AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ- ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಬೆಂಗಳೂರಿನಲ್ಲಿ ಬಂದ್ ಠುಸ್ ಪಟಾಕಿ

ಬೆಂಗಳೂರಿನಲ್ಲಿ ಬಂದ್​ಗೆ ಬೆಂಬಲ ನೀಡದೇ ಎಂದಿನಂತೆ ವಾಹನ ಸಂಚರಿಸುತ್ತಿವೆ. ದೇವನಹಳ್ಳಿ ಎರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

ಕೃಷಿ ಕಾಯ್ದೆ- ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಬೆಂಗಳೂರಿನಲ್ಲಿ ಬಂದ್ ಠುಸ್ ಪಟಾಕಿ
ದೇವನಹಳ್ಳಿ ಏರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ
TV9 Web
| Updated By: preethi shettigar|

Updated on:Sep 27, 2021 | 9:28 AM

Share

ಬೆಂಗಳೂರು: ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಇಂದು ( ಸೆಪ್ಟೆಂಬರ್ 27) ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಬಂದ್​ಗೆ ಬೆಂಬಲ ನೀಡದೇ ಎಂದಿನಂತೆ ವಾಹನ ಸಂಚರಿಸುತ್ತಿವೆ. ದೇವನಹಳ್ಳಿ ಎರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ. ಓಲಾ ಊಬರ್, ಟ್ಯಾಕ್ಸಿ, ಆಟೋ, ಬಿಎಂಟಿಸಿ ಕೆಎಸ್​ಆರ್​ಟಿಸಿ, ಬಸ್​ಗಳು ಎಂದಿನಂತೆ ಓಡಾಡುತ್ತಿವೆ.

ಹೋಟೆಲ್ ಉದ್ಯಮ ನೈತಿಕ ಬೆಂಬಲ ರೈತ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿದ್ದು, ಹೋಟೆಲ್ ಉದ್ಯಮ ನೈತಿಕ ಬೆಂಬಲ ನೀಡಿದೆ. ಮೆಜೆಸ್ಟಿಕ್ ಸುತ್ತಲೂ ಹೋಟೆಲ್​ಗಳು ಯಥಾಸ್ಥಿತಿಯಲ್ಲಿ ತೆರೆದಿದ್ದು, ಗ್ರಾಹಕರಿಗೆ ಸೇವೆ ನೀಡುತ್ತಿವೆ.

ಕೆ.ಆರ್‌.ಪುರ ಮಾರ್ಕೆಟ್: ವರ್ತಕರಿಂದ ಅಗತ್ಯ ಸಾಮಾಗ್ರಿಗಳ ಖರೀದಿ ಭಾರತ್ ಬಂದ್ ಹಿನ್ನೆಲೆ ಇಂದು ಗ್ರಾಹಕರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ನಿನ್ನೆಯೇ ಅಗತ್ಯ ಸಾಮಾಗ್ರಿಗಳನ್ನು ಜನರು ಖರೀದಿಸಿದ್ದು, ಇಂದು ಬೀದಿಬದಿ ವ್ಯಾಪಾರಿಗಳಿಂದ ಹೆಚ್ಚು ಖರೀದಿಸಲಾಗುತ್ತಿದೆ. ಆಟೋ, ದ್ವಿಚಕ್ರ ವಾಹನಗಳ ಮೂಲಕ ಹೂವು, ತರಕಾರಿ, ಹಣ್ಣು ಸೇರಿದಂತೆ ಅಗತ್ಯ ಸಾಮಾಗ್ರಿಗಳನ್ನು ಮೂಟೆಗಳಲ್ಲಿ ಸಾಗಾಣೆ ಮಾಡಲಾಗುತ್ತಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳ್ಳಂ ಬೆಳಗ್ಗೆ ಪ್ರಯಾಣಿಕರ ದಂಡು ಬೆಲೆ ಏರಿಕೆ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ ಹಿನ್ನಲೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳ್ಳಂ ಬೆಳಗ್ಗೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಬಂದ್ ಹಿನ್ನಲೆ ಬಸ್ ಸಿಗುತ್ತೊ, ಇಲ್ಲವೋ ಎಂದು ಬೆಳಗ್ಗೆಯೇ ಪ್ರಯಾಣಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಐಎಬಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ:

Bharat Bandh: ಸೆಪ್ಟೆಂಬರ್ 27 ಭಾರತ್ ಬಂದ್‌, ಇದಕ್ಕೆ ಯಾರ್ಯಾರ ಬೆಂಬಲವಿದೆ?

ಸೆ 27ರ ಭಾರತ್ ಬಂದ್​ಗೆ ಹಾವೇರಿ, ದಾವಣಗೆರೆ ರೈತ ಸಂಘಟನೆಗಳು, ಓಲಾ-ಊಬರ್ ಕಾರ್ಮಿಕರ ಬೆಂಬಲ

Published On - 7:42 am, Mon, 27 September 21

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ