AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್

2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್
ಎನ್​​ಐಟಿ ಗೃಹ ನಿರ್ಮಾಣ ಸಹಕಾರ ಸಂಘ
Follow us
TV9 Web
| Updated By: ಆಯೇಷಾ ಬಾನು

Updated on:Oct 01, 2022 | 2:02 PM

ಬೆಂಗಳೂರು: ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಸೈಟ್​ಗಳನ್ನು ಅರ್ಹರಿಗೆ ನೀಡದೆ ತಮಗೆ ಬೇಕಾದವರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಎಂಬುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

ಗೃಹ ನಿರ್ಮಾಣ ಸಹಕಾರ ಸಂಘದ ಹಾಲಿ ನಿರ್ದೇಶಕರಾದ ಶೃಂಗೇಶ್ವರ, ರಾಮಕೃಷ್ಣರೆಡ್ಡಿ, ಸಂಘದ ಸಿಇಒ ಪ್ರತಾಪ್ ಚಂದ್ರ ರಾಥೋಡ್ ವಿರುದ್ಧ ದೂರು ದಾಖಲಿಸಲಾಗಿದೆ. 2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ. ಅಲ್ಲದೆ ಅಕ್ರಮವನ್ನು ಪ್ರಶ್ನೆ ಮಾಡಿದ ದೂರುದಾರರಿಗೆ ಬೆದರಿಕೆ ಹಾಕಿದ್ದಾರಂತೆ. ಸದ್ಯ ನಾಣಯ್ಯ ಅವರ ದೂರಿನ ಆಧಾರದ ಮೇಲೆ ಪ್ರತಾಪ್ ಚಂದ್ರ ರಾಥೋಡ್, ರಾಮಕೃಷ್ಣರೆಡ್ಡಿ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ಗೋಲ್​​ಮಾಲ್

ಇನ್ನು ಮತ್ತೊಂದು ಕಡೆ ಕರ್ನಾಟಕ ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಿಸುತ್ತಿರುವ, ಲೇಔಟ್​​ ಮೇಲೆ ಹತ್ತಾರು ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ರಾಮನಗರ ಜಿಲ್ಲೆ ಬಿಡದಿ ಪಟ್ಟಣ ಸಮೀಪದ ಕೆಂಚನಗುಪ್ಪೆಯಲ್ಲಿ ಲೇಔಟ್​ ನಿರ್ಮಿಸಲಾಗ್ತಿದೆ. ಸರ್ವೆ ನಂಬರ್ 189, 199 ರ ಐದು ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರೋ ಲೇಔಟ್ ಗೆ ಯಾವುದೇ ಅನುಮತಿ ಪಡೆದಿಲ್ಲ. ಕನ್ವರ್ಷನ್ ಮಾಡದೇ, ಪ್ಲಾನ್ ಅಪ್ರೂವಲ್ ಇಲ್ಲದೆ ಲೇಔಟ್ ನಿರ್ಮಾಣ ಮಾಡಿರೋ ಆರೋಪ ಕೇಳಿಬಂದಿದೆ. ಒಂದು ಬಡಾವಣೆ ನಿರ್ಮಾಣಕ್ಕೆ ಹತ್ತಾರು ನಿಯಮ ಪಾಲಿಸಬೇಕು. ಆದರೆ, ಲೆಕ್ಕಾಚಾರಗಳನ್ನ ಪಾಲಿಸಿದ್ರೆ ಹೆಚ್ಚು ಸೈಟ್ ನಿರ್ಮಾಣ ಅಸಾಧ್ಯ ಎಂದು ಯಾವುದೆ ಅನುಮತಿ ಪಡೆಯದೇ, ಬಿಡದಿ ಪುರಸಭೆಯ ಕೆಲ ಅಧಿಕಾರಿಗಳ ಜೊತೆ ಶಾಮೀಲು ಆಗಿ, ಲೇಔಟ್ ನಿರ್ಮಿಸ್ತಿದ್ದಾರೆ. ಐದು ಎಕರೆ ಪ್ರದೇಶದಲ್ಲಿ 57 ಜನರಿಗೆ ಸೈಟ್ ಗಳನ್ನ ಹಂಚಿಕೆಯನ್ನೂ ಮಾಡಿದ್ದು, ಈ ಕುರಿತು, ಸಾಮಾಜಿಕ ಕಾರ್ಯಕರ್ತ ಸಂಪತ್ ಲೋಕಯುಕ್ತಕ್ಕೂ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:55 pm, Sat, 1 October 22

ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ನೀವು ನೋಡಿರದ ಸುಂದರವಾದ ಈಶಾನ್ಯ ರಾಜ್ಯಗಳ ಕಿರುನೋಟ ಇಲ್ಲಿದೆ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಮನು ಅಂದ್ರೆ ಜೀವ ಬಿಡುತ್ತಿದ್ದೆ, ಅಪ್ಪಣ್ಣ ಕಾಟ ಕೊಟ್ಟಿಲ್ಲ: ಸಂತ್ರಸ್ತ ನಟಿ
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಪ್ರಚಾರಕ್ಕಾಗಿ ನಟ ಮೆಡನೂರು ಮನು ವಿರುದ್ಧ ಆರೋಪ: ಸಂತ್ರಸ್ತೆ ಉತ್ತರವೇನು?
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಈಶಾನ್ಯ ರಾಜ್ಯಗಳು ಹೂಡಿಕೆಯ ಕೇಂದ್ರವಾಗುತ್ತಿದೆ; ಜ್ಯೋತಿರಾದಿತ್ಯ ಸಿಂಧಿಯಾ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಪಾಕಿಸ್ತಾನಕ್ಕೆ ಆಪರೇಷನ್ ಸಿಂಧೂರ್ ತಕ್ಕ ಉತ್ತರ; ಅಮಿತ್ ಶಾ ಶ್ಲಾಘನೆ
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
ಅರ್ಜುನ್ ಜನ್ಯ ಸಿನಿಮಾ ನಿರ್ದೇಶನಕ್ಕೆ ಮುಂದಾಗಿದ್ದು ಯಾರ ಬೆಂಬಲದಿಂದ?
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
‘ನನ್ನ ಗಂಡನ ಪರ ನಿಲ್ಲುತ್ತೇನೆ’; ಮನು ಪತ್ನಿ ಅಚಲ ನಿರ್ಧಾರ
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
ತಾಳಿ ಕಟ್ಟುವಷ್ಟರಲ್ಲಿ ಲವರ್ ಕಾಲ್: ಮದುವೆ ರದ್ದು ಬಗ್ಗೆ ಸಂಬಂಧಿಕರೇನಂದ್ರು?
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
‘ಮೌನ ಹಾಗೂ ನಗು’; ಉತ್ತರಿಸಲು ಹೊಸ ತಂತ್ರ ಕಂಡುಕೊಂಡ ಪವಿತ್ರಾ ಗೌಡ
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು
ತಾಳಿ‌ ಕಟ್ಟುವ ಸಮಯದಲ್ಲಿ ಹಸೆಮಣೆಯಿಂದ ಹೊರ ನಡೆದ ವಧು