AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ

Bengaluru Namma Metro: ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು ನಮ್ಮ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಹಸಿರು ಮಾರ್ಗದ ಯಾವೆಲ್ಲ ಸ್ಟೇಷನ್​ಗೆ ಮೆಟ್ರೋ ಇಲ್ಲ? ಎಲ್ಲಿಯವರೆಗೆ ಮೆಟ್ರೋ ಇದೆ ಎನ್ನುವ ವಿವರ ಇಲ್ಲಿದೆ.

ಹಳಿ ತಪ್ಪಿದ ರೀ ರೈಲ್: ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ಭಾರೀ ವ್ಯತ್ಯಯ
ನಮ್ಮ ಮೆಟ್ರೋ
Kiran Surya
| Edited By: |

Updated on:Oct 03, 2023 | 8:11 AM

Share

ಬೆಂಗಳೂರು, (ಅಕ್ಟೋಬರ್ 03): ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು (ಅಕ್ಟೋಬರ್ 03) ಬೆಳಗ್ಗೆಯಿಂದ ಹಸಿರು ಮಾರ್ಗದ ಬೆಂಗಳೂರು (Bengaluru) ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದೆರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ.

ರೀ ರೈಲ್ ಟ್ರ್ಯಾಕ್ ತಪ್ಪಿದ್ದರಿಂದ ಶ್ರೀರಾಮಂಪುರ, ಕುವೆಂಪು, ರಾಜಾಜಿನಗರ, ಮಹಾಲಕ್ಷ್ಮೀ, ಸ್ಯಾಂಡಲ್​ ಸೋಪ್ ಫ್ಯಾಕ್ಟರಿ ನಡುವೆ ಮೆಟ್ರೋ ಸೇವೆ ಸಂಚಾರ ಇರುವುದಿಲ್ಲ, ಇನ್ನುಳಿಂದತೆ ಸದ್ಯ ನಾಗಸಂದ್ರದಿಂದ ಯಶವಂತಪುರ ಮತ್ತು ಮಂತ್ರಿ ಸ್ಕ್ವೇರ್ ಸಂಪಿಗೆ ರಸ್ತೆಯಿಂದ ರೇಷ್ಮೆ ಸಂಸ್ಥೆ ಮೆಟ್ರೊ ನಿಲ್ದಾಣದ ನಡುವೆ ಮಾತ್ರ ರೈಲು ಸೇವೆಗಳು ಲಭ್ಯವಿರುತ್ತವೆ. ಹೀಗಾಗಿ ಮೆಟ್ರೋ ಪ್ರಯಾಣಿಕರು ಸಹಕರಿಸುವಂತೆ ಬಿಎಂಆರ್​ಸಿಎಲ್​ ಮನವಿ ಮಾಡಿದೆ.

ಇದನ್ನೂ ಓದಿ: ಬೈಯಪ್ಪನಹಳ್ಳಿ- ಕೆಆರ್ ಪುರ ಮೆಟ್ರೋ ಉದ್ಘಾಟನೆ ವಿಳಂಬ: ರಾಹುಲ್ ಗಾಂಧಿ ಸಮಯಕ್ಕಾಗಿ ಬೆಂಗಳೂರು ಜನ ಕಾಯುವ ಅಗತ್ಯವಿಲ್ಲ ಎಂದ ತೇಜಸ್ವಿ ಸೂರ್ಯ

ರೀ ರೈಲ್ ವಾಹನವನ್ನು‌ ಹಳಿಗೆ ತರಲು ಸಿಬ್ಬಂದಿ ಹರಸಾಹಸ ಪಡುತ್ತಿದ್ದು, ಇಂದು ಮಧ್ಯಾಹ್ನದವರೆಗೂ ಪ್ರಯಾಣಿಕರಿಗೆ ತೊಂದರೆಯಾಗಲಿದೆ. ಹೀಗಾಗಿ ಪ್ರಯಾಣಿಕರಿಗೆ ಭಾರೀ ಅನಾನುಕೂಲ ಉಂಟಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 7:54 am, Tue, 3 October 23

Follow Us
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
‘ವಸುದೇವ ಕುಟುಂಬ’ ಧಾರಾವಾಹಿ ನಿರ್ಮಾಪಕರ ಮೇಲೆ ಉರಿದು ಬಿದ್ದ ನಟಿ ಹಂಸ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಶಾಲಾ ಬಸ್‌ನಿಂದ ಇಳಿದು ರಸ್ತೆ ದಾಟುತ್ತಿದ್ದ ಮಗುವಿಗೆ ಬೈಕ್ ಡಿಕ್ಕಿ
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಚಲಿಸುತ್ತಿದ್ದ ರೈಲಿನಿಂದ ಇಳಿಯಲು ಯತ್ನಿಸಿದ ಮಹಿಳೆ; ಸಿಸಿಟಿವಿ ದೃಶ್ಯ ವೈರಲ್
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ಕೇದಾರನಾಥ ವಿಐಪಿ ದರ್ಶನ; ಬಿಕೆಟಿಸಿ ಮುಖ್ಯಸ್ಥರ ವಿರುದ್ಧ ಅರ್ಚಕರ ಪ್ರತಿಭಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ನಿಧಿ ಆಸೆಗೆ ತಾಯಿಯನ್ನೇ ಬಲಿ ಕೊಡಲು ಯತ್ನ!: ಚಾಮರಾಜನಗರದಲ್ಲಿ ಶಾಕಿಂಗ್ ಘಟನೆ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಎಕ್ಸಿಟ್ ಪೋಲ್ ಬೆನ್ನಲ್ಲೇ ಬಾಂಗ್ಲಾದೇಶಕ್ಕೆ ನಡುಕ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
ಮಳೆ ಬಂದು ನಿಂತರೂ 2 ದಿನದಿಂದ ನಡೆಯುತ್ತಲೇ ಇದೆ ಅಂಡರ್ ಪಾಸ್ ಕ್ಲೀನ್ ಕಾರ್ಯ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
‘ವಸುದೇವ ಕುಟುಂಬ’ ಧಾರಾವಾಹಿ ಸಂಭಾವನೆ ವಿವಾದ: ವಿವರಿಸಿದ ನಟಿ ಚೈತ್ರಾ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಬೆಂಗಳೂರಿನ ಈ ಆಟೋ ಚಾಲಕನಿಗೆ ಆಟೋವೇ ಮನೆ, ಮೆಟ್ರೋ ನಿಲ್ದಾಣವೇ ಆಸರೆ
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್
ಲೋಡ್ ಆಗಿದ್ದ ಬಂದೂಕು ಹಿಡಿದು ಯುವಕರ ಹುಚ್ಚಾಟ! ವಿಡಿಯೋ ವೈರಲ್