AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಪ್ರಧಾನಿ‌‌ ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ(BJP) ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ. ನಿನ್ನೆ(ಏ.20) ಭದ್ರತೆಯ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
TV9 Web
| Edited By: |

Updated on:Apr 21, 2024 | 5:58 PM

Share

ಬೆಂಗಳೂರು, ಏ.21: ಪ್ರಧಾನಿ‌‌ ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ(BJP) ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ. ‘ಮೊಹಮ್ಮದ್ ನಲಪಾಡ್ ಹಾಗೂ ಸಿದ್ದಾಪುರ ಜಾನಿ ಪ್ರತಿಭಟನೆ ಮಾಡಿದ್ದಾರೆ. ಚೊಂಬು ಪ್ರದರ್ಶಿಸಿ ಪೊಲೀಸರಿದ್ದರೂ ಲೆಕ್ಕಿಸದೆ ನುಗ್ಗಿದ್ದಾರೆ. ಹೀಗಾಗಿ ನಿನ್ನೆ(ಏ.20) ಭದ್ರತೆಯ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಚುನಾವಣಾ ಪ್ರಚಾರದಿಂದ‌ ನಲಪಾಡ್‌ರನ್ನು ದೂರ ಇರಿಸಬೇಕು

ಇನ್ನು ಮೊಹಮ್ಮದ್‌ ನಲಪಾಡ್ ವಿರುದ್ಧ ಹಲವು ಪ್ರಕರಣಗಳಿವೆ. ಜೊತೆಗೆ ರೌಡಿಶೀಟರ್ ಸಿದ್ದಾಪುರ ಜಾನಿ ಕೂಡ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ಮೊಹಮ್ಮದ್‌ ನಲಪಾಡ್ ಸಾಥ್ ಕೊಟ್ಟಿದ್ದಾರೆ. ಈ ಹಿನ್ನಲೆ ಚುನಾವಣಾ ಪ್ರಚಾರದಿಂದ‌ ನಲಪಾಡ್‌ರನ್ನು ದೂರ ಇರಿಸಬೇಕು, ಜೊತೆಗೆ ಸಿದ್ದಾಪುರ ಜಾನಿಯನ್ನ ರಾಜ್ಯದಿಂದ ಗಡಿಪಾರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ: ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್

ಘಟನೆ ವಿವರ

ಲೋಕಸಭಾ ಚುನಾವಣೆ ಹಿನ್ನಲೆ ನಿನ್ನೆ (ಏ.20) ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಅದರಂತೆ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್, ಚೊಂಬು ಪ್ರದರ್ಶಿಸಿದ್ದರು. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sun, 21 April 24

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ