AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Haralur Lake: ಬೆಂಗಳೂರಿನ ಹರಳೂರು ಕೆರೆಗೆ ಹರಿಯುತ್ತಿದೆ ಕೊಳಚೆ ನೀರು, ಮೀನುಗಳ ಮಾರಣಹೋಮ

ಮಳೆನೀರನ್ನು ಕೆರೆಗೆ ಸಾಗಿಸಬೇಕಾಗಿರುವ ಕಾಲುವೆಗೆ ಚರಂಡಿ ನೀರು ಬೆರೆಯುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ.

Haralur Lake: ಬೆಂಗಳೂರಿನ ಹರಳೂರು ಕೆರೆಗೆ ಹರಿಯುತ್ತಿದೆ ಕೊಳಚೆ ನೀರು, ಮೀನುಗಳ ಮಾರಣಹೋಮ
ಬೆಂಗಳೂರಿನ ಹರಳೂರು ಕೆರೆಯಲ್ಲಿ ಸತ್ತಿರುವ ಮೀನುಗಳು
TV9 Web
| Edited By: |

Updated on: Sep 15, 2022 | 10:32 AM

Share

ಬೆಂಗಳೂರು: ನಗರದ ಬೆಳ್ಳಂದೂರು ಪ್ರದೇಶದ ಹರಳೂರು ಕೆರೆಯಲ್ಲಿ (Haralur lake) ಮತ್ತೊಮ್ಮೆ ಮೀನುಗಳು ಸತ್ತು (Fish Kill) ತೇಲುತ್ತಿವೆ. ಕಳೆದ ಮೂರ್ನಾಲ್ಕು ದಿನಗಳಲ್ಲಿ ಮೂರರಿಂದ ನಾಲ್ಕು ಟನ್​ಗಳಷ್ಟು ಮೀನುಗಳು ಸತ್ತಿವೆ ಎಂದು ಎಎನ್​ಐ ಸುದ್ದಿಸಂಸ್ಥೆಯು ವರದಿ ಮಾಡಿದೆ. ವಿಷಕಾರಿ ಕೊಳಚೆ ನೀರು ಕೆರೆಗೆ ಹರಿಯುತ್ತಿರುವುದೇ ಮೀನುಗಳ ಸಾವಿಗೆ ಮುಖ್ಯ ಕಾರಣ ಎಂದು ಹೇಳಲಾಗಿದೆ.

ಮಳೆನೀರನ್ನು ಕೆರೆಗೆ ಸಾಗಿಸಬೇಕಾಗಿರುವ ಕಾಲುವೆಗೆ ಚರಂಡಿ ನೀರು ಬೆರೆಯುತ್ತಿದೆ ಎಂದು ಸ್ಥಳೀಯರಾದ ಅಮರದೀಪ್ ಅಡಿಗ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ವಿಷಕಾರಿ ಚರಂಡಿ ನೀರನ್ನು ಕೆರೆಗೆ ಹರಿಸಬಾರದು ಎನ್ನುವ ಕಾರಣಕ್ಕೆ ನಿರ್ಮಿಸಿರುವ ಬ್ಯಾರಿಕೇಡ್​ಗಳು ಸ್ವಲ್ಪ ಸಮಯದವರೆಗೆ ಮಾತ್ರ ಕೊಳಕು ನೀರನ್ನು ಹಿಡಿದಿಟ್ಟುಕೊಳ್ಳುತ್ತವೆ. ಆದರೆ ಕೆಲವೇ ಹೊತ್ತಿನಲ್ಲಿ ಅದು ಉಕ್ಕಿ ಹರಿಯುತ್ತದೆ ಎಂದು ಸ್ಥಳೀಯರು ಹೇಳುತ್ತಾರೆ.

ಕೊಳಕು ನೀರನ್ನು ಕೆರೆಗೆ ಸೇರದಂತೆ ತಡೆಯಬೇಕಾದ ಬ್ಯಾರಿಕೇಡ್ ವೈಫಲ್ಯದಿಂದಾಗಿ ಕಳೆದ ಮೂರ್ನಾಲ್ಕು ದಿನಗಳಲ್ಲಿ ಸುಮಾರು 4 ಟನ್ ಮೀನುಗಳು ಸಾವನ್ನಪ್ಪಿವೆ. ‘ಮಳೆನೀರನ್ನು ಕೆರೆಗೆ ಹರಿಸುವ ಕಾಲುವೆ ಜಾಲಕ್ಕೆ ಒಂದು ಕಡೆ ಕೊಳಚೆ ನೀರನ್ನು ಬೆರೆಯುತ್ತಿದೆ. ಅದೇ ನೀರು ಕೆರೆಗೂ ಬರುತ್ತಿದೆ. ಹೀಗಾಗಿಯೇ ಆಗಾಗ ಕೆರೆಯಲ್ಲಿ ನೊರೆ ಕಾಣಿಸಿಕೊಳ್ಳುತ್ತಿದೆ. ಆಮ್ಲಜನಕದ ಕೊರತೆಯಿಂದಾಗಿ ಮೀನುಗಳು ಸಾಯುವುದು ಸಾಮಾನ್ಯ ಸಂಗತಿಯಾಗಿದೆ’ ಎಂದು ಸ್ಥಳೀಯರು ಹೇಳುತ್ತಾರೆ.

7 ತಿಂಗಳಲ್ಲಿ 8 ಬಾರಿ ಮೀನುಗಳ ಸಾವು

ಬೆಂಗಳೂರು ಆ್ಯಕ್ಷನ್ ಏಡ್ ಸಂಸ್ಥೆಯು ಪ್ರಕಟಿಸಿರುವ ‘ಫಿಶ್​ಕಿಲ್ ಇನ್ ಲೇಕ್ಸ್ ಆಫ್ ಬೆಂಗಳೂರು 2017-2022’ (Fishkill in Lakes of Bengaluru) ವರದಿಯ ಪ್ರಕಾರ 2022ರ ಜನವರಿಯಿಂದ ಜುಲೈ ಅವಧಿಯಲ್ಲಿ ಬೆಂಗಳೂರಿನ ಕೆರೆಗಳಲ್ಲಿ ಒಟ್ಟು ಎಂಟು ಬಾರಿ ಮೀನುಗಳು ಸಾಮೂಹಿಕವಾಗಿ ಸಾವನ್ನಪ್ಪಿವೆ. ಕಳೆದ ಐದು ವರ್ಷಗಳ ವಾರ್ಷಿಕ ಸರಾಸರಿಯ ಪ್ರಮಾಣವನ್ನೂ ಇದು ಮೀರಿದೆ. 2017 ಮತ್ತು 2018ರಲ್ಲಿ ಆರು ಬಾರಿ ಇಂಥ ಘಟನೆಗಳು ನಡೆದಿದ್ದವು. 2019 ಮತ್ತು 2021ರಲ್ಲಿ ಲಾಕ್​ಡೌನ್ ಕಾರಣದಿಂದ ಮೀನುಗಳ ಸಾವಿನ ಪ್ರಕರಣಗಳು ಹೆಚ್ಚಾಗಿ ವರದಿಯಾಗಿರಲಿಲ್ಲ.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಪ್ರದೇಶದಲ್ಲಿ ಕೊಳಕು ನೀರು ಕೆರೆಗಳನ್ನು ಸೇರುವ ಪ್ರಕರಣಗಳು ಹಲವು ಬಾರಿ ವರದಿಯಾಗಿವೆ. ಆದರೂ ಅಧಿಕಾರಿಗಳು ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಸ್ಥಳೀಯರು ಬೇಸರ ವ್ಯಕ್ತಪಡಿಸಿದ್ದಾರೆ.

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ