AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್

2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್
ಎನ್​​ಐಟಿ ಗೃಹ ನಿರ್ಮಾಣ ಸಹಕಾರ ಸಂಘ
TV9 Web
| Edited By: ಆಯೇಷಾ ಬಾನು|

Updated on:Oct 01, 2022 | 2:02 PM

Share

ಬೆಂಗಳೂರು: ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಸೈಟ್​ಗಳನ್ನು ಅರ್ಹರಿಗೆ ನೀಡದೆ ತಮಗೆ ಬೇಕಾದವರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಎಂಬುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

ಗೃಹ ನಿರ್ಮಾಣ ಸಹಕಾರ ಸಂಘದ ಹಾಲಿ ನಿರ್ದೇಶಕರಾದ ಶೃಂಗೇಶ್ವರ, ರಾಮಕೃಷ್ಣರೆಡ್ಡಿ, ಸಂಘದ ಸಿಇಒ ಪ್ರತಾಪ್ ಚಂದ್ರ ರಾಥೋಡ್ ವಿರುದ್ಧ ದೂರು ದಾಖಲಿಸಲಾಗಿದೆ. 2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ. ಅಲ್ಲದೆ ಅಕ್ರಮವನ್ನು ಪ್ರಶ್ನೆ ಮಾಡಿದ ದೂರುದಾರರಿಗೆ ಬೆದರಿಕೆ ಹಾಕಿದ್ದಾರಂತೆ. ಸದ್ಯ ನಾಣಯ್ಯ ಅವರ ದೂರಿನ ಆಧಾರದ ಮೇಲೆ ಪ್ರತಾಪ್ ಚಂದ್ರ ರಾಥೋಡ್, ರಾಮಕೃಷ್ಣರೆಡ್ಡಿ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ಗೋಲ್​​ಮಾಲ್

ಇನ್ನು ಮತ್ತೊಂದು ಕಡೆ ಕರ್ನಾಟಕ ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಿಸುತ್ತಿರುವ, ಲೇಔಟ್​​ ಮೇಲೆ ಹತ್ತಾರು ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ರಾಮನಗರ ಜಿಲ್ಲೆ ಬಿಡದಿ ಪಟ್ಟಣ ಸಮೀಪದ ಕೆಂಚನಗುಪ್ಪೆಯಲ್ಲಿ ಲೇಔಟ್​ ನಿರ್ಮಿಸಲಾಗ್ತಿದೆ. ಸರ್ವೆ ನಂಬರ್ 189, 199 ರ ಐದು ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರೋ ಲೇಔಟ್ ಗೆ ಯಾವುದೇ ಅನುಮತಿ ಪಡೆದಿಲ್ಲ. ಕನ್ವರ್ಷನ್ ಮಾಡದೇ, ಪ್ಲಾನ್ ಅಪ್ರೂವಲ್ ಇಲ್ಲದೆ ಲೇಔಟ್ ನಿರ್ಮಾಣ ಮಾಡಿರೋ ಆರೋಪ ಕೇಳಿಬಂದಿದೆ. ಒಂದು ಬಡಾವಣೆ ನಿರ್ಮಾಣಕ್ಕೆ ಹತ್ತಾರು ನಿಯಮ ಪಾಲಿಸಬೇಕು. ಆದರೆ, ಲೆಕ್ಕಾಚಾರಗಳನ್ನ ಪಾಲಿಸಿದ್ರೆ ಹೆಚ್ಚು ಸೈಟ್ ನಿರ್ಮಾಣ ಅಸಾಧ್ಯ ಎಂದು ಯಾವುದೆ ಅನುಮತಿ ಪಡೆಯದೇ, ಬಿಡದಿ ಪುರಸಭೆಯ ಕೆಲ ಅಧಿಕಾರಿಗಳ ಜೊತೆ ಶಾಮೀಲು ಆಗಿ, ಲೇಔಟ್ ನಿರ್ಮಿಸ್ತಿದ್ದಾರೆ. ಐದು ಎಕರೆ ಪ್ರದೇಶದಲ್ಲಿ 57 ಜನರಿಗೆ ಸೈಟ್ ಗಳನ್ನ ಹಂಚಿಕೆಯನ್ನೂ ಮಾಡಿದ್ದು, ಈ ಕುರಿತು, ಸಾಮಾಜಿಕ ಕಾರ್ಯಕರ್ತ ಸಂಪತ್ ಲೋಕಯುಕ್ತಕ್ಕೂ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:55 pm, Sat, 1 October 22

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ