AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೃಷಿ ಕಾಯ್ದೆ- ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಬೆಂಗಳೂರಿನಲ್ಲಿ ಬಂದ್ ಠುಸ್ ಪಟಾಕಿ

ಬೆಂಗಳೂರಿನಲ್ಲಿ ಬಂದ್​ಗೆ ಬೆಂಬಲ ನೀಡದೇ ಎಂದಿನಂತೆ ವಾಹನ ಸಂಚರಿಸುತ್ತಿವೆ. ದೇವನಹಳ್ಳಿ ಎರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ.

ಕೃಷಿ ಕಾಯ್ದೆ- ಬೆಲೆ ಏರಿಕೆ ವಿರೋಧಿಸಿ ಭಾರತ್ ಬಂದ್: ಬೆಂಗಳೂರಿನಲ್ಲಿ ಬಂದ್ ಠುಸ್ ಪಟಾಕಿ
ದೇವನಹಳ್ಳಿ ಏರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ
TV9 Web
| Edited By: |

Updated on:Sep 27, 2021 | 9:28 AM

Share

ಬೆಂಗಳೂರು: ಕೃಷಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರೋಧಿಸಿ ಇಂದು ( ಸೆಪ್ಟೆಂಬರ್ 27) ಭಾರತ್ ಬಂದ್​ಗೆ ಕರೆ ನೀಡಲಾಗಿದೆ. ಆದರೆ ಬೆಂಗಳೂರಿನಲ್ಲಿ ಬಂದ್​ಗೆ ಬೆಂಬಲ ನೀಡದೇ ಎಂದಿನಂತೆ ವಾಹನ ಸಂಚರಿಸುತ್ತಿವೆ. ದೇವನಹಳ್ಳಿ ಎರ್​ಪೋರ್ಟ್​ ರಸ್ತೆಯ ಹೆಬ್ಬಾಳ ಭಾಗದಲ್ಲಿ ಎಂದಿನಂತೆ ವಾಹನ ಸಂಚಾರ ಆರಂಭವಾಗಿದೆ. ಓಲಾ ಊಬರ್, ಟ್ಯಾಕ್ಸಿ, ಆಟೋ, ಬಿಎಂಟಿಸಿ ಕೆಎಸ್​ಆರ್​ಟಿಸಿ, ಬಸ್​ಗಳು ಎಂದಿನಂತೆ ಓಡಾಡುತ್ತಿವೆ.

ಹೋಟೆಲ್ ಉದ್ಯಮ ನೈತಿಕ ಬೆಂಬಲ ರೈತ ಸಂಘಟನೆಗಳಿಂದ ಭಾರತ್ ಬಂದ್​ಗೆ ಕರೆ ನೀಡಿದ್ದು, ಹೋಟೆಲ್ ಉದ್ಯಮ ನೈತಿಕ ಬೆಂಬಲ ನೀಡಿದೆ. ಮೆಜೆಸ್ಟಿಕ್ ಸುತ್ತಲೂ ಹೋಟೆಲ್​ಗಳು ಯಥಾಸ್ಥಿತಿಯಲ್ಲಿ ತೆರೆದಿದ್ದು, ಗ್ರಾಹಕರಿಗೆ ಸೇವೆ ನೀಡುತ್ತಿವೆ.

ಕೆ.ಆರ್‌.ಪುರ ಮಾರ್ಕೆಟ್: ವರ್ತಕರಿಂದ ಅಗತ್ಯ ಸಾಮಾಗ್ರಿಗಳ ಖರೀದಿ ಭಾರತ್ ಬಂದ್ ಹಿನ್ನೆಲೆ ಇಂದು ಗ್ರಾಹಕರ ಸಂಖ್ಯೆಯಲ್ಲಿ ಕೊಂಚ ಇಳಿಕೆ ಕಂಡುಬಂದಿದೆ. ನಿನ್ನೆಯೇ ಅಗತ್ಯ ಸಾಮಾಗ್ರಿಗಳನ್ನು ಜನರು ಖರೀದಿಸಿದ್ದು, ಇಂದು ಬೀದಿಬದಿ ವ್ಯಾಪಾರಿಗಳಿಂದ ಹೆಚ್ಚು ಖರೀದಿಸಲಾಗುತ್ತಿದೆ. ಆಟೋ, ದ್ವಿಚಕ್ರ ವಾಹನಗಳ ಮೂಲಕ ಹೂವು, ತರಕಾರಿ, ಹಣ್ಣು ಸೇರಿದಂತೆ ಅಗತ್ಯ ಸಾಮಾಗ್ರಿಗಳನ್ನು ಮೂಟೆಗಳಲ್ಲಿ ಸಾಗಾಣೆ ಮಾಡಲಾಗುತ್ತಿದೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳ್ಳಂ ಬೆಳಗ್ಗೆ ಪ್ರಯಾಣಿಕರ ದಂಡು ಬೆಲೆ ಏರಿಕೆ ಕೃಷಿ ಮಸೂದೆ ವಿರೋಧಿಸಿ ಭಾರತ್ ಬಂದ್ ಹಿನ್ನಲೆ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬೆಳ್ಳಂ ಬೆಳಗ್ಗೆ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದಾರೆ. ಬಂದ್ ಹಿನ್ನಲೆ ಬಸ್ ಸಿಗುತ್ತೊ, ಇಲ್ಲವೋ ಎಂದು ಬೆಳಗ್ಗೆಯೇ ಪ್ರಯಾಣಿಕರು ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ಬಳಿಯ ಕೆಐಎಬಿಗೆ ಆಗಮಿಸಿದ್ದಾರೆ.

ಇದನ್ನೂ ಓದಿ:

Bharat Bandh: ಸೆಪ್ಟೆಂಬರ್ 27 ಭಾರತ್ ಬಂದ್‌, ಇದಕ್ಕೆ ಯಾರ್ಯಾರ ಬೆಂಬಲವಿದೆ?

ಸೆ 27ರ ಭಾರತ್ ಬಂದ್​ಗೆ ಹಾವೇರಿ, ದಾವಣಗೆರೆ ರೈತ ಸಂಘಟನೆಗಳು, ಓಲಾ-ಊಬರ್ ಕಾರ್ಮಿಕರ ಬೆಂಬಲ

Published On - 7:42 am, Mon, 27 September 21

ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಚಿಕ್ಕಮಗಳೂರಲ್ಲಿ ವರುಣನ ಅಬ್ಬರ: ಅಕಾಲಿಕ ಮಳೆಗೆ ಕೊಚ್ಚಿಹೋದ ಕಾಫಿ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕಾರು ಅಪಘಾತಕ್ಕೆ 1 ವರ್ಷ: ಅಂದಿನ ಕಹಿ ಘಟನೆಯನ್ನು ಮೆಲುಕು ಹಾಕಿದ ಸಚಿವೆ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ಕೇರಳದಲ್ಲಿ ಕರ್ನಾಟಕ ಅಯ್ಯಪ್ಪ ಮಾಲಾಧಾರಿಗಳ ವಾಹನಗಳಿಗೆ ನಿರ್ಬಂಧ
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
ರಾಹುಲ್ ಗಾಂಧಿ ಭೇಟಿ ಬಳಿಕ ಸಿದ್ರಾಮಯ್ಯ ಕೊಟ್ಟ ಸುಳಿವು ಏನು?
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
24 ತಲೆಗಳ 6 ತಲೆಗೆ ಇಳಿಸಿದ್ದೀನಿ, ನಾನು ಒನ್ ಮ್ಯಾನ್ ಆರ್ಮಿ: ಧ್ರುವಂತ್
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಡಾನ್​​ ರೀತಿ ಗನ್​​ ಹಿಡಿದು ಆವಾಜ್​​ ಹಾಕಿದ್ದಾತ ತಂದಿದ್ದು ನಕಲಿ ಬಂದೂಕು!
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಗಿಲ್ಲಿ ನಟ ಬಡವನಾ ಅಥವಾ ಶ್ರೀಮಂತನಾ? ಅಸಲಿ ವಿಷಯ ತೆರೆದಿಟ್ಟ ಸಂಬಂಧಿಕರು
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಸಿಕ್ಕ ನಿಧಿಯನ್ನು ಸರ್ಕಾರಕ್ಕೆ ನೀಡಿದ ಕುಟುಂಬಕ್ಕೆ ಬಂಪರ್ ಗಿಫ್ಟ್
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಜೈಲಿಗೆ ಹೋಗಿ ಬಂದ್ರೂ ಬಾರದ ಬುದ್ಧಿ: ಮತ್ತೆ ದರೋಡೆ ಮಾಡಿದ್ದ ಟೀಂ​​ ಅಂದರ್​​
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ
ಮಾದಪ್ಪನ ಬೆಟ್ಟದ ತಪ್ಪಲಿನ ರಸ್ತೆಗೆ ಬಂದ ಭಾರಿ ಗಾತ್ರದ ಒಂಟಿ ಸಲಗ