AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

Bengaluru Namma Metro: ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಹಸಿರು ಮಾರ್ಗದ ಯಾವೆಲ್ಲ ಸ್ಟೇಷನ್​ಗೆ ಮೆಟ್ರೋ ಇಲ್ಲ? ಎಲ್ಲಿಯವರೆಗೆ ಮೆಟ್ರೋ ಇದೆ ಎನ್ನುವ ವಿವರ ಇಲ್ಲಿದೆ.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ
ನಮ್ಮ ಮೆಟ್ರೋ
Follow us
Kiran Surya
| Updated By: ರಮೇಶ್ ಬಿ. ಜವಳಗೇರಾ

Updated on:Oct 03, 2023 | 8:11 AM

ಬೆಂಗಳೂರು, (ಅಕ್ಟೋಬರ್ 03): ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು (Bengaluru) ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದೆರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.

ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ, ಸ್ಯಾಂಡಲ್​ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸೇವೆ ಸಂಚಾರ ಇರುವುದಿಲ್ಲ, ಇನ್ನುಳಿಂದತೆ ಸದ್ಯ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್​ಸಿಎಲ್​ ಮನವಿ ಮಾಡಿದೆ.

ಇದನ್ನೂ ಓದಿ: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ರೀ ರೈಲ್ ವಾಹನವನ್ನು‌ ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರಿಗೆ ಭಾರೀ ಅನಾನುಕೂಲ ಉಂಟಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 am, Tue, 3 October 23

ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಬುಮ್ರಾ ಬೌಲಿಂಗ್​ನಲ್ಲಿ ಸಿಕ್ಸರ್ ಬಾರಿಸಿದ ರವಿ ಬಿಷ್ಣೋಯ್; ವಿಡಿಯೋ
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಆಪರೇಷನ್ ಆಗಿದೆ, ಆರೋಗ್ಯ ಸರಿಯಿಲ್ಲ: ವಿನೋದ್ ರಾಜ್​
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಭಾರತ-ಪಾಕ್​ ಗಡಿಯಿಂದ Tv9 ಗ್ರೌಂಡ್​ ರಿಪೋರ್ಟ್​: ಸನ್ನದ್ಧವಾಗಿರುವ BSF ಯೋಧ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ಐಪಿಎಲ್​ನಲ್ಲಿ ವಿಶೇಷ ಮೈಲಿಗಲ್ಲು ಸ್ಥಾಪಿಸಿದ ಸೂರ್ಯ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ನಮ್ಮ ರಕ್ತ ಕುದಿಯುತ್ತಿದೆ: ಪಹಲ್ಗಾಮ್​ ದಾಳಿಗೆ ಶ್ರೀಮುರಳಿ ಪ್ರತಿಕ್ರಿಯೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕರ್ನಾಟಕದಲ್ಲಿ ನೆಲೆಸಿರುವ ಪಾಕ್​ ಪ್ರಜೆಗಳನ್ನು ಹೊರಗೆ ಹಾಕಲು ದಿಟ್ಟ ಹೆಜ್ಜೆ
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಕೆನಡಾದ ರಸ್ತೆಯಲ್ಲಿ ಜನರ ಮೇಲೆ ನುಗ್ಗಿದ ಕಾರು, ಹಲವು ಮಂದಿ ಸಾವು
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಪಾಕಿಸ್ತಾನದ ಮೇಲೆ ಯುದ್ಧ: ವರಸೆ ಬದಲಿಸಿದ ಸಿದ್ದರಾಮಯ್ಯ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಈ ತಪ್ಪು ತಿದ್ದಿಕೊಳ್ಳದಿದ್ದರೇ ದಕ್ಷಿಣ ಕನ್ನಡಕ್ಕೆ ಅನಾಹುತ: ದೈವರಾಧಕ ಎಚ್ಚರ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ
ಕೆಲವರು ಚಿಲ್ಲರೆ ಹೇಳಿಕೆ ಕೊಡುತ್ತಿದ್ದಾರೆ: ಮತ್ತೆ ಗುಡುಗಿದ ಡಿಕೆಶಿ