AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆಯಾಗಿದೆ. ತೆರಿಗೆ ಬಾಕಿ ಉಳಿಸಿಕೊಂಡಿದ್ದ ಮಂತ್ರಿ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಆದ್ರೆ, ಇದೀಗ ಮಂತ್ರಿ ಮಾಲ್ ಕೋರ್ಟ್ ಮೊರೆ ಹೋಗಿ ಮತ್ತೆ ಬಾಗಿಲು ಓಪನ್ ಮಾಡಿದೆ.

ಮಂತ್ರಿ ಮಾಲ್ ವಿರುದ್ಧ ಸಮರ ಸಾರಿದ್ದ ಬಿಬಿಎಂಪಿಗೆ ಕೋರ್ಟ್​ನಲ್ಲಿ ಹಿನ್ನಡೆ
ಮಂತ್ರಿ ಮಾಲ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Dec 29, 2023 | 7:03 PM

Share

ಬೆಂಗಳೂರು, (ಡಿಸೆಂಬರ್, 29): ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ (Mantri Square Mall) ಮತ್ತೆ ತೆರೆಯಲು ಕೋರ್ಟ್ ಅವಕಾಶ ನೀಡಿದೆ. ತೆರಿಗೆ ಕಟ್ಟದ ಕಾರಣ ಬಿಬಿಎಂಪಿ(BBMP), ಮಂತ್ರಿ ಮಾಲ್​ಗೆ ಬೀಗ ಹಾಕಿತ್ತು. ಬಿಬಿಎಂಪಿಯ ಈ ನಿರ್ಧಾರವನ್ನು ಪ್ರಶ್ನಿಸಿ ಮಾಂತ್ರಿ ಮಾಲ್ ಆಡಳಿತ ಮಂಡಳಿ ಕೋರ್ಟ್​ನಿಂದ ತಾತ್ಕಾಲಿಕ ತಡೆಯಾಜ್ಞೆ ತಂದಿದೆ. ಈ ಹಿನ್ನೆಲೆಯಲ್ಲಿ ಕೋರ್ಟ್ ಆದೇಶದ ಅನ್ವಯ ಮತ್ತೆ ಮಂತ್ರಿ ಮಾಲ್ ತೆರೆಯಲು ಬಿಬಿಎಂಪಿ ಅವಕಾಶ ನೀಡಿದೆ. ಇದರೊಂದಿಗೆ ಬಿಬಿಎಂಪಿಗೆ ಹಿನ್ನಡೆಯಾಗಿದೆ.

2019-20ರವರೆಗಿನ ಒಟ್ಟು 51 ಕೋಟಿ ರೂ. ತೆರಿಗೆ ಬಾಕಿ ಉಳಿಸಿಕೊಂಡ ಹಿನ್ನೆಲೆ ಮಂತ್ರಿ ಸ್ಕ್ವೇರ್ ಮಾಲ್​ಗೆ ಬಿಬಿಎಂಪಿ ಬೀಗ ಜಡಿದಿತ್ತು. ಖುದ್ದು ಬಿಬಿಎಂಪಿ ಜಂಟಿ ಆಯುಕ್ತ ಯೋಗೇಶ್​ ಅವರು ಡಿಸೆಂಬರ್ 27ರಂದು ಮಂತ್ರಿ ಮಾಲ್​ಗೆ ತೆರಳಿ ಪ್ರಮುಖ ದ್ವಾರವನ್ನು ಲಾಕ್ ಮಾಡಿದ್ದರು.

ಇದನ್ನೂ ಓದಿ: 51 ಕೋಟಿ ರೂ. ತೆರಿಗೆ ಬಾಕಿ: ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ

2020ರ ಆಗಸ್ಟ್​​​ನಲ್ಲೇ ಬಿಬಿಎಂಪಿಗೆ 10 ಕೋಟಿ ರೂ. ಮೊತ್ತದ ಚೆಕ್ ನೀಡಿತ್ತು. ಆದರೆ ಆ ಚೆಕ್ ಬೌನ್ಸ್ ಆಗಿತ್ತು. ಮತ್ತೆ ಮತ್ತೆ ನೋಟಿಸ್ ನೀಡಿದ್ದರು ಕೂಡ ಮಾಲ್​ನ ಆಡಳಿತ ಮಂಡಳಿ ತೆರಿಗೆ ಪಾವತಿಸಲು ಕ್ರಮ ಕೈಗೊಂಡಿರಲಿಲ್ಲ.

ತೆರಿಗೆ ಪಾವತಿಸದ ವಿಚಾರವಾಗಿ ಮಂತ್ರಿ ಸ್ಕ್ವೇರ್ ಮಾಲ್​​ಗೆ ಬಿಬಿಎಂಪಿ ಬೀಗ ಜಡಿಯುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಕೂಡ ಮೂರ್ನಾಲ್ಕು ಬಾರಿ ಬೀಗ ಹಾಕಲಾಗಿತ್ತು. ಈ ಹಿಂದೆ 2021ರಲ್ಲಿಯೂ ಬಿಬಿಎಂಪಿ ಅಧಿಕಾರಿಗಳು ಮಾಲ್​ಗೆ ಬೀಗ ಹಾಕಿದ್ದರು. ಅಲ್ಲದೇ ಮಾಲ್​​ ಕಚೇರಿಯ ಕುರ್ಚಿ, ಟೇಬಲ್, ಕಂಪ್ಯೂಟರ್ ಹಾಗೂ ಇತರೆ ವಸ್ತುಗಳನ್ನು ಬಿಬಿಎಂಪಿ ಸಿಬ್ಬಂದಿ ವಶಕ್ಕೆ ಪಡೆದುಕೊಂಡಿದ್ದರು. ಬಳಿಕ ಮಂತ್ರಿ ಮಾಲ್ ಬೀಗ ಮುದ್ರೆ ತೆರೆಯಲು ಬಿಬಿಎಂಪಿಗೆ ಹೈಕೋರ್ಟ್ ಆದೇಶ ನೀಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. 

Follow Us
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
ಪತ್ನಿಗೆ ಗೃಹಲಕ್ಷ್ಮಿ ಹಣ ಬಂದಿಲ್ಲ: ಪತಿ ಏಕಾಂಗಿಯಾಗಿ ಪ್ರತಿಭಟನೆ
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
‘ಬಿಜೆಪಿಗರ ಮೇಲೆ ಮೊಟ್ಟೆ ಎಸೆತ ಪೂರ್ವ ನಿಯೋಜಿತ ಕೃತ್ಯ’ ಎಂದ ಆರ್​​ ಅಶೋಕ್
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಸಿಬ್ಬಂದಿಗೆ ಬ್ಯಾಂಕ್ ಮ್ಯಾನೇಜರ್ ಕಿರುಕುಳ ಆರೋಪ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬಿಜೆಪಿ ಶಾಸಕ ಬಿ.ಪಿ. ಹರೀಶ್‌ ಮೇಲೆ ಮೊಟ್ಟೆ ಎಸೆದು ಆಕ್ರೋಶ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಬರ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ತರಾಟೆ
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್
ಭಾರತೀಯ ನೌಕಾಪಡೆಗೆ ಸೇರ್ಪಡೆಗೊಂಡ ಐಎನ್ಎಸ್ ಮಾಲ್ವನ್