AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Gruha Jyothi Scheme: ಸರ್ವರ್ ಸಮಸ್ಯೆ, ಮೀಟರ್ ರೀಡರ್‌ಗಳ ಕೊರತೆ: ಗಡುವಿನೊಳಗೆ ಸಿಗಲ್ವಾ ಉಚಿತ ವಿದ್ಯುತ್ ಭಾಗ್ಯ?

ಕರ್ನಾಟಕದಲ್ಲಿ ಸರ್ವರ್ ತಾಂತ್ರಿಕ ತೊಡಕು ಹಾಗೂ ಮೀಟರ್ ರೀಡರ್‌ಗಳ ಅಭಾವದಿಂದ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆ ತೀವ್ರ ವಿಳಂಬವಾಗಿದೆ. ಸೇವಾ ಸಿಂಧು ಪೋರ್ಟಲ್ ಮಂದಗತಿಯಲ್ಲಿದ್ದು, 1.65 ಕೋಟಿ ಫಲಾನುಭವಿಗಳ ಪೈಕಿ ಕೇವಲ 45 ಲಕ್ಷ ಮನೆಗಳ ಪರಿಶೀಲನೆ ಮಾತ್ರ ಮುಗಿದಿದೆ. ಪರಿಣಾಮ ಆಗಸ್ಟ್ 31ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಇನ್ನು 20,000ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಉಚಿತ ವಿದ್ಯುತ್ ಸೌಲಭ್ಯವನ್ನು ಬಿಟ್ಟುಕೊಟ್ಟಿದ್ದಾರೆ.

Gruha Jyothi Scheme: ಸರ್ವರ್ ಸಮಸ್ಯೆ, ಮೀಟರ್ ರೀಡರ್‌ಗಳ ಕೊರತೆ: ಗಡುವಿನೊಳಗೆ ಸಿಗಲ್ವಾ ಉಚಿತ ವಿದ್ಯುತ್ ಭಾಗ್ಯ?
ಸಾಂದರ್ಭಿಕ ಚಿತ್ರImage Credit source: gettyimages.com
ಭಾವನಾ ಹೆಗಡೆ
|

Updated on: Jul 27, 2026 | 3:28 PM

Share

ಮುಖ್ಯಾಂಶಗಳು

  • ಸರ್ವರ್ ಸಮಸ್ಯೆಯಿಂದ ಗೃಹ ಜ್ಯೋತಿ ಮನೆ-ಮನೆ ಪರಿಶೀಲನೆ ಪ್ರಕ್ರಿಯೆ ತೀವ್ರ ವಿಳಂಬವಾಗಿದೆ.
  • ಆಗಸ್ಟ್ 31ರೊಳಗೆ 1.65 ಕೋಟಿ ಮನೆಗಳ ಪರಿಶೀಲನೆ ಪೂರ್ಣಗೊಳ್ಳುವುದು ಅನುಮಾನವಾಗಿದೆ.
  • 20,000ಕ್ಕೂ ಹೆಚ್ಚು ಫಲಾನುಭವಿಗಳು ಗೃಹ ಜ್ಯೋತಿ ಯೋಜನೆಯಿಂದ ಸ್ವಯಂಪ್ರೇರಿತವಾಗಿ ಹೊರಬಂದಿದ್ದಾರೆ.

ಬೆಂಗಳೂರು, ಜುಲೈ 27: ಕರ್ನಾಟಕದಲ್ಲಿ ಗೃಹ ಜ್ಯೋತಿ ಯೋಜನೆಯ ಮನೆ-ಮನೆ ಪರಿಶೀಲನೆಗೆ ವಿಳಂಬವಾಗಿದೆ. ಸೇವಾ ಸಿಂಧು ಪೋರ್ಟಲ್‌ನಲ್ಲಿ ಸರ್ವರ್ ಸಮಸ್ಯೆಯಿಂದ ಆ್ಯಪ್ ಕಾರ್ಯನಿರ್ವಹಣೆ ಮಂದಗತಿಯಲ್ಲಿದ್ದು, ಜೊತೆಗೆ ರಾಜ್ಯಾದ್ಯಂತ ಮೀಟರ್ ರೀಡರ್‌ಗಳ ತೀವ್ರ ಅಭಾವ ಎದುರಾಗಿದೆ. 1.65 ಕೋಟಿ ಫಲಾನುಭವಿಗಳ ಪೈಕಿ ಕೇವಲ 45 ಲಕ್ಷ ಮನೆಗಳ ಪರಿಶೀಲನೆಯಷ್ಟೇ ಮುಗಿದಿದ್ದು, ನಿಗದಿತ ಆಗಸ್ಟ್ 31ರ ಗಡುವಿನೊಳಗೆ ಪ್ರಕ್ರಿಯೆ ಪೂರ್ಣಗೊಳ್ಳುವುದು ಅನುಮಾನವಾಗಿದೆ. ಇನ್ನು 20,000ಕ್ಕೂ ಹೆಚ್ಚು ಜನರು ಸ್ವಯಂಪ್ರೇರಿತವಾಗಿ ಯೋಜನೆಯಿಂದ ಹೊರಬಂದಿದ್ದಾರೆ.

ಪ್ರಸ್ತುತ ಪ್ರಗತಿ

ರಾಜ್ಯದಲ್ಲಿ ಒಟ್ಟು 1.65 ಕೋಟಿ ಫಲಾನುಭವಿಗಳನ್ನು ಪರಿಶೀಲಿಸುವ ಗುರಿ ಹೊಂದಲಾಗಿದ್ದು, ಜುಲೈ 1 ರಿಂದ ಆರಂಭವಾದ ಈ ಪ್ರಕ್ರಿಯೆಯಲ್ಲಿ ಇದುವರೆಗೆ ಕೇವಲ 45 ಲಕ್ಷ ಮನೆಗಳ ಪರಿಶೀಲನೆ ಮಾತ್ರ ಪೂರ್ಣಗೊಂಡಿದೆ. ನಿಗದಿತ ಆಗಸ್ಟ್ 31ರೊಳಗೆ ಈ ಬೃಹತ್ ಗುರಿಯನ್ನು ತಲುಪುವುದು ಕಷ್ಟಕರವೆನಿಸಿದೆ.

ಇಡೀ ರಾಜ್ಯಾದ್ಯಂತ ಕೇವಲ 21,602 ಮೀಟರ್ ರೀಡರ್‌ಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಬೆಸ್ಕಾಂ (Bescom) ವ್ಯಾಪ್ತಿಯಲ್ಲಿ 65 ಲಕ್ಷ ಫಲಾನುಭವಿಗಳಿದ್ದು, ಪರಿಶೀಲನೆಗೆ ಕೇವಲ 7,409 ಮೀಟರ್ ರೀಡರ್‌ಗಳಿದ್ದಾರೆ. ಈಗಾಗಲೇ 25 ಲಕ್ಷ ಮನೆಗಳ ಪರಿಶೀಲನೆ ಮುಗಿದಿದ್ದು, ಇನ್ನು 40 ಲಕ್ಷ ಮನೆಗಳು ಬಾಕಿ ಇವೆ.

ಸರ್ವರ್ ಕ್ರ್ಯಾಶ್ ಮತ್ತು ತಾಂತ್ರಿಕ ತೊಡಕು

ಗೃಹ ಜ್ಯೋತಿ ಡೇಟಾವನ್ನು ‘ಸೇವಾ ಸಿಂಧು’ ಪೋರ್ಟಲ್‌ಗೆ ಅಪ್‌ಲೋಡ್ ಮಾಡಲಾಗುತ್ತದೆ. ಇದೇ ಪೋರ್ಟಲ್‌ನಲ್ಲಿ ಗೃಹ ಲಕ್ಷ್ಮಿ, ಶಕ್ತಿ ಯೋಜನೆ, ರೇಷನ್ ಕಾರ್ಡ್ ಮತ್ತು ಗ್ರೇಟರ್ ಬೆಂಗಳೂರು ಪ್ರಾಧಿಕಾರದ (GBA) ಖಾತಾ ಸೇವೆಗಳು ಕಾರ್ಯನಿರ್ವಹಿಸುತ್ತಿರುವುದರಿಂದ ಸರ್ವರ್ ಮೇಲಿನ ಲೋಡ್ ಹೆಚ್ಚಾಗಿ ಆ್ಯಪ್ ಪದೇ ಪದೇ ಸ್ಲೋ ಆಗುತ್ತಿದೆ ಅಥವಾ ಕ್ರ್ಯಾಶ್ ಆಗುತ್ತಿದೆ.

ಸುಮಾರು 20,000ಕ್ಕೂ ಹೆಚ್ಚು ಫಲಾನುಭವಿಗಳು ತಮ್ಮ ವೈಯಕ್ತಿಕ ವಿವರಗಳನ್ನು ನೀಡಲು ನಿರಾಕರಿಸಿದ್ದು, ‘Part B’ ಫಾರ್ಮ್‌ಗೆ ಸಹಿ ಮಾಡುವ ಮೂಲಕ ಸ್ವಯಂಪ್ರೇರಿತವಾಗಿ ಗೃಹ ಜ್ಯೋತಿ ಯೋಜನೆಯ ಉಚಿತ ವಿದ್ಯುತ್ ಸೌಲಭ್ಯವನ್ನು ಬಿಟ್ಟುಕೊಟ್ಟಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
ಸತೀಶ್ ಜಾರಕಿಹೊಳಿ ಆಪ್ತರ ಮನೆಗಳಲ್ಲಿ ಮಹತ್ವದ ದಾಖಲೆ ಪತ್ತೆ
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
‘ಓಂ’ ನನ್ನ ಮೆಚ್ಚಿನ ಸಿನಿಮಾ ಎಂದ ತೆಲುಗು ನಟ ಸುನಿಲ್
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
40 ಶಾಸಕರು, ಸಚಿವರನ್ನು ಗುರಿಯಾಗಿಸಿ ಇಡಿ ದಾಳಿ ನಡೆಯಬಹುದು: ಸಿಎಂ ಎಚ್ಚರಿಕೆ
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್​​ ಜಾರಕಿಹೊಳಿಗೆ ಇಡಿ ಶಾಕ್​​: ಸಿಎಂ ಡಿಕೆ ಶಿವಕುಮಾರ್​​ ಹೇಳಿದ್ದೇನು?
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
ಸತೀಶ್ ಜಾರಕಿಹೊಳಿ ನಿವಾಸಗಳ ಮೇಲೆ ಇಡಿ ಶೋಧ: ಸಿಎಂಗೆ ಖರ್ಗೆ ಮಾಹಿತಿ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
‘ಬಿಗ್ ಬಾಸ್’ನಲ್ಲಿ ಗಗನ್ ಹಾಗೂ ಮಂಜು ನಡುವೆ ನಡೆಯಿತು ವಾಗ್ವಾದ
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಬೆಳ್ಳಂಬೆಳಗ್ಗೆಯೇ ಸತೀಶ್​ ಜಾರಕಿಹೊಳಿ ಮನೆಗಳ ಮೇಲೆ ಇಡಿ ರೇಡ್ ಆಗಿದ್ದೇಕೆ?
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸತೀಶ್ ಜಾರಕಿಹೊಳಿಗೆ ಡಬಲ್ ಶಾಕ್! ಗೋಕಾಕ್ ನಿವಾಸದ ಮೇಲೂ ಇಡಿ ರೇಡ್
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಸಚಿವ ಮಲ್ಲಿಕಾರ್ಜುನ್ ಅವಾಚ್ಯ ನಿಂದನೆ ವಿರುದ್ಧ ಶಾಸಕ ಬಿಪಿ ಹರೀಶ್ ಆಕ್ರೋಶ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ
ಲ್ಯಾಂಡಿಂಗ್ ವೇಳೆ ತೊಂದರೆ ಅನುಭವಿಸಿದ ರಾಹುಲ್ ಇದ್ದ ವಿಮಾನ