AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಟೋ, ಕ್ಯಾಬ್​ ಬಳಕೆದಾರರಿಗೆ ಪ್ರತ್ಯೇಕ ಆ್ಯಪ್, ಬಿಡುಗಡೆ ಯಾವಾಗಾ ಗೊತ್ತಾ?

ಖಾಸಗಿ ಸಾರಿಗೆ ಒಕ್ಕೂಟಗಳು ಮಿತಿಮೀರಿದ ಕಮಿಷನ್ ಪಡೆಯುತ್ತಿರುವುದರಿಂದ ಆಟೋ, ಕ್ಯಾಬ್ ಚಾಲಕರು ಮತ್ತು ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಹೀಗಾಗಿ ಚಾಲಕರು ಮತ್ತು ಪ್ರಯಾಣಿಕರ ಅನುಕೂಲಕ್ಕಾಗಿ ಆ್ಯಪ್ ಅಭಿವೃದ್ಧಿಪಡಿಸಲು ಸರ್ಕಾರ ಮುಂದಾಗಿದೆ.

ಆಟೋ, ಕ್ಯಾಬ್​ ಬಳಕೆದಾರರಿಗೆ ಪ್ರತ್ಯೇಕ ಆ್ಯಪ್, ಬಿಡುಗಡೆ ಯಾವಾಗಾ ಗೊತ್ತಾ?
ಶೀಘ್ರದಲ್ಲೇ ಆಟೋ, ಕ್ಯಾಬ್​ ಬಳಕೆದಾರರಿಗೆ ಪ್ರತ್ಯೇಕ ಆ್ಯಪ್
Vinayak Hanamant Gurav
| Updated By: Rakesh Nayak Manchi|

Updated on:Aug 04, 2023 | 3:57 PM

Share

ಬೆಂಗಳೂರು, ಆಗಸ್ಟ್ 4: ಪ್ರಯಾಣಿಕರು ಮತ್ತು ಆಟೋ ರಿಕ್ಷಾ ಮತ್ತು ಕ್ಯಾಬ್ ಚಾಲಕರ ಹಿತಾಸಕ್ತಿ ಕಾಪಾಡಲು ರಾಜ್ಯ ಸರ್ಕಾರವು ಹೊಸ ಆ್ಯಪ್ ಸಿದ್ಧಪಡಿಸಲು ನಿರ್ಧರಿಸಿದೆ. ಈ ಆ್ಯಪ್ ನಾಲ್ಕೈದು ತಿಂಗಳಲ್ಲಿ ಬಿಡುಗಡೆಗೊಳ್ಳಲಿದ್ದು, ಪ್ರತಿ ಕಿ.ಮೀ.ಗೆ ಇಂತಿಷ್ಟು ದರ ನಿಗದಿಗೂ ನಿರ್ಧರಿಸಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ (Ramalingareddy) ತಿಳಿಸಿದ್ದಾರೆ.

ಒಂದೊಮ್ಮೆ ಈ ಹೊಸ ಆ್ಯಪ್ ಗ್ರಾಹಕರಿಗೆ ಲಭ್ಯವಾದರೆ, ಖಾಸಗಿ ಸಾರಿಗೆ ಒಕ್ಕೂಟಗಳು ಹೆಚ್ಚುವರಿ ಹಣ ವಸೂಲಿ ಮಾಡುವುದಕ್ಕೆ ಬ್ರೇಕ್ ಬೀಳಲಿದೆ. ಹೊಸ ಆ್ಯಪ್ ಜೊತೆಗೆ, ಬಿಎಂಆರ್‌ಸಿಎಲ್ ಜೊತೆ ಸೇರಿ ಎಲ್ಲಾ ಮೆಟ್ರೋ ನಿಲ್ದಾಣಗಳಲ್ಲಿ ಆಟೋ ಸ್ಟ್ಯಾಂಡ್‌ಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.

ಇದನ್ನೂ ಓದಿ: ನಿಮ್ಮ ಅವಧಿಯಲ್ಲಿ 25ನೇ ತಾರೀಕಿನವರೆಗೂ ವೇತನ ನೀಡಿರಲಿಲ್ಲ: ಬೊಮ್ಮಾಯಿಗೆ ರಾಮಲಿಂಗಾರೆಡ್ಡಿ ತಿರುಗೇಟು

ಸಾರಿಗೆ ಬಸ್​ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡುವ ಶಕ್ತಿ ಯೋಜನೆ ಜಾರಿ ನಂತರ ಆಟೋ, ಕ್ಯಾಬ್ ಹಾಗೂ ಖಾಸಗಿ ಬಸ್​ ಮಾಲೀಕರ ಆದಾಯಕ್ಕೆ ಹೊಡೆತ ಬಿದ್ದಿದೆ. ಹೀಗಾಗಿ ಈ ಯೋಜನೆ ಹಿಂಪಡೆಯುವುದು ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಆಗ್ರಹಿಸಿ ಜುಲೈ 27 ರಂದು ಬೆಂಗಳೂರು ಖಾಸಗಿ ಸಾರಿಗೆ ಒಕ್ಕೂಟಗಳು ಪ್ರತಿಭಟನೆ ನಡೆಸುವುದಾಗಿ ಘೋಷಿಸಿತ್ತು.

ಆಟೋ ಬಂದ್ ಘೋಷಣೆ ನಂತರ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಇತ್ತೀಚೆಗೆ ಸಾರಿಗೆ ಚಾಲಕರು ಮಾಲೀಕರೊಂದಿಗೆ ಸರಣಿ ಸಭೆ ನಡೆಸಿದ್ದರು. ಈ ವೇಳೆ ಆಟೋ, ಕ್ಯಾಬ್ ಚಾಲಕರು ಹಾಗೂ ಮಾಲೀಕರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಹಿನ್ನೆಲೆ ಪ್ರತಿಭಟನೆಯನ್ನು ಹಿಂಪಡೆಯಲಾಗಿತ್ತು. ಅಲ್ಲದೆ, ಬೇಡಿಕೆ ಈಡೇರಿಕೆಗೆ ಸರ್ಕಾರಕ್ಕೆ ಆಗಸ್ಟ್ 10 ರ ಗಡುವು ನೀಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:36 pm, Fri, 4 August 23

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ