AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

80 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ತೆರವು ಕಾರ್ಯಕ್ಕೆ ತಡೆ; ಪ್ರಭಾವಿ ಸಚಿವ ವಿರುದ್ಧ ಗಂಭೀರ ಆರೋಪ

ನ್ಯಾಯಾಲಯದ ಆದೇಶದಂತೆ 80 ಕೋಟಿ ರೂ. ಮೌಲ್ಯದ ಒತ್ತುವರಿ ಜಾಗವನ್ನು ವಶಪಡಿಸಿಕೊಳ್ಳಲು ಹಾಗೂ ಒತ್ತುವರಿ ಜಾಗ ತೆರವು ಮಾಡಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದರು. ಆದರೆ ಅಧಿಕಾರಿಗಳ ಕಾರ್ಯಾಚರಣೆಗೆ ಸರ್ಕಾರ ಮಟ್ಟದಲ್ಲಿ ಪ್ರಭಾವ ಬಳಸಿ ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂಬ ಆರೋಪವಿದೆ.

80 ಕೋಟಿ ರೂ. ಮೌಲ್ಯದ ಬಿಡಿಎ ಆಸ್ತಿ ತೆರವು ಕಾರ್ಯಕ್ಕೆ ತಡೆ; ಪ್ರಭಾವಿ ಸಚಿವ ವಿರುದ್ಧ ಗಂಭೀರ ಆರೋಪ
ಬಿಡಿಎ ಆಸ್ತಿ ತೆರವು ಕಾರ್ಯಕ್ಕೆ ತಡೆ
TV9 Web
| Edited By: |

Updated on: Sep 25, 2021 | 12:10 PM

Share

ಬೆಂಗಳೂರು: ಒತ್ತುವರಿಯಾಗಿದ್ದ 80 ಕೋಟಿ ರೂಪಾಯಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ ಪಡೆಯಲು ಸಚಿವರೊಬ್ಬರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ. ಬಿಡಿಎಗೆ (BDA) ಸೇರಿದ್ದ ಜಾಗವನ್ನು ವಶಪಡಿಸಿಕೊಳ್ಳಲು ಮುಂದಾದ ಅಧಿಕಾರಿಗಳಿಗೆ ಸರ್ಕಾರದ ಪ್ರಭಾವ ಬಳಸಿ, ಒತ್ತುವರಿ ಕಾರ್ಯ ಸ್ಥಗಿತಗೊಳಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನ್ಯಾಯಾಲಯದ ಆದೇಶದಂತೆ 80 ಕೋಟಿ ರೂ. ಮೌಲ್ಯದ ಒತ್ತುವರಿ ಜಾಗವನ್ನು ವಶಪಡಿಸಿಕೊಳ್ಳಲು ಹಾಗೂ ಒತ್ತುವರಿ ಜಾಗ ತೆರವು ಮಾಡಲು ಬಿಡಿಎ ಅಧಿಕಾರಿಗಳು ಮುಂದಾಗಿದ್ದರು. ಆದರೆ ಅಧಿಕಾರಿಗಳ ಕಾರ್ಯಾಚರಣೆಗೆ ಸರ್ಕಾರ ಮಟ್ಟದಲ್ಲಿ ಪ್ರಭಾವ ಬಳಸಿ ಒತ್ತುವರಿ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಎಂಬ ಆರೋಪವಿದೆ.

ಬೆಂಗಳೂರಿನ ಭೂಪಸಂದ್ರದ ಸರ್ವೆ ನಂಬರ್‌ 17 ರ ಒಂದು ಎಕರೆ ಜಾಗಕ್ಕೆ ಸಂಬಂಧಪಟ್ಟ ಪ್ರಕರಣ ಹೈಕೋರ್ಟ್‌ ಮತ್ತು ಸುಪ್ರೀಂಕೋರ್ಟ್‌ನಲ್ಲಿ ನಡೆದು ಬಿಡಿಎ ಪರ ತೀರ್ಪು ಬಂದಿತ್ತು. ಕೋರ್ಟ್ ಆದೇಶದಂತೆ ಒತ್ತುವರಿ ತೆರವು ಮಾಡಲು ಹೋಗಿದ್ದ ಬಿಡಿಎ ಅಧಿಕಾರಿಗಳು ಅಕ್ರಮವಾಗಿ ಈ ಜಾಗದಲ್ಲಿ ನಿರ್ಮಾಣ ಮಾಡಲಾಗಿದ್ದ ಕಾಂಪೌಂಡ್‌ ಮತ್ತು ಕೋಳಿ ಫಾರಂ ನೆಲಸಮ ಮಾಡಿದ್ದಾರೆ.

ಈ ವಿಷಯ ತಿಳಿಯುತ್ತಿದ್ದಂತೆ, ಈ ವಿಷಯಕ್ಕೆ ಸಂಬಂಧಪಡದೇ ಇದ್ದರೂ ಪ್ರಭಾವಿ ಸಚಿವರೊಬ್ಬರು ಅಧಿಕಾರಿಗಳ ಮೇಲೆ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಕೋರ್ಟ್ ಆದೇಶದ ಕಾರಣ ಸಚಿವರ ಒತ್ತಡಕ್ಕೆ ಅಧಿಕಾರಿಗಳು ಮಣಿಯದೆ ಇದ್ದಿದ್ದರಿಂದ, ಸಚಿವರು ಸರಕಾರದ ಮಟ್ಟದಲ್ಲಿ ತಮ್ಮ ಪ್ರಭಾವ ಬೀರಿ ತಡೆಯೊಡ್ಡಿದ್ದಾರೆ ಎಂಬ ಗಂಭೀರ ಆರೋಪ ಕೇಳಿ ಬಂದಿದೆ.

ಇದನ್ನೂ ಓದಿ: ಸೀರೆಯಿಂದ ವಿವಾದಕ್ಕೀಡಾದ ದೆಹಲಿ ರೆಸ್ಟೋರೆಂಟ್​; ತಾನೇ ಮ್ಯಾನೇಜರ್​​ಗೆ ಹೊಡೆದು, ಸುಳ್ಳು ಆರೋಪ ಮಾಡಿದರಾ ಮಹಿಳೆ?

ಅಸ್ಸಾಂನಲ್ಲಿ ತೆರವು ಕಾರ್ಯಾಚರಣೆ ವೇಳೆ ಘರ್ಷಣೆ: ಪೊಲೀಸರಿಂದ ಲಾಠಿ ಪ್ರಹಾರ, ಗುಂಡಿನ ದಾಳಿಗೆ ಇಬ್ಬರು ವ್ಯಕ್ತಿಗಳು ಸಾವು

(Serious allegations against influential minister who trying to stop eviction of BDA property in Bengaluru)

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ