AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್

2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ.

ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ: ತಮಗೆ ಬೇಕಾದವರಿಗೆ ಸೈಟ್ ಹಂಚಿಕೆ, ಸಂಘದ ಸಿಇಒ ಸೇರಿ ಇಬ್ಬರು ಅಧಿಕಾರಿಗಳು ಅರೆಸ್ಟ್
ಎನ್​​ಐಟಿ ಗೃಹ ನಿರ್ಮಾಣ ಸಹಕಾರ ಸಂಘ
TV9 Web
| Edited By: |

Updated on:Oct 01, 2022 | 2:02 PM

Share

ಬೆಂಗಳೂರು: ಎನ್​​ಟಿಐ ಗೃಹ ನಿರ್ಮಾಣ ಸಹಕಾರ ಸಂಘದಲ್ಲಿ ಅಕ್ರಮ ನಡೆದಿರುವ ಆರೋಪ ಕೇಳಿ ಬಂದಿದೆ. ಸೈಟ್​ಗಳನ್ನು ಅರ್ಹರಿಗೆ ನೀಡದೆ ತಮಗೆ ಬೇಕಾದವರಿಗೆ ನೀಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಎಂಬುವವರು ಬೆಂಗಳೂರಿನ ಶೇಷಾದ್ರಿಪುರಂ ಠಾಣೆಗೆ ದೂರು ನೀಡಿದ್ದಾರೆ.

ಗೃಹ ನಿರ್ಮಾಣ ಸಹಕಾರ ಸಂಘದ ಹಾಲಿ ನಿರ್ದೇಶಕರಾದ ಶೃಂಗೇಶ್ವರ, ರಾಮಕೃಷ್ಣರೆಡ್ಡಿ, ಸಂಘದ ಸಿಇಒ ಪ್ರತಾಪ್ ಚಂದ್ರ ರಾಥೋಡ್ ವಿರುದ್ಧ ದೂರು ದಾಖಲಿಸಲಾಗಿದೆ. 2010ರಲ್ಲಿ ಬಿಡಿಎಯಿಂದ ಆದೇಶವಾಗಿದ್ದ ನಿವೇಶನ ಹೊರತುಪಡಿಸಿ ಕೊಡಿಗೇಹಳ್ಳಿ ಬಳಿ ಅನುಮೋದನೆಗೊಳ್ಳದ 4-5 ಸೈಟ್​ಗಳನ್ನು ಅಕ್ರಮವಾಗಿ ನೋಂದಣಿ ಮಾಡಿಕೊಟ್ಟ ಬಗ್ಗೆ ಸಂಘದ ಮಾಜಿ ನಿರ್ದೇಶಕ ನಾಣಯ್ಯ ಆರೋಪ ಮಾಡಿದ್ದಾರೆ. ಅಲ್ಲದೆ ಅಕ್ರಮವನ್ನು ಪ್ರಶ್ನೆ ಮಾಡಿದ ದೂರುದಾರರಿಗೆ ಬೆದರಿಕೆ ಹಾಕಿದ್ದಾರಂತೆ. ಸದ್ಯ ನಾಣಯ್ಯ ಅವರ ದೂರಿನ ಆಧಾರದ ಮೇಲೆ ಪ್ರತಾಪ್ ಚಂದ್ರ ರಾಥೋಡ್, ರಾಮಕೃಷ್ಣರೆಡ್ಡಿ ಅವರನ್ನು ಶೇಷಾದ್ರಿಪುರಂ ಪೊಲೀಸರು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.

ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ಗೋಲ್​​ಮಾಲ್

ಇನ್ನು ಮತ್ತೊಂದು ಕಡೆ ಕರ್ನಾಟಕ ರಾಜ್ಯ ಸಾರಿಗೆ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಿಸುತ್ತಿರುವ, ಲೇಔಟ್​​ ಮೇಲೆ ಹತ್ತಾರು ಆರೋಪಗಳು ಕೇಳಿ ಬಂದಿವೆ. ಸರ್ಕಾರಿ ನಿಯಮಗಳನ್ನು ಗಾಳಿಗೆ ತೂರಿ ರಾಮನಗರ ಜಿಲ್ಲೆ ಬಿಡದಿ ಪಟ್ಟಣ ಸಮೀಪದ ಕೆಂಚನಗುಪ್ಪೆಯಲ್ಲಿ ಲೇಔಟ್​ ನಿರ್ಮಿಸಲಾಗ್ತಿದೆ. ಸರ್ವೆ ನಂಬರ್ 189, 199 ರ ಐದು ಎಕರೆ ಪ್ರದೇಶದಲ್ಲಿ ನಿರ್ಮಾಣ ಮಾಡಿರೋ ಲೇಔಟ್ ಗೆ ಯಾವುದೇ ಅನುಮತಿ ಪಡೆದಿಲ್ಲ. ಕನ್ವರ್ಷನ್ ಮಾಡದೇ, ಪ್ಲಾನ್ ಅಪ್ರೂವಲ್ ಇಲ್ಲದೆ ಲೇಔಟ್ ನಿರ್ಮಾಣ ಮಾಡಿರೋ ಆರೋಪ ಕೇಳಿಬಂದಿದೆ. ಒಂದು ಬಡಾವಣೆ ನಿರ್ಮಾಣಕ್ಕೆ ಹತ್ತಾರು ನಿಯಮ ಪಾಲಿಸಬೇಕು. ಆದರೆ, ಲೆಕ್ಕಾಚಾರಗಳನ್ನ ಪಾಲಿಸಿದ್ರೆ ಹೆಚ್ಚು ಸೈಟ್ ನಿರ್ಮಾಣ ಅಸಾಧ್ಯ ಎಂದು ಯಾವುದೆ ಅನುಮತಿ ಪಡೆಯದೇ, ಬಿಡದಿ ಪುರಸಭೆಯ ಕೆಲ ಅಧಿಕಾರಿಗಳ ಜೊತೆ ಶಾಮೀಲು ಆಗಿ, ಲೇಔಟ್ ನಿರ್ಮಿಸ್ತಿದ್ದಾರೆ. ಐದು ಎಕರೆ ಪ್ರದೇಶದಲ್ಲಿ 57 ಜನರಿಗೆ ಸೈಟ್ ಗಳನ್ನ ಹಂಚಿಕೆಯನ್ನೂ ಮಾಡಿದ್ದು, ಈ ಕುರಿತು, ಸಾಮಾಜಿಕ ಕಾರ್ಯಕರ್ತ ಸಂಪತ್ ಲೋಕಯುಕ್ತಕ್ಕೂ ದೂರು ನೀಡಿದ್ದಾರೆ.

ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 1:55 pm, Sat, 1 October 22

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!