AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿವೃತ್ತ ನ್ಯಾಯಾಂಗ ಅಧಿಕಾರಿಯ ಕೊಲೆ ಮಾಡಿ ಸರ ಕದ್ದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದ ಸೆಷನ್ಸ್ ನ್ಯಾಯಾಲಯ

014ರ ಡಿಸೆಂಬರ್ 17ರಂದು ಹ್ಯಾಮರ್ ನಿಂದ ಹೊಡೆದು ರಾಘವೇಂದ್ರನ ಹತ್ಯೆ ಮಾಡಿದ್ದ. ರಾಘವೇಂದ್ರ ಪತ್ನಿ ಸುಧಾಕುಮಾರಿಗೂ ಹ್ಯಾಮರ್ ನಿಂದ ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ್ದ. ರಾಘವೇಂದ್ರ ಅವರ ಕತ್ತಿನಲ್ಲಿದ್ದ ಸರ, ಸುಧಾ ಅವರ 30 ಗ್ರಾಂ ಮಾಂಗಲ್ಯಸರ ಕದ್ದು ರಾಮಾಂಜನೇಯ ಪರಾರಿಯಾಗಿದ್ದ.

ನಿವೃತ್ತ ನ್ಯಾಯಾಂಗ ಅಧಿಕಾರಿಯ ಕೊಲೆ ಮಾಡಿ ಸರ ಕದ್ದಿದ್ದ ಅಪರಾಧಿಗೆ ಜೀವಾವಧಿ ಶಿಕ್ಷೆ ನೀಡಿದ ಸೆಷನ್ಸ್ ನ್ಯಾಯಾಲಯ
ಅಪರಾಧಿ ರಾಮಾಂಜನೇಯ
TV9 Web
| Edited By: |

Updated on:Aug 16, 2022 | 8:00 PM

Share

ಬೆಂಗಳೂರು: 2014ರಲ್ಲಿ ನಡೆದಿದ್ದ ಬನಶಂಕರಿಯ ರಾಘವೇಂದ್ರ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಅಪರಾಧಿ ರಾಮಾಂಜನೇಯನಿಗೆ ಜೀವಾವಧಿ ಶಿಕ್ಷೆ(Life Imprisonment) ನೀಡಿ ಬೆಂಗಳೂರಿನ 62ನೇ ಸೆಷನ್ಸ್ ನ್ಯಾಯಾಲಯ(Sessions Court) ಶಿಕ್ಷೆ ಪ್ರಕಟಿಸಿ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ

ಆಂಧ್ರಪ್ರದೇಶ ಮೂಲದ ಅಪರಾಧಿ ರಾಮಾಂಜನೇಯ ಬೆಂಗಳೂರಿನಲ್ಲಿ ಶೌಚಾಲಯ ಸ್ವಚ್ಚಗೊಳಿಸುವ ಕೆಲಸ ಮಾಡುತ್ತಿದ್ದ. ವಾರಕ್ಕೊಮ್ಮೆ ಇಟ್ಟಮಡು 10ನೇ ಕ್ರಾಸ್‌ನಲ್ಲಿ ವಾಸವಾಗಿದ್ದ ನಿವೃತ್ತ ನ್ಯಾಯಾಂಗ ಅಧಿಕಾರಿ ರಾಘವೇಂದ್ರ ರಾವ್ ಮನೆಗೆ ಬಂದು ಶೌಚಾಲಯ ಸ್ವಚ್ಚಗೊಳಿಸುತ್ತಿದ್ದ. ಆದ್ರೆ 2014ರ ಡಿಸೆಂಬರ್ 17ರಂದು ಹ್ಯಾಮರ್ ನಿಂದ ಹೊಡೆದು ರಾಘವೇಂದ್ರನ ಹತ್ಯೆ ಮಾಡಿದ್ದ. ರಾಘವೇಂದ್ರ ಪತ್ನಿ ಸುಧಾಕುಮಾರಿಗೂ ಹ್ಯಾಮರ್ ನಿಂದ ಹಲ್ಲೆ ಮಾಡಿ ಕೊಲೆ ಯತ್ನ ಮಾಡಿದ್ದ. ರಾಘವೇಂದ್ರ ಅವರ ಕತ್ತಿನಲ್ಲಿದ್ದ ಸರ, ಸುಧಾ ಅವರ 30 ಗ್ರಾಂ ಮಾಂಗಲ್ಯಸರ ಕದ್ದು ರಾಮಾಂಜನೇಯ ಪರಾರಿಯಾಗಿದ್ದ.

ಬಳಿಕ ಸಮೀಪದಲ್ಲೇ ಮತ್ತೊಂದು ಅಪಾರ್ಟ್‌ಮೆಂಟ್‌ನಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದ ರಾಘವೇಂದ್ರರ ಮಗ ಮಧುಸೂದನ್ ಅಪ್ಪ-ಅಮ್ಮನನ್ನು ನೋಡಲು ಅದೇ ದಿನದ ರಾತ್ರಿ 7.30ಕ್ಕೆ ಮನೆಗೆ ಬಂದಿದ್ದಾರೆ. ಆಗ ಕೃತ್ಯ ಬಯಲಾಗಿದೆ. ನಂತರ ಈ ಬಗ್ಗೆ ಸಿ.ಕೆ ಅಚ್ಚು ಕಟ್ಟು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದೂರು ಆಧರಿಸಿ ರಾಮಾಂಜನೇಯನನ್ನ ತನಿಖಾಧಿಕಾರಿ ಬಿ.ಕೆ ಶೇಖರ್ ಬಂಧಿಸಿದ್ದರು. ಸೂಕ್ತ ಸಾಕ್ಷ್ಯಾಧಾರಗಳನ್ನ ಕಲೆಹಾಕಿ ಚಾರ್ಜ್ ಶೀಟ್ ಸಲ್ಲಿಸಿದ್ದರು. ಸದ್ಯ ಆರೋಪಿಗೆ ಜೀವಾವಾಧಿ ಶಿಕ್ಷೆ ನೀಡಿ 62ನೇ ಸೆಷನ್ಸ್ ನ್ಯಾಯಾಲಯದ ನ್ಯಾಯಧೀಶರಾದ ಎ.ಈರಣ್ಣ ಆದೇಶ ಹೊರಡಿಸಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ತಾಜಾ ಸುದ್ದಿಗಳಿಗಾಗಿ ಇದನ್ನು ಕ್ಲಿಕ್ ಮಾಡಿ

Published On - 7:57 pm, Tue, 16 August 22

ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಭಾರತದ ಸ್ಫೋಟಕ ದಾಂಡಿಗ ನಾಯಕ
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಕನ್ಯಾ ರಾಶಿಯ ಮೇಲೆ ರಾಹುಗ್ರಸ್ತ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹಾಶಿವರಾತ್ರಿ ಎಫೆಕ್ಟ್​​: ಹೂ, ಹಣ್ಣುಗಳ ದರ ಗಗನಕ್ಕೆ; ಗ್ರಾಹಕರು ಕಂಗಾಲು
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?