AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯರಾದರೆ ಮಾತ್ರ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಅನ್ವಯ; ಹೈಕೋರ್ಟ್ ಏಕಸದಸ್ಯ ಪೀಠದಿಂದ‌ ಆದೇಶ

ಮಂಗಳೂರಿನ ಉಪವಿಭಾಗಾಧಿಕಾರಿಗೆ ದೂರು ನೀಡಿದ್ದರು. ಪ್ರಕರಣ ರದ್ದು ಕೋರಿ ಮಕ್ಕಳಿಂದ ಹೈಕೋರ್ಟ್​ಗೆ ರಿಟ್ ಸಲ್ಲಿಸಲಾಗಿತ್ತು. ತಾಯಿ ಭಾರತೀಯ ನಾಗರಿಕರಲ್ಲವಾದ್ದರಿಂದ ಕಾಯ್ದೆ ಅನ್ವಯವಿಲ್ಲ. ಹೀಗಾಗಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ಯ ಪ್ರಕರಣ ರದ್ದುಪಡಿಸಿ ನ್ಯಾ.ಪಿ.ಕೃಷ್ಣ ಭಟ್​​ ಆದೇಶ ಹೊರಡಿಸಿದ್ದಾರೆ.

ಭಾರತೀಯರಾದರೆ ಮಾತ್ರ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಅನ್ವಯ; ಹೈಕೋರ್ಟ್ ಏಕಸದಸ್ಯ ಪೀಠದಿಂದ‌ ಆದೇಶ
ಕರ್ನಾಟಕ ಹೈಕೋರ್ಟ್
TV9 Web
| Updated By: preethi shettigar|

Updated on:Mar 31, 2022 | 8:48 PM

Share

ಬೆಂಗಳೂರು: ಭಾರತೀಯರಾದರೆ ಮಾತ್ರ ಹಿರಿಯ ನಾಗರಿಕರ ಕಲ್ಯಾಣ ಕಾಯ್ದೆ ಅನ್ವಯ ಎಂದು ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಈ ಕಾಯ್ದೆಯಡಿ ಇಂಗ್ಲೆಂಡ್ ನಾಗರಿಕತ್ವ ಪಡೆದಿದ್ದ ತಾಯಿ, ಮಂಗಳೂರಿನಲ್ಲಿದ್ದ ಮಕ್ಕಳ ವಿರುದ್ಧ ದೂರು ನೀಡಿದ್ದಾರೆ. ಮಂಗಳೂರಿನ ಉಪವಿಭಾಗಾಧಿಕಾರಿಗೆ ದೂರು ನೀಡಿದ್ದರು. ಪ್ರಕರಣ ರದ್ದು ಕೋರಿ ಮಕ್ಕಳಿಂದ ಹೈಕೋರ್ಟ್​ಗೆ (High court) ರಿಟ್ ಸಲ್ಲಿಸಲಾಗಿತ್ತು. ತಾಯಿ (Mother) ಭಾರತೀಯ ನಾಗರಿಕರಲ್ಲವಾದ್ದರಿಂದ ಕಾಯ್ದೆ ಅನ್ವಯವಿಲ್ಲ. ಹೀಗಾಗಿ ಪ್ರಕರಣ ರದ್ದು ಕೋರಿ ಅರ್ಜಿ ಸಲ್ಲಿಸಿದ್ದರು. ಸದ್ಯ ಪ್ರಕರಣ ರದ್ದುಪಡಿಸಿ ನ್ಯಾ.ಪಿ.ಕೃಷ್ಣ ಭಟ್​​ ಆದೇಶ (Order) ಹೊರಡಿಸಿದ್ದಾರೆ.

ಈ ಹಿಂದೆ ನೀಡಿದ ತೀರ್ಪು: ಅತ್ಯಾಚಾರ ಸಂತ್ರಸ್ತೆ ಬಲವಂತದ ಗರ್ಭ ಹೊರಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ 

ಭಾರತ ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮಹಿಳೆ ತನ್ನ ಸಂತಾನೋತ್ಪತ್ತಿ ಆಯ್ಕೆಯನ್ನು ಚಲಾಯಿಸುವ ಹಕ್ಕು ವೈಯಕ್ತಿಕ ಸ್ವಾತಂತ್ರ್ಯದ ಆಯಾಮವಾಗಿದೆ ಮತ್ತು ತನ್ನ ದೇಹ ರಕ್ಷಿಸಲು ಅವಳು ಹಕ್ಕನ್ನು ಹೊಂದಿದ್ದಾಳೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಎನ್ ಎಸ್ ಸಂಜಯ್ ಗೌಡ  ಅವರಿದ್ದ ಏಕಸದಸ್ಯ ಪೀಠವು “ಮಹಿಳೆಯೊಬ್ಬಳು ತನ್ನ ದೇಹದ ಮೇಲೆ ಅನಪೇಕ್ಷಿತ ಹೊರೆಯನ್ನು ತಡೆದುಕೊಳ್ಳುವಂತೆ ಒತ್ತಾಯಿಸುವ ಮತ್ತು ಆ ಹೇರಿಕೆಯ ಪರಿಣಾಮಗಳನ್ನು ತಡೆದುಕೊಳ್ಳುವ ಕ್ರಿಯೆಯು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ವೈಯಕ್ತಿಕ ಸ್ವಾತಂತ್ರ್ಯ ದ ಉಲ್ಲಂಘಿಸಲಾಗದ ಮೂಲಭೂತ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಹೇಳಿದೆ.

1971ರ ವೈದ್ಯಕೀಯ ಗರ್ಭಪಾತ ಕಾಯಿದೆಯ ಸೆಕ್ಷನ್ 3ರಲ್ಲಿ ನಿಗದಿಪಡಿಸಿದಂತೆ 24 ವಾರಗಳನ್ನು ದಾಟಿದ ಕಾರಣ 16 ವರ್ಷ ವಯಸ್ಸಿನ ಅತ್ಯಾಚಾರ ಸಂತ್ರಸ್ತೆಯ ಗರ್ಭವನ್ನು ಅಂತ್ಯಗೊಳಿಸಲು ವೈದ್ಯಕೀಯ ವೈದ್ಯರು ನಿರಾಕರಿಸಿದ ಪ್ರಕರಣದ ಕುರಿತು ನ್ಯಾಯಾಲಯ ಈ ತೀರ್ಪು ನೀಡಿದೆ.  ಅಪರಾಧದ ಹೊರೆ ಹೊರಲು ಬಲವಂತ ಮಾಡಬಾರದು ಮತ್ತು ತನ್ನ ಇಚ್ಛೆಗೆ ವಿರುದ್ಧವಾಗಿ ಗರ್ಭಧರಿಸಿದ ಮಗುವಿಗೆ ಜನ್ಮ ನೀಡುವಂತೆ ಒತ್ತಾಯಿಸಬಾರದು ಎಂದು ಅರ್ಜಿದಾರರು ನ್ಯಾಯಾಲಯದ ಮೊರೆ ಹೋಗಿದ್ದರು. ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಾಲಯ, “ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರ ಪ್ರಕರಣಗಳಲ್ಲಿ, 1971 ರ ಕಾಯಿದೆಯಡಿಯಲ್ಲಿ ಸೂಚಿಸಲಾದ ಕೆಲವು ಶಾಸನಬದ್ಧ ಮಿತಿಗಳಿದ್ದರೂ, ಅವು ಮೂಲಭೂತವಾಗಿ ವೈದ್ಯಕೀಯ ವೈದ್ಯರಿಗೆ ಮಾತ್ರ ಅನ್ವಯಿಸುತ್ತವೆ. ಅಂತಹ ಸಂದರ್ಭಗಳಲ್ಲಿ, ವೈದ್ಯಕೀಯವಾಗಿ ಗರ್ಭಾವಸ್ಥೆಯನ್ನು ಅಂತ್ಯಗೊಳಿಸುವ ಅಗತ್ಯವನ್ನು ಪರಿಗಣಿಸಬೇಕು ಮತ್ತು ಪರೀಕ್ಷಿಸಬೇಕು ಎಂದು ಹೇಳಿದೆ.

ಎಂಟಿಪಿ ಕಾಯ್ದೆಯ 3 (2) (a) ಮತ್ತು 3 (2) (b) ಸೆಕ್ಷನ್‌ಗಳನ್ನು ಉಲ್ಲೇಖಿಸಿ, ಇದು 20 ವಾರಗಳನ್ನು ಮೀರದ ಮತ್ತು 24 ವಾರಗಳನ್ನು ಮೀರದ ಪ್ರಕರಣಗಳಲ್ಲಿ ಗರ್ಭಧಾರಣೆಯ ಮುಕ್ತಾಯದ ವಿಧಾನವನ್ನು ನಿಗದಿಪಡಿಸುತ್ತದೆ ಎಂದು ನ್ಯಾಯಾಲಯ ಹೇಳಿದೆ.

“ಗರ್ಭಿಣಿ  ಆಪಾದಿತ ಅತ್ಯಾಚಾರದ ಕಾರಣದಿಂದಾಗಿ ಗರ್ಭಾವಸ್ಥೆಯು ಉಂಟಾಗಿದೆ ಎಂದು ಆರೋಪಿಸಿದರೆ ಆಕೆಯ ಮಾನಸಿಕ ಆರೋಗ್ಯಕ್ಕೆ ಗಂಭೀರವಾದ ಗಾಯದ ಶಾಸನಬದ್ಧ ಊಹೆಯನ್ನು ಕಾನೂನು ರಚಿಸುತ್ತದೆ ಎಂಬುದು ಸ್ಪಷ್ಟವಾಗಿದೆ.” ಅತ್ಯಾಚಾರದಿಂದ ಗರ್ಭಧರಿಸಿರುವುದಾಗಿ ಗರ್ಭಿಣಿ  ಆರೋಪಿಸಿದರೂ ಸಹ ವೈದ್ಯಕೀಯ ವೈದ್ಯರು 24 ವಾರಗಳ ನಂತರ ಗರ್ಭಾವಸ್ಥೆ ಅಂತ್ಯಗೊಳಿಸಲು ಕಾಯ್ದೆ  ಅನುಮತಿಸುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಆದಾಯ ಮೀರಿ ಆಸ್ತಿ ಗಳಿಕೆ: ರವಿ ಡಿ. ಚನ್ನಣ್ಣನವರ್ ವಿರುದ್ಧ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ ಕೆಎನ್ ಜಗದೀಶ್

ಅತ್ಯಾಚಾರ ಸಂತ್ರಸ್ತೆ ಬಲವಂತದ ಗರ್ಭ ಹೊರಬೇಕಿಲ್ಲ: ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ 

Published On - 8:44 pm, Thu, 31 March 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ