AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನ ಶಾಲೆಗೆ ಬಿತ್ತು ಬೀಗ, 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್​ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನ ಶಾಲೆಗೆ ಬಿತ್ತು ಬೀಗ, 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ಸಾಂದರ್ಭಿಕ ಚಿತ್ರ
Follow us
ರಾಚಪ್ಪಾಜಿ ನಾಯ್ಕ್
| Updated By: ಆಯೇಷಾ ಬಾನು

Updated on: Aug 14, 2023 | 9:16 AM

ಬೆಂಗಳೂರು, 14: ವರ್ತೂರು ಪೊಲೀಸ್ ಠಾಣೆ(Varthur Police Station Limits) ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕೇಸ್​ಗೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್​ನ ಶಾಲೆಗೆ ಬೀಗ(School Shut) ಹಾಕಲಾಗಿದೆ. ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿರುವ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್​ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಸದ್ಯ ಮಕ್ಕಳನ್ನ ಬೇರೆ ಶಾಲೆಗೆ ಸೇರಿಸಲು ಅವಕಾಶ ನೀಡಲಾಗಿದ್ದು ತಾವು ಹೇಳಿದ ಶಾಲೆಗೆ ಸರ್ಕಾರದಿಂದಲೇ ದರ ನಿಗದಿ ಮಾಡಿ ಸೀಟ್ ವ್ಯವಸ್ಥೆ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿನ್ನು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ರೆ ಗಲ್ಲು ಶಿಕ್ಷೆ, ಗುಂಪುಗೂಡಿ ಹತ್ಯೆ ಮಾಡಿದ್ರೆ 7 ವರ್ಷ ಜೈಲು

ಜ್ಞಾನ ದೇಗುಲದಲ್ಲೇ ಪೈಶಾಚಿಕ ಕೃತ್ಯ

ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್​ ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ. 10 ವರ್ಷದ ಮಗು Mild Dyslexia ಅಂದ್ರೆ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ಆಗಸ್ಟ್ 3 ರ ಬೆಳಗ್ಗೆ 8.30 ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ.11.30 ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ‌‌ ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದ್ದ. ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ಪುಟ್ಟ ಬಾಲಕಿ ವಿವರಿಸಿದ್ದಾಳೆ. ಘಟನೆ ಸಂಬಂಧ ಬಾಲಕಿ ತಾಯಿ ದೂರಿನ ಮೇರೆಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಆರೋಪಿ ಪ್ರಾಂಶುಪಾಲನನ್ನ ಬಂಧಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಈಗ ಶಾಲೆಗೆ ಬೀಗ ಬಿದ್ದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಒಂದು ವಾರದಲ್ಲಿ ಗೃಹ ಲಕ್ಷ್ಮಿಯರ ಖಾತೆಗೆ ಹಣ ಜಮೆ: ಲಕ್ಷ್ಮೀ ಹೆಬ್ಬಾಳ್ಕರ್​
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ