AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಳೆ ಕೊರತೆ ಎಫೆಕ್ಟ್​​: ಹೆಚ್ಚುವರಿಯಾಗಿ ಕರ್ನಾಟಕದ 53 ತಾಲೂಕು ಬರಪೀಡಿತವೆಂದು ಘೋಷಣೆಗೆ ಸಿದ್ಧತೆ

ಕರ್ನಾಟಕದಲ್ಲಿ ತೀವ್ರ ಮಳೆ ಅಭಾವದ ಹಿನ್ನೆಲೆಯಲ್ಲಿ ಈಗಾಗಲೇ 101 ತಾಲೂಕುಗಳನ್ನು ಬರಪೀಡಿತವೆಂದು ಘೋಷಿಸಿದ್ದ ರಾಜ್ಯ ಸರ್ಕಾರ, ಇದೀಗ ಹೆಚ್ಚುವರಿಯಾಗಿ 17 ಜಿಲ್ಲೆಗಳ 53 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲು ಸಿದ್ಧತೆ ನಡೆಸಿದೆ. ಜೂ.1ರಿಂದ ಸೆ.16ರವರೆಗಿನ ವೈಜ್ಞಾನಿಕ ವರದಿ ಆಧಾರದಲ್ಲಿ ಸೆ.19ರಿಂದ 20ರವರೆಗೆ ಹೊಲ, ಗದ್ದೆಗಳಲ್ಲಿ ಬರ ಅಧ್ಯಯನಕ್ಕೆ ಸೂಚನೆ ನೀಡಲಾಗಿದೆ.

ಮಳೆ ಕೊರತೆ ಎಫೆಕ್ಟ್​​: ಹೆಚ್ಚುವರಿಯಾಗಿ ಕರ್ನಾಟಕದ 53 ತಾಲೂಕು ಬರಪೀಡಿತವೆಂದು ಘೋಷಣೆಗೆ ಸಿದ್ಧತೆ
ಸಾಂದರ್ಭಿಕ ಚಿತ್ರImage Credit source: Getty Images
ಹರೀಶ್ ಜಿ.ಆರ್​.
| Edited By: |

Updated on: Sep 17, 2026 | 5:52 PM

Share

ಬೆಂಗಳೂರು, ಸೆಪ್ಟೆಂಬರ್​​ 17: ಕರ್ನಾಟಕದಲ್ಲಿ ಮಳೆಯ ತೀವ್ರ ಅಭಾವದ ಹಿನ್ನೆಲೆ ಈ ಹಿಂದೆ 101 ತಾಲೂಕು ಬರ ಪೀಡಿತವೆಂದು ಘೋಷಿಸಿದ್ದ ಸರ್ಕಾರ ಹೆಚ್ಚುವರಿಯಾಗಿ 53 ತಾಲೂಕು ಬರಪೀಡಿತವೆಂದು ಘೋಷಣೆಗೆ ಸಿದ್ಧತೆ ನಡೆಸಿದೆ. ಈ ಸಂಬಂಧ ತಾಲೂಕುಗಳಲ್ಲಿ ನೈಜ ಪರಿಸ್ಥಿತಿ ಅರಿಯಲು ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಿಂದ ಮಹತ್ವದ ಅಧಿಸೂಚನೆ ಹೊರಡಿಸಲಾಗಿದೆ. 2020ರ ಬರ ನಿರ್ವಹಣಾ ಕೈಪಿಡಿ ನಿಯಮಗಳನ್ವಯ 17 ಜಿಲ್ಲೆಗಳ 53 ತಾಲೂಕು ಬರ‌ ಪೀಡಿತವೆಂದು ಘೋಷಣೆಗೆ ಅರ್ಹತೆ ಬಗ್ಗೆ ನಿರ್ಧರಿಸಲು ಸೆ.16ರಂದು ಡಿಸಿಎಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಸೆ.19ರಿಂದ 20ರವರೆಗೆ ಹೊಲ, ಗದ್ದೆಗಳಲ್ಲಿ ಬರ ಅಧ್ಯಯನಕ್ಕೆ ಸೂಚನೆ

ಜೂ.1ರಿಂದ ಸೆ.16ರವರೆಗಿನ ವೈಜ್ಞಾನಿಕ ವರದಿ ಆಧಾರದಲ್ಲಿ ಸೆ.19ರಿಂದ 20ರವರೆಗೆ ಹೊಲ, ಗದ್ದೆಗಳಲ್ಲಿ ಬರ ಅಧ್ಯಯನಕ್ಕೆ ಸೂಚನೆ ನೀಡಲಾಗಿದ್ದು, ಸೆ.21ಕ್ಕೆ ಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ ಫಾರ್ಮ್-11 ಸಲ್ಲಿಸಬೇಕು. ಮೊಬೈಲ್ ಌಪ್ ಮೂಲಕ ಪಾರದರ್ಶಕವಾಗಿ ಬೆಳೆ ಹಾನಿ ಸಮೀಕ್ಷೆ ನಡೆಸಿ ಶೇ.33ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದ್ದರೆ ಅಂತಹ ತಾಲೂಕು ಬರಪೀಡಿತ, ಶೇ.50ಕ್ಕಿಂತ ಹೆಚ್ಚು ಬೆಳೆ ಹಾನಿಯಾಗಿದ್ದರೆ ತೀವ್ರ ಸ್ವರೂಪದ ಬರ ಎಂದು ವರ್ಗೀಕರಣ ಮಾಡಲು ನಿರ್ಧರಿಸಲಾಗಿದೆ.

LIVE TV

ಇದನ್ನೂ ಓದಿ: ಆತುರ ಬೇಡ, ಕೇಂದ್ರದ ನಿಯಮಾನುಸಾರ ಬರ ಪೀಡಿತ ತಾಲೂಕುಗಳ ಘೋಷಣೆ: ಸಿಎಂ ಡಿ.ಕೆ. ಶಿವಕುಮಾರ್

ಮೊದಲ ಹಂತದಲ್ಲಿ ಆಗಸ್ಟ್ 27ರಂದು ಸರ್ಕಾರವು 2026ರ ಮುಂಗಾರು ಹಂಗಾಮಿಗೆ 101 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಿತ್ತು. ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥರಾಗಿರುವ ಸಂಬಂಧಪಟ್ಟ ಜಿಲ್ಲಾಧಿಕಾರಿಗಳಿಗೆ ರಾಜ್ಯ ವಿಪತ್ತು ಪ್ರತಿಕ್ರಿಯಾ ನಿಧಿ (SDRF) ಮಾರ್ಗಸೂಚಿಗಳ ಅನ್ವಯ ಅಗತ್ಯ ಪರಿಹಾರ ಹಾಗೂ ತುರ್ತು ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಅಧಿಕಾರ ನೀಡಿದೆ. ಕೃಷಿ ಆಯುಕ್ತರು, ತೋಟಗಾರಿಕೆ ಇಲಾಖೆ ನಿರ್ದೇಶಕರು ಹಾಗೂ ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಜಂಟಿಯಾಗಿ ಬೆಳೆ ನಷ್ಟದ ಸಮೀಕ್ಷೆ ನಡೆಸಿ, ಸಾಧ್ಯವಾದಷ್ಟು ಶೀಘ್ರದಲ್ಲಿ ಪರಿಹಾರ ಅಂದಾಜು ವರದಿಗಳನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ಗಾಣಗಾಪುರ ದೇವಸ್ಥಾನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭೇಟಿ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!