AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನ ಶಾಲೆಗೆ ಬಿತ್ತು ಬೀಗ, 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್​ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ.

ಬೆಂಗಳೂರು: ಬಾಲಕಿ ಮೇಲೆ ಅತ್ಯಾಚಾರ ಎಸಗಿದ್ದವನ ಶಾಲೆಗೆ ಬಿತ್ತು ಬೀಗ, 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರ
ಸಾಂದರ್ಭಿಕ ಚಿತ್ರ
ರಾಚಪ್ಪಾಜಿ ನಾಯ್ಕ್
| Edited By: |

Updated on: Aug 14, 2023 | 9:16 AM

Share

ಬೆಂಗಳೂರು, 14: ವರ್ತೂರು ಪೊಲೀಸ್ ಠಾಣೆ(Varthur Police Station Limits) ವ್ಯಾಪ್ತಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕೇಸ್​ಗೆ ಸಂಬಂಧಿಸಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್​ನ ಶಾಲೆಗೆ ಬೀಗ(School Shut) ಹಾಕಲಾಗಿದೆ. ಅನಧಿಕೃತವಾಗಿ ಶಾಲೆ ನಿರ್ಮಾಣ ಮಾಡಿರುವ ಹಿನ್ನೆಲೆ ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶದ ಮೇರೆಗೆ ಶಾಲೆ ಬಂದ್ ಮಾಡಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಆರೋಪಿ ಲ್ಯಾಂಬರ್ಟ್ ಪುಷ್ಪರಾಜ್​ ಕೋರಮಂಗಲದಲ್ಲಿ ಶಾಲೆ ಕಟ್ಟಲು ಅನುಮತಿ ಪಡೆದಿದ್ದ. ಆದ್ರೆ ಅನಧಿಕೃತವಾಗಿ ವರ್ತೂರು ಸಮೀಪ ಶಾಲೆ ನಿರ್ಮಾಣ ಮಾಡಿದ್ದಾನೆ. ಈ ಹಿನ್ನೆಲೆ ಶಾಲೆಗೆ ಬೀಗ ಹಾಕಲಾಗಿದೆ. ಇದರಿಂದ ಶಾಲೆಯಲ್ಲಿ ಓದುತ್ತಿದ್ದ 140ಕ್ಕೂ ಹೆಚ್ಚು ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ. ಸದ್ಯ ಮಕ್ಕಳನ್ನ ಬೇರೆ ಶಾಲೆಗೆ ಸೇರಿಸಲು ಅವಕಾಶ ನೀಡಲಾಗಿದ್ದು ತಾವು ಹೇಳಿದ ಶಾಲೆಗೆ ಸರ್ಕಾರದಿಂದಲೇ ದರ ನಿಗದಿ ಮಾಡಿ ಸೀಟ್ ವ್ಯವಸ್ಥೆ ಮಾಡಿಸುವುದಾಗಿ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಇದನ್ನೂ ಓದಿ: ಭಾರತದಲ್ಲಿನ್ನು ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ್ರೆ ಗಲ್ಲು ಶಿಕ್ಷೆ, ಗುಂಪುಗೂಡಿ ಹತ್ಯೆ ಮಾಡಿದ್ರೆ 7 ವರ್ಷ ಜೈಲು

ಜ್ಞಾನ ದೇಗುಲದಲ್ಲೇ ಪೈಶಾಚಿಕ ಕೃತ್ಯ

ಪ್ರಾಂಶುಪಾಲ ಲ್ಯಾಂಬರ್ಟ್ ಪುಷ್ಪರಾಜ್​ ತನ್ನದೇ ಶಾಲೆಯ 10 ವರ್ಷದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ್ದ. 10 ವರ್ಷದ ಮಗು Mild Dyslexia ಅಂದ್ರೆ ನರದೌರ್ಬಲ್ಯ ಕಾಯಿಲೆಯಿಂದ ಬಳಲುತ್ತಿದ್ದು ಗುಂಜೂರು ಸಮೀಪದ ಖಾಸಗಿ ಶಾಲೆಯಲ್ಲಿ 2ನೇ ತರಗತಿ ವ್ಯಾಸಾಂಗ ಮಾಡುತ್ತಿದ್ದಳು. ಆಗಸ್ಟ್ 3 ರ ಬೆಳಗ್ಗೆ 8.30 ಕ್ಕೆ ಬಾಲಕಿ ಶಾಲೆಗೆ ತೆರಳಿದ್ದಾಳೆ.11.30 ಕ್ಕೆ ಶಾಲೆಯಿಂದ ತನ್ನ ಕೊಠಡಿಗೆ ಕರೆದೊಯ್ದ ಪ್ರಾಂಶುಪಾಲ‌‌ ವಿಶ್ರಾಂತಿ ಪಡೆಯುವಂತೆ ಹೇಳಿ ಅತ್ಯಾಚಾರ ಎಸಗಿದ್ದ. ಮಧ್ಯಾಹ್ನ 3.30 ಕ್ಕೆ ಶಾಲೆಯಿಂದ ಮನೆಗೆ ವಾಪಸ್ಸಾಗಿದ್ದ ಬಾಲಕಿ, ತನ್ನ ತಾಯಿಗೆ ಹೊಟ್ಟೆ ನೋವು ಎಂದು ಹೇಳಿಕೊಂಡಳು. ಸ್ನಾನ ಮಾಡಿಸಿ ಕರೆತರುವಾಗ ರಕ್ತದ ಕಲೆಗಳು ಕಂಡುಬಂದಿದೆ. ಇದೇ ವಿಚಾರವಾಗಿ ಮಗುವನ್ನು ತಾಯಿ ಕೇಳಿದಾಗ ನಡೆದ ಘಟನೆ ಬಗ್ಗೆ ಪುಟ್ಟ ಬಾಲಕಿ ವಿವರಿಸಿದ್ದಾಳೆ. ಘಟನೆ ಸಂಬಂಧ ಬಾಲಕಿ ತಾಯಿ ದೂರಿನ ಮೇರೆಗೆ ವರ್ತೂರು ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದ್ದು. ಆರೋಪಿ ಪ್ರಾಂಶುಪಾಲನನ್ನ ಬಂಧಿಸಲಾಗಿತ್ತು. ಈ ಘಟನೆ ಬೆನ್ನಲ್ಲೇ ಈಗ ಶಾಲೆಗೆ ಬೀಗ ಬಿದ್ದಿದೆ.

ಅಪರಾಧ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
Rachappaji Naik S
Rachappaji Naik S

ರಾಚಪ್ಪಾಜಿ ನಾಯ್ಕ್ ಆದ ನಾನು ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಗೊಲ್ಲರದಿಂಬ ಗ್ರಾಮದವನು ಕಳೆದ 2 ವರ್ಷ 11 ತಿಂಗಳಿನಿಂದ ಟಿವಿ9 ಬೆಂಗಳೂರು ಕ್ರೈಂ ಬ್ಯೂರೊ ವರದಿಗಾರನಾಗಿ ಕೆಲಸ ಮಾಡುತ್ತಿದ್ದು.ರಾಜ್ಯದಲ್ಲಿ ನಡೆದ ಪ್ರಮುಖ ಅಪಾರಧ ವಿಷಯಗಳ ಮೇಲಿನ ವರದಿ ಮಾಡಿದ್ದೇನೆ.ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಬೇರೆ ಬೇರೆ ಭಾಗಗಳಲ್ಲಿ ನಡೆದ ಪ್ರಮುಖ ಬೆಳವಣಿಗೆಯ ವರದಿ ಮಾಡಿದ್ದೇನೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ