AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಿರಿಯ ವಿದ್ವಾನ್, ಆಧ್ಯಾತ್ಮಿಕ ಚಿಂತಕ ಹಾಗೂ ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ನಿಧನ

ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಲಕ್ಷ್ಮಣದಾಸ್ ಅವರು ಹೆಸರಾಂತ ಹರಿಕಥಾ ವಿದ್ವಾನ್ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸರ ಶಿಷ್ಯರಾಗಿದ್ದರು.

ಹಿರಿಯ ವಿದ್ವಾನ್, ಆಧ್ಯಾತ್ಮಿಕ ಚಿಂತಕ ಹಾಗೂ ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ನಿಧನ
ಲಕ್ಷ್ಮಣದಾಸ್ ವೇಲಣಕರ್
TV9 Web
| Edited By: |

Updated on:Dec 22, 2021 | 11:52 AM

Share

ಬೆಂಗಳೂರು: ಹಿರಿಯ ವಿದ್ವಾನ್ ಹಾಗೂ ಅಧ್ಯಾತ್ಮಿಕ ಚಿಂತಕ, ಪ್ರವಚನಕಾರ ಲಕ್ಷ್ಮಣದಾಸ್ ವೇಲಣಕರ್ ಅವರು ಬೆಂಗಳೂರಿನ ಸ್ವಗೃಹದಲ್ಲಿಂದು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ಇಂದು (ಡಿಸೆಂಬರ್​ 22) ಬೆಳಿಗ್ಗೆ ಕೊನೆಯುಸಿರೆಳೆದರು. ಲಕ್ಷ್ಮಣದಾಸ್ ವೇಲಣಕರ್ ಅವರಿಗೆ 82 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಹಾಗೂ ಪುತ್ರನಾದ ಖ್ಯಾತ ಹಿಂದೂಸ್ತಾನಿ ಗಾಯಕ ದತ್ತಾತ್ರೇಯ ವೇಲಣಕರ್ ಅವರನ್ನು ಅಗಲಿದ್ದಾರೆ‌.  

ಬೆಂಗಳೂರಿನ ಹೆಬ್ಬಾಳದ ಚಿತಾಗಾರದಲ್ಲಿ ಇಂದು ಮಧ್ಯಾಹ್ನ ಅಂತ್ಯಕ್ರಿಯೆ ನೆರವೇರಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಲಕ್ಷ್ಮಣದಾಸ್ ಅವರು ಹೆಸರಾಂತ ಹರಿಕಥಾ ವಿದ್ವಾನ್ ಭದ್ರಗಿರಿ ಅಚ್ಯುತದಾಸ್ ಮತ್ತು ಕೇಶವದಾಸರ ಶಿಷ್ಯರಾಗಿದ್ದರು. ತಮ್ಮ ಗುರುಗಳ ನಂತರ ರಾಜ್ಯದಲ್ಲಿ ಹರಿಕಥಾ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಲು ಲಕ್ಷ್ಮಣದಾಸ್ ವೇಲಣಕರ್ ಸಾಕಷ್ಟು ಶ್ರಮಿಸಿದ್ದರು.

ಲಕ್ಷ್ಮಣದಾಸ್ ವೇಲಣಕರ್ ಅವರು ಗೋರಖ್ ಪುರದ ಗೀತಾ ಪ್ರೆಸ್​ನ ನೂರಕ್ಕೂ ಅಧಿಕ‌ ಅಧ್ಯಾತ್ಮಿಕ ಕೃತಿಗಳನ್ನು ಕನ್ನಡಕ್ಕೆ ಅನುವಾದ ಮಾಡಿದ್ದರು.  ಷಡ್ಜಾ ಕಲಾಕೇಂದ್ರವನ್ನು ಸ್ಥಾಪಿಸಿ ಆಧ್ಯಾತ್ಮಿಕ, ಸಂಗೀತ ಹಾಗೂ ಸಾಹಿತ್ಯ ಸೇವೆಯಲ್ಲಿ ತೊಡಗಿದ್ದರು.

ಲಕ್ಷ್ಮಣದಾಸ್ ವೇಲಣಕರ್​ 1960 ರಲ್ಲಿ ಬೆಂಗಳೂರಿಗೆ ಬಂದ ಇವರು ಭದ್ರಗಿರಿ ಸಹೋದರರಲ್ಲಿ ಆಶ್ರಯ ಪಡೆದು ಕಥಾ ಕೀರ್ತನವನ್ನು ಅಭ್ಯಸಿಸಲು ಪ್ರಾರಂಭಿಸಿದರು. ನಂತರ ದಾಸಾಶ್ರಮ ಅಂತರಾಷ್ಟ್ರೀಯ ಕೇಂದ್ರವನ್ನು ಸೇರಿ ಗುರುಕುಲ ಪದ್ಧತಿಯಂತೆ ಆಶ್ರಮದ ಎಲ್ಲಾ ಕೆಲಸ ಕಾರ್ಯಗಳನ್ನು ನಿರ್ವಹಿಸಿದರು. ಬಳಿಕ ಕೀರ್ತನ ಕಲೆಯನ್ನು ಕಲಿಯತೊಡಗಿದರು. ಸಂತ ಅಚ್ಯುತದಾಸರೊಂದಿಗೆ ಹರಿಕಥಾ ಅಧ್ಯಯನದಲ್ಲಿ ಕೂಡ ಸಹಭಾಗಿಯಾದರು.

ಇದನ್ನೂ ಓದಿ: ಹಿರಿಯ ಛಾಯಾಗ್ರಾಹಕ ಗೋಪಾಲಕೃಷ್ಣನ್​ ನಿಧನ; ಪೊಲೀಸ್​ ಠಾಣೆಗೆ ದೂರು ನೀಡಿದ ಪುತ್ರ

ಬೆಂಗಳೂರು: ರಾಷ್ಟ್ರಕವಿ ಕುವೆಂಪು ಸೊಸೆ ರಾಜೇಶ್ವರಿ ಪೂರ್ಣಚಂದ್ರ ತೇಜಸ್ವಿ ನಿಧನ

Published On - 11:42 am, Wed, 22 December 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!