ಮಾಹಿತಿ

ತನಿಖೆಯ ಹಾದಿ

ಈ ಗಂಭೀರ ಪ್ರಕರಣವನ್ನು ಭೇದಿಸಲು ಕಗ್ಗಲಿಪುರ ಠಾಣೆ ಪೊಲೀಸರು ಆರು ವಿಶೇಷ ತಂಡಗಳನ್ನು ರಚಿಸಿದ್ದು, ಸಿಸಿಟಿವಿ ಕ್ಯಾಮೆರಾಗಳ ಪರಿಶೀಲನೆ ನಡೆಸುವುದರ ಜೊತೆಗೆ, ಬೆಂಗಳೂರು ದಕ್ಷಿಣ ಮತ್ತು ರಾಮನಗರ ಭಾಗದ ಕ್ವಾರಿಗಳಲ್ಲಿ ಬಳಕೆಯಾಗುವ ಜಿಲೆಟಿನ್ ಕಡ್ಡಿಗಳ ಬಗ್ಗೆಯೂ ಮಾಹಿತಿ ಸಂಗ್ರಹಿಸಲಾಗುತ್ತಿದೆ. ಮೋದಿ ಸಂಚಾರಕ್ಕೂ ಹಿಂದಿನ ದಿನವೇ ಬಾಂಬ್ ಸ್ಕ್ವಾಡ್ ತಪಾಸಣೆ ನಡೆದಿತ್ತಾದರೂ ಬೆಳಗಿನ ಜಾವ ಈ ಬಾಕ್ಸ್ ಅನ್ನು ಅಲ್ಲಿ ಇಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ.

ಕೇಂದ್ರ ವಲಯದ ಡಿಐಜಿ ಗಿರೀಶ್ ಅವರು ಈ ಬಗ್ಗೆ ಮಾಹಿತಿ ನೀಡಿ, ಘಟನೆಯನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿ ತನಿಖೆ ಮುಂದುವರಿಸಲಾಗಿದೆ ಎಂದು ತಿಳಿಸಿದ್ದಾರೆ. ನಿನ್ನೆ ಕಾನ್‌ಸ್ಟೆಬಲ್ ಸಮಯಪ್ರಜ್ಞೆಯಿಂದ ಅನಾಹುತವೊಂದು ತಪ್ಪಿದಂತಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:14 am, Mon, 11 May 26

Follow Us