AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು

ಪ್ರಧಾನಿ‌‌ ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ(BJP) ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ. ನಿನ್ನೆ(ಏ.20) ಭದ್ರತೆಯ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌: ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ ದೂರು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on:Apr 21, 2024 | 5:58 PM

Share

ಬೆಂಗಳೂರು, ಏ.21: ಪ್ರಧಾನಿ‌‌ ಮೋದಿ ತೆರಳುತ್ತಿದ್ದ ರಸ್ತೆಯಲ್ಲಿ ಭದ್ರತಾ ಲೋಪ‌ ವಿಚಾರಕ್ಕೆ ಸಂಬಂಧಪಟ್ಟಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಬಿಜೆಪಿ(BJP) ಕಾನೂನು ಪ್ರಕೋಷ್ಠದ ರಾಜ್ಯ ಸಂಚಾಲಕ ವಸಂತ್ ಕುಮಾರ್ ನೇತೃತ್ವದ ನಿಯೋಗ ದೂರು ನೀಡಿದೆ. ‘ಮೊಹಮ್ಮದ್ ನಲಪಾಡ್ ಹಾಗೂ ಸಿದ್ದಾಪುರ ಜಾನಿ ಪ್ರತಿಭಟನೆ ಮಾಡಿದ್ದಾರೆ. ಚೊಂಬು ಪ್ರದರ್ಶಿಸಿ ಪೊಲೀಸರಿದ್ದರೂ ಲೆಕ್ಕಿಸದೆ ನುಗ್ಗಿದ್ದಾರೆ. ಹೀಗಾಗಿ ನಿನ್ನೆ(ಏ.20) ಭದ್ರತೆಯ ಉಸ್ತುವಾರಿ ವಹಿಸಿದ್ದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಚುನಾವಣಾ ಪ್ರಚಾರದಿಂದ‌ ನಲಪಾಡ್‌ರನ್ನು ದೂರ ಇರಿಸಬೇಕು

ಇನ್ನು ಮೊಹಮ್ಮದ್‌ ನಲಪಾಡ್ ವಿರುದ್ಧ ಹಲವು ಪ್ರಕರಣಗಳಿವೆ. ಜೊತೆಗೆ ರೌಡಿಶೀಟರ್ ಸಿದ್ದಾಪುರ ಜಾನಿ ಕೂಡ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ಮೊಹಮ್ಮದ್‌ ನಲಪಾಡ್ ಸಾಥ್ ಕೊಟ್ಟಿದ್ದಾರೆ. ಈ ಹಿನ್ನಲೆ ಚುನಾವಣಾ ಪ್ರಚಾರದಿಂದ‌ ನಲಪಾಡ್‌ರನ್ನು ದೂರ ಇರಿಸಬೇಕು, ಜೊತೆಗೆ ಸಿದ್ದಾಪುರ ಜಾನಿಯನ್ನ ರಾಜ್ಯದಿಂದ ಗಡಿಪಾರಿಗೆ ಆಗ್ರಹಿಸಿದ್ದಾರೆ.

ಇದನ್ನೂ ಓದಿ:ಬೆಂಗಳೂರಿನಲ್ಲಿ ಪ್ರಧಾನಿ ಮೋದಿಗೆ ಭದ್ರತಾ ಲೋಪ: ರಸ್ತೆಗಿಳಿದು ಚೊಂಬು ಪ್ರದರ್ಶಿಸಿದ ನಲಪಾಡ್

ಘಟನೆ ವಿವರ

ಲೋಕಸಭಾ ಚುನಾವಣೆ ಹಿನ್ನಲೆ ನಿನ್ನೆ (ಏ.20) ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದರು. ಅದರಂತೆ ಬೆಂಗಳೂರಿನ ಮೇಖ್ರಿ ಸರ್ಕಲ್​ ಬಳಿಯ HQTCಯಿಂದ ತೆರಳುತ್ತಿದ್ದ ವೇಳೆ ಭದ್ರತಾ ಲೋಪ ಉಂಟಾಗಿದ್ದು, ಮೋದಿಯವರು ಅರಮನೆ ಮೈದಾನಕ್ಕೆ ತೆರಳುವಾಗ ರಸ್ತೆಗೆ ನುಗ್ಗಿ ರಾಜ್ಯ ಯುವ ಕಾಂಗ್ರೆಸ್ ಘಟಕದ ಅಧ್ಯಕ್ಷ ನಲಪಾಡ್, ಚೊಂಬು ಪ್ರದರ್ಶಿಸಿದ್ದರು. ಕೂಡಲೇ ಮೊಹಮ್ಮದ್ ನಲಪಾಡ್ ಸೇರಿದಂತೆ ಹಲವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಇದೀಗ ಬಿಜೆಪಿ ದೂರು ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:53 pm, Sun, 21 April 24

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!