ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಆದ್ರೆ, ಇದೀಗ ಮಂತ್ರಿ ಮಾಲ್ ಕೋರ್ಟ್ ಮೊರೆ ಹೋಗಿ ಮತ್ತೆ ಬಾಗಿಲು ಓಪನ್ ಮಾಡಿದೆ.

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ
ಮಂತ್ರಿ ಮಾಲ್ (ಸಂಗ್ರಹ ಚಿತ್ರ)
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 29, 2023 | 7:03 PM

ಬೆಂಗಳೂರು, (ಡಿಸೆಂಬರ್, 29): ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ (Mantri Square Mall) ಮತ್ತೆ ತೆರೆಯಲು ಕೋರ್ಟ್ ಅವಕಾಶ ನೀಡಿದೆ. ತೆರಿಗೆ ಕಟ್ಟದ ಕಾರಣ ಬಿಬಿಎಂಪಿ(BBMP), ಮಂತ್ರಿ ಮಾಲ್​ಗೆ ಬೀಗ ಹಾಕಿತ್ತು. ಬಿಬಿಎಂಪಿಯ ಈ ನಿರ್ಧಾರವನ್ನು ಪ್ರಶ್ನಿಸಿ ಮಾಂತ್ರಿ ಮಾಲ್ ಆಡಳಿತ ಮಂಡಳಿ ಕೋರ್ಟ್​ನಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಅನ್ವಯ ಮತ್ತೆ ಮಂತ್ರಿ ಮಾಲ್ ತೆರೆಯಲು ಬಿಬಿಎಂಪಿ ಅವಕಾಶ ನೀಡಿದೆ. ಇದರೊಂದಿಗೆ ಬಿಬಿಎಂಪಿಗೆ ಹಿನ್ನಡೆಯಾಗಿದೆ.

2019-20ರವರೆಗಿನ ಒಟ್ಟು 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಖುದ್ದು ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ ಅವರು ಡಿಸೆಂಬರ್ 27ರಂದು ಮಂತ್ರಿ ಮಾಲ್​ಗೆ ತೆರಳಿ ಪ್ರಮುಖ ದ್ವಾರವನ್ನು ಲಾಕ್ ಮಾಡಿದ್ದರು.

ಇದನ್ನೂ ಓದಿ: 51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಅಲ್ಲದೇ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.