AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಬಿಎಂಪಿ ಗುತ್ತಿಗೆದಾರರ ದೂರು ಪ್ರತಿದೂರಿನ ತನಿಖೆ ಆರಂಭ; ದಯಾಮರಣ ಪತ್ರದ ಅಸಲಿ ಸಂಗತಿ ಏನು?

ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ರೆಡ್ಡಿ ನಿನ್ನೆ 10ಕ್ಕೂ ಅಧಿಕ ಕಾಂಟ್ರಾಕ್ಟರ್ ಗಳ ವಿಚಾರಣೆ ಮಾಡಿದ್ದಾರೆ. ಈ ವೇಳೆ ಗುತ್ತಿಗೆ ಪಡೆದ ಮಾಹಿತಿಯಿಂದ ಹಿಡಿದು ಬರಬೇಕಾದ ಬಿಲ್ ಮೊತ್ತದ ಜೊತೆಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

ಬಿಬಿಎಂಪಿ ಗುತ್ತಿಗೆದಾರರ ದೂರು ಪ್ರತಿದೂರಿನ ತನಿಖೆ ಆರಂಭ; ದಯಾಮರಣ ಪತ್ರದ ಅಸಲಿ ಸಂಗತಿ ಏನು?
ಬಿಬಿಎಂಪಿ ಕಚೇರಿ
Follow us
Jagadisha B
| Updated By: ಡಾ. ಭಾಸ್ಕರ ಹೆಗಡೆ

Updated on:Aug 19, 2023 | 10:45 AM

ಬೆಂಗಳೂರು, ಆ.19: ಬಿಬಿಎಂಪಿ ಗುತ್ತಿಗೆದಾರರ(BBMP Contractors) 28 ತಿಂಗಳಿಂದ ಬರಬೇಕಾದ ಬಿಲ್ ನ ಹಣ ಕೊಡದೇ ಬಿಬಿಎಂಪಿ(BBMP) ಅಧಿಕಾರಿಗಳು ತಡೆ ಹಿಡಿದಿದ್ದು, ಇದಕ್ಕೆ ಕಮಿಷನ್ ಆರೋಪ ಸಹ ಮಾಡಿದ್ದರು. ಕೊನೆಗೆ ರಾಜ್ಯಪಾಲರಿಗೆ(Karnataka Governor) ಪತ್ರ ಕೊಟ್ಟು ದಯಾಮರಣಕ್ಕೆ ಅವಕಾಶ ಕೊಡುವಂತೆ ಕೊರಿದ್ದರು. ಇದರ ನಡುವೆ ಬಿಬಿಎಂಪಿ ಅಧಿಕಾರಿ ಕೊಟ್ಟ ದೂರಿನ ಬೆನ್ನಲ್ಲೆ ತನಿಖೆ ಆರಂಭಗೊಂಡಿದ್ದು, ಆರಂಭದಲ್ಲೇ ಪೊಲೀಸರಿಗೆ ಆರೋಪಗಳ ನಡುವೆ ಅನುಮಾನ ಶುರುವಾಗಿದೆ.‌ ಹೀಗಾಗಿ ಮೊದಲಿಗೆ ಗುತ್ತಿಗೆದಾರರಿಂದ ವಿಚಾರಣೆ ಆರಂಭಿಸಿರುವ ಪೊಲೀಸರು ಹೇಳಿಕೆ ಪ್ರಕ್ರಿಯೆ ಮುಂದುವರೆಸಿದ್ದಾರೆ.

ಮೊನ್ನೆ 20ಕ್ಕೂ ಅಧಿಕ ಗುತ್ತಿಗೆದಾರರ ವಿಚಾರಣೆ ನಡೆಸಿದ್ದ ಶೇಷಾದ್ರಿಪುರಂ ಎಸಿಪಿ ಪ್ರಕಾಶ್ ರೆಡ್ಡಿ ನಿನ್ನೆ 10ಕ್ಕೂ ಅಧಿಕ ಕಾಂಟ್ರಾಕ್ಟರ್ ಗಳ ವಿಚಾರಣೆ ಮಾಡಿದ್ದಾರೆ. ಈ ವೇಳೆ ಗುತ್ತಿಗೆ ಪಡೆದ ಮಾಹಿತಿಯಿಂದ ಹಿಡಿದು ಬರಬೇಕಾದ ಬಿಲ್ ಮೊತ್ತದ ಜೊತೆಗೆ ಕಮಿಷನ್ ಆರೋಪಕ್ಕೆ ಸಂಬಂಧಿಸಿದಂತೆ ಪ್ರಶ್ನೆಗಳನ್ನು ಕೇಳಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: ಆತ್ಮಹತ್ಯೆ ಬೆದರಿಕೆ ಆರೋಪ: ಬಿಬಿಎಂಪಿ ಗುತ್ತಿಗೆದಾರರ ವಿರುದ್ಧ ಎಫ್​ಐಆರ್ ದಾಖಲು

ಇನ್ನು ಇದೆಲ್ಲದರ ನಡುವೆ ಬಿಬಿಎಂಪಿಯಿಂದ ಗುತ್ತಿಗೆ ಪಡೆದು ಕೆಲಸ ಮಾಡಿದವರ ಸಂಖ್ಯೆ 38 ಆದ್ರೆ ರಾಜ್ಯಪಾಲರಿಗೆ ನೀಡಿದ ದಯಾಮರಣ ಪತ್ರದಲ್ಲಿ 57 ಜನರ ಸಹಿ ಇದ್ದು, ಉಳಿದ 19 ಮಂದಿ ಯಾರು ಅನ್ನೊ ಪ್ರಶ್ನೆ ಬಿಬಿಎಂಪಿ ಅಧಿಕಾರಿಗಳಿಂದ ಮೂಡಿದೆ. ಈ ಆಯಾಮದಲ್ಲಿ ಸಹ ತನಿಖೆ ನಡೆಸುತ್ತಿರುವ ಪೊಲೀಸರು ದಯಾಮರಣ ಪತ್ರಕ್ಕೆ ಸಹಿ ಹಾಕಿದವರ ಕ್ರಮಾಂಕದ ಆಧಾರದಲ್ಲಿ ಬುಲಾವ್ ಮಾಡಿ ವಿಚಾರಣೆ ಮಾಡುವುದರ ಜೊತೆಗೆ ಗುತ್ತಿಗೆ ಪಡೆದಿದ್ದರೇ, ಪಡಿದಿಲ್ಲವಾದರೇ ಈ ರೀತಿ ಸಹಿ ಮಾಡಿದರ ಅಸಲಿ ಕಾರಣ ಏನು ಎಂಬ ಬಗ್ಗೆ ವಿಚಾರಣೆ ನಡೆಸಲು ಮುಂದಾಗಿದ್ದಾರೆ.

ಸದ್ಯ ಗುತ್ತಿಗೆದಾರರ ವಿಚಾರಣೆ ನಡೆಸುತ್ತಿರುವ ಶೇಷಾದ್ರಿಪುರಂ ಎಸಿಪಿ ನೇತೃತ್ವದ ಹೈಗ್ರೌಂಡ್ ಪೊಲೀಸರು ಕಾಂಟ್ರಾಕ್ಟ್ ಸಂಬಂಧಿತ ಕೆಲ ಮಹತ್ವದ ದಾಖಲೆ ಒದಗಿಸುವಂತೆ ಕೇಳಿದ್ದು, ಅದರಂತೆ ಗುತ್ತಿಗೆದಾರರಿಗೆ ಕೆಲ ದಿನಗಳ ಕಾಲಾವಾಕಾಶ ನೀಡಿದ್ದಾರೆ. ಮತ್ತೊಂದೆಡೆ ಗುತ್ತಿಗೆದಾರರ ವಿಚಾರಣೆ ಬಳಿಕ ಬಿಬಿಎಂಪಿ ಅಧಿಕಾರಿಗಳ ವಿಚಾರಣೆ ಆರಂಭವಾಗಲಿದ್ದು, ಕಾಂಟ್ರಾಕ್ಟ್ ಹಿಂದೆ ಕೇಳಿ ಬಂದ ಕಮಿಷನ್ ಕಥೆಯ ಅಸಲಿ ಸತ್ಯ ಬಯಲಾಗಲಿದೆ.

ಬೆಂಗಳೂರಿಗೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 6:57 am, Sat, 19 August 23

5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ನೈಟ್ ರೈಡರ್ಸ್ ವಿರುದ್ಧ 4 ವಿಕೆಟ್ ಉರುಳಿಸಿದ ನೂರ್ ಅಹ್ಮದ್
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಅಕ್ರಮ ಗಣಿಗಾರಿಕೆ ಆರೋಪಗಳಿಂದ ಮುಕ್ತನಾಗಿದ್ದೇನೆ: ಜನಾರ್ಧನ ರೆಡ್ಡಿ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಮುಂಬರುವ ದಿನಗಳಲ್ಲಿ ಇನ್ನಷ್ಟು ಹೆಚ್ಚಲಿದೆ ಬುಲಿಯನ್ ದರ: ಸರವಣ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ
ಯಾವುದೇ ಕಾರಣಕ್ಕೂ ವೃಕ್ಷಮಾತೆ ಸಿನಿಮಾ ಮಾಡೋಕೆ ಆಗಲ್ಲ: ವಾಣಿಜ್ಯ ಮಂಡಳಿ