AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಹುತೇಕ ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿಲ್ಲ ಖಾಯಂ ಪ್ರಾಧ್ಯಾಪಕರು: ರಾಜ್ಯದಲ್ಲಿ 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ!

ರಾಜ್ಯದ ಬಹುತೇಕ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಯಂ ಪ್ರಾಧ್ಯಾಪಕರ ಕೊರತೆಯಿದ್ದು, 4,000ಕ್ಕೂ ಹೆಚ್ಚು ಬೋಧಕ ಹುದ್ದೆಗಳು ಖಾಲಿ ಇವೆ. ಇದರಿಂದ ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗುವ ಆರೋಪ ಕೇಳಿಬಂದಿದೆ. ಈ ನಡುವೆ ಶೀಘ್ರದಲ್ಲೇ ನೇಮಕಾತಿ ನಡೆಸುವುದಾಗಿ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭರವಸೆ ನೀಡಿದ್ದಾರೆ.

ಬಹುತೇಕ ಸರ್ಕಾರಿ ವಿಶ್ವ ವಿದ್ಯಾಲಯಗಳಲ್ಲಿಲ್ಲ ಖಾಯಂ ಪ್ರಾಧ್ಯಾಪಕರು: ರಾಜ್ಯದಲ್ಲಿ 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ!
ಸಾಂದರ್ಭಿಕ ಚಿತ್ರImage Credit source: Getty Images
ವಿನಯ್​ ಕಾಶಪ್ಪನವರ್​
| Edited By: |

Updated on:Sep 17, 2026 | 5:01 PM

Share

ಬೆಂಗಳೂರು, ಸೆಪ್ಟೆಂಬರ್​​ 17: ಉನ್ನತ ಶಿಕ್ಷಣ ಪಡೆಯಲು ಗ್ರಾಮೀಣ ಭಾಗದ ಬಡ ಪ್ರತಿಭಾನ್ವಿತ ವಿದ್ಯಾರ್ಥಿಗಳು ಅವಲಂಬಿಸುವುದು ಸರ್ಕಾರಿ ವಿಶ್ವ ವಿದ್ಯಾಲಯಗಳನ್ನ. ಆದರೆ ಉನ್ನತ ಶಿಕ್ಷಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ಬಹುತೇಕ ಯೂನಿವರ್ಸಿಟಿಗಳಲ್ಲಿ ನುರಿತ ಖಾಯಂ ಪ್ರಾಧ್ಯಾಪಕರೇ ಇಲ್ಲದಂತಾಗಿರೋದು ವಿದ್ಯಾರ್ಥಿಗಳ ಕಲಿಕೆ ಕುಂಠಿತವಾಗಿರುವ ಜೊತೆಗೆ, ಹಲವು ಸಮಸ್ಯೆಗಳಿಗೆ ಕಾರಣವಾಗಿದೆ. ಬೆಂಗಳೂರು ವಿಶ್ವವಿದ್ಯಾಲಯ, ನೃಪತುಂಗ ವಿವಿ, ಕೇಂದ್ರ ವಿವಿ ಹಾಗೂ ಮಹಾರಾಣಿ ಕ್ಲಸ್ಟರ್ ವಿವಿ ಸೇರಿದಂತೆ ರಾಜ್ಯದ ಹಲವು ವಿಶ್ವವಿದ್ಯಾಲಯಗಳಲ್ಲಿ ಪಾಠ ಹೇಳಿಕೊಡುವ ಗುರುಗಳೇ ಇಲ್ಲದಂತಾಗಿದೆ. ವಿದ್ಯಾರ್ಥಿಗಳಿಗೆ ಕೇವಲ ಅತಿಥಿ ಶಿಕ್ಷಕರಿಂದ ಪಾಠ ಕೇಳುವ ಭಾಗ್ಯ ದೊರೆತಿದೆ. ರಾಜ್ಯದಲ್ಲಿ ಸರಿಸುಮಾರು 4,000ಕ್ಕೂ ಹೆಚ್ಚು ಬೋಧಕರ ಹುದ್ದೆಗಳು ಖಾಲಿ ಇರುವ ಪರಿಣಾಮ, ವಿದ್ಯಾರ್ಥಿಗಳ ಭವಿಷ್ಯ ಅತಂತ್ರವಾಗಿದೆ.

ಶೀಘ್ರ ಪ್ರಾಧ್ಯಾಪಕರ ನೇಮಕಾತಿಗೆ ಒತ್ತಾಯ

ಪದವಿ ಕೋರ್ಸ್ ಮುಗಿಸಿ ಉನ್ನತ ಶಿಕ್ಷಣ ಪಡೆಯುವ ನಿಟ್ಟಿನಲ್ಲಿ ಸ್ನಾತಕೋತ್ತರ ಪದವಿಗೆ ದಾಖಲಾತಿ ಪಡೆಯುವ ವಿಧ್ಯಾರ್ಥಿಗಳು ಸಾಕಷ್ಟು ಕನಸುಗಳನ್ನು ಹೊತ್ತು ಬಂದಿರ್ತಾರೆ. ಜ್ಞಾನ ದೇಗುಲ ಎಂದೇ ಕರೆಸಿಕೊಳ್ಳುವ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ಮಟ್ಟದ ಜ್ಞಾನ ಸಿಗುತ್ತೆ ಅನ್ನೋ ನಿರೀಕ್ಷೆ ಇಟ್ಟುಕೊಂಡಿರುತ್ತಾರೆ. ಆದರೆ ವಿದ್ಯಾರ್ಥಿಗಳ ನಿರೀಕ್ಷೆಗೆ ತಕ್ಕಂತೆ ಬೋಧನಾ ಸಿಬ್ಬಂದಿ ಪೂರೈಸದ ಸರ್ಕಾರದ ನಡೆ ವಿದ್ಯಾರ್ಥಿಗಳ ಬೇಸರಕ್ಕೆ ಕಾರಣವಾಗಿದೆ. ಹೀಗಾಗಿ ಆದಷ್ಟು ಬೇಗ ಪ್ರಾಧ್ಯಾಪಕರ ನೇಮಕಾತಿ‌ ಮಾಡುವಂತೆ ಒತ್ತಾಯ ಕೇಳಿಬಂದಿದೆ.

LIVE TV

ಇದನ್ನೂ ಓದಿ: ಗುಡ್ ನ್ಯೂಸ್: ರೇಷನ್ ಕಾರ್ಡ್​ ಇ-ಕೆವೈಸಿ ದಿನಾಂಕ ವಿಸ್ತರಣೆ: ನ್ಯಾಯಬೆಲೆ ಅಂಗಡಿಗಳ ವೇಳಾಪಟ್ಟಿ ಪರಿಷ್ಕರಣೆ

ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭರವಸೆ

ಈ ನಡುವೆ ರಾಜ್ಯದ ವಿವಿಗಳಿಗೆ ಉನ್ನತ ಶಿಕ್ಷಣ ಸಚಿವ ಬಸವರಾಜ್ ರಾಯರೆಡ್ಡಿ ಭೇಟಿ ನೀಡಿ, ಸ್ಥಿತಿಗತಿಗಳ ಕುರಿತು ಚರ್ಚೆ ನಡೆಸಲು ಮುಂದಾಗಿದ್ದಾರೆ. ಜೊತೆಗೆ ರಾಜ್ಯದ 410 ಪ್ರಥಮ ದರ್ಜೆ ಕಾಲೇಜುಗಳಿಗೆ ಖಾಯಂ ಪ್ರಾಂಶುಪಾಲರು ಇರಲಿಲ್ಲ. ಹೀಗಾಗಿ ಇನ್ನೊಂದು ವಾರದಲ್ಲಿ 320 ಕಾಲೇಜಿಗೆ ಪ್ರಾಂಶುಪಾಲರ ನೇಮಕ ಮಾಡಲು ಇಲಾಖೆ ಮುಂದಾಗಿದೆ. 1 ಸಾವಿರ ಪ್ರೊಫೆಸರ್​​ಗಳನ್ನು ವಿಶ್ವವಿದ್ಯಾಲಯಕ್ಕೆ, 2 ಸಾವಿರ ಪ್ರಾಧ್ಯಾಪಕರನ್ನು ಕಾಲೇಜುಗಳಿಗೆ ನೇಮಕ ಮಾಡಿಕೊಳ್ಳಲು ತೀರ್ಮಾನಿಸಲಾಗಿದೆ. ಇದಕ್ಕೆ ಹಣಕಾಸು ಇಲಾಖೆಯೂ ಒಪ್ಪಿಗೆ ನೀಡಿದ್ದು, ಆದಷ್ಟು ಬೇಗ ಕರ್ನಾಟಕ ಪ್ರರೀಕ್ಷಾ ಪ್ರಾಧಿಕಾರದ ಮೂಲಕ ನೇಮಕ ಮಾಡಲಾಗುವುದು ಎಂದು ಟಿವಿ9ಗೆ ಸಚಿವರು ಭರವಸೆ ನೀಡಿದ್ದಾರೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 5:00 pm, Thu, 17 September 26

Follow Us
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ಕಾವ್ಯಾ ಅಂದವ ಹೊಗಳಿ ಅಟ್ಟಕ್ಕೇರಿಸಿದ ತಾಂಡವ್, ಗಗನ್: ವಿಡಿಯೋ
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
ದಸರಾ ಗಜಪಡೆಗೆ ಹಣ್ಣು ತಿನ್ನಿಸಿದ ತ್ರಿಷಿಕಾ, ಆದ್ಯವೀರ್
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
2028ಕ್ಕೆ ರಾಮನಗರದಿಂದಲೇ ಸ್ಪರ್ಧೆ: ನಿಖಿಲ್​ ಕುಮಾರಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಎತ್ತಿನಹೊಳೆ ಯೋಜನೆಯ ಕಾಮಗಾರಿ ವೀಕ್ಷಿಸಿದ ಸಚಿವ ಚಲುವರಾಯಸ್ವಾಮಿ
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪೆಟ್ರೋಲ್ ಬಂಕ್‌ಗಳಲ್ಲಿ ವಂಚನೆ ಆರೋಪದ ಬಗ್ಗೆ ‘ಟಿವಿ9’ ರಿಯಾಲಿಟಿ ಚೆಕ್
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಪ್ರಧಾನಿ ಮೋದಿ ಹುಟ್ಟುಹಬ್ಬದ ಹಿನ್ನೆಲೆ ವಿ. ಸೋಮಣ್ಣ ವಿಶೇಷ ಪೂಜೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಸಿಎಂ ಬರಲಿರುವ ಸ್ಥಳಕ್ಕೆ ನುಗ್ಗಲು ಯತ್ನಿಸಿದ ಎಸ್​ಎಫ್​ಐ ಮುಖಂಡರು ವಶಕ್ಕೆ
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ಕಲಬುರಗಿಯಲ್ಲಿ ಸಿದ್ದರಾಮಯ್ಯ ಮೂರ್ತಿ ಸ್ಥಾಪನೆ: ಪಾಲಿಕೆಯಿಂದ ತೆರವು
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ತಾನೇ ವಿಡಿಯೋ ಮಾಡಿಸಿ ಯೂಟ್ಯೂಬರ್ ವಿರುದ್ಧ ಕೇಸ್ ದಾಖಲಿಸಿದ ಇನ್ಸ್​ಪೆಕ್ಟರ್!
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ
ಕೈ ಕೈ ಮಿಲಾಯಿಸಿಕೊಳ್ಳುವ ಹಂತಕ್ಕೆ ಹೋಯ್ತು ಅವಿನಾಶ್-ಮಂಜು ಜಗಳ