AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಕಳ್ಳ-ಕಳ್ಳತನ, ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಯಾಕೆ ಹೊತ್ತೊಯ್ದ ಎಂಬುದೇ ನಿಗೂಢ!

ಶನಿ ವಿಗ್ರಹವನ್ನೇ ಕದ್ದಿದ್ದಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಯಾಕೆ ಹೊತ್ತೊಯ್ದ ಎಂಬುದು ನಿಜಕ್ಕೂ ನಿಗೂಢವಾಗಿದೆ. ಈ ಕುರಿತು ಯಡಿಯೂರು ಜನ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಕಳ್ಳ-ಕಳ್ಳತನ, ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಯಾಕೆ ಹೊತ್ತೊಯ್ದ ಎಂಬುದೇ ನಿಗೂಢ!
ಸಿಲಿಕಾನ್ ಸಿಟಿಯಲ್ಲೊಬ್ಬ ವಿಚಿತ್ರ ಕಳ್ಳ-ಕಳ್ಳತನ! ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಹೊತ್ತೊಯ್ದ
TV9 Web
| Edited By: |

Updated on:Jan 20, 2022 | 11:43 AM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲೊಂದು ವಿಚಿತ್ರ ಕಳ್ಳತನ ಪ್ರಕರಣ ನಡೆದಿದೆ. ಬೆಳ್ಳಿ, ಬಂಗಾರ, ವಜ್ರ ವೈಢೂರ್ಯ ಕದಿಯೋದು ಬಿಟ್ಟು ಇಲ್ಲೊಬ್ಬ ಶನಿ ವಿಗ್ರಹವನ್ನೇ ಕಳ್ಳತನ ಮಾಡಿದ್ದಾನೆ ಭೂಪ. ನವ ಗ್ರಹ ಕಟ್ಟೆಯಲ್ಲಿ ಶನಿ ಮಹಾತ್ಮ ವಿಗ್ರಹವನ್ನೇ ಕಳವು ಮಾಡಿದ್ದಾನೆ. ಎಲ್ಲ ವಿಗ್ರಹಗಳನ್ನು ಬಿಟ್ಟ ಭೂಪ ಶನಿ ವಿಗ್ರಹವನ್ನೇ ಹೊತ್ತೊಯ್ದಿರುವುದು ಕುತೂಹಲಕಾರಿಯಾಗಿದೆ. ಶನಿ ವಿಗ್ರಹ ಹೊತ್ತೊಯ್ದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಯಡಿಯೂರು ಕೆರೆ ಮುಂಭಾಗದ ಅಶ್ವತ್ಥ ಕಟ್ಟೆಯಲ್ಲಿ ರಾತ್ರಿ ವೇಳೆ ಈ ಘಟನೆ ನಡೆದಿದೆ. ಬೆಳಗ್ಗೆ ಪೂಜೆಗೆ ಬಂದ ಭಕ್ತರಿಗೆ ಶನಿ ವಿಗ್ರಹ ಕಾಣದಿದ್ದಾಗ ಪ್ರಕರಣ ಬೆಳಕಿಗೆ ಬಂದಿದೆ! ಕಳ್ಳತನ ಮಾಡಿದ ಗಣೇಶನ ವಿಗ್ರಹ ಪೂಜೆ ಮಾಡಿದರೆ ಒಳಿತು ಎಂಬ ಪ್ರತೀತಿ ಇದೆ ಎಂಬುದು ಇಲ್ಲಿ ಗಮನಾರ್ಹ.

ಆದಾಗ್ಯೂ ಶನಿ ವಿಗ್ರಹವನ್ನೇ ಕದ್ದಿದ್ದಕ್ಕೆ ಕಾರಣವೇನು ಎಂಬುದು ಗೊತ್ತಾಗಿಲ್ಲ. ಎಲ್ಲ ಬಿಟ್ಟು ಶನಿ ವಿಗ್ರಹವನ್ನೇ ಯಾಕೆ ಹೊತ್ತೊಯ್ದ ಎಂಬುದು ನಿಜಕ್ಕೂ ನಿಗೂಢವಾಗಿದೆ. ಈ ಕುರಿತು ಸ್ಥಳೀಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಶನಿ ವಿಗ್ರಹ ಹೊತ್ತೊಯ್ಯುವಾಗ ಪಾದದ ಸ್ವಲ್ಪ ಭಾಗವು ಕಟ್ಟೆ ಭಾಗದಲ್ಲಿಯೇ ಉಳಿದಿದೆ. ಸಂಪೂರ್ಣ ವಿಗ್ರಹ ಕಳವು ಮಾಡಲು ಬಂದು ಮುಕ್ಕಾದ ಶನಿ ವಿಗ್ರಹವನ್ನು ಹೊತ್ತೊಯ್ದಿದ್ದಾನೆ ಎಂಬುದು ಸ್ಪಷ್ಟವಾಗಿದೆ. ಶನಿ ದೇವನ ವಿಗ್ರಹದ ಪಾದದ ಭಾಗ ಕಟ್ಟೆಯಲ್ಲಿಯೇ ಉಳಿದುಕೊಂಡಿದೆ.

ಸಿಸಿಟಿವಿ ಕಂಡಂತೆ.. ಹೇಗಾಯ್ತು ಈ ವಿಗ್ರಹದ ವಿಚಿತ್ರ ಕಳ್ಳತನ? ಮೊನ್ನೆ ಸೋಮವಾರ ರಾತ್ರಿ 10 ಗಂಟೆಗೆ ಆಟೋದಲ್ಲಿ ಓರ್ವ ವ್ಯಕ್ತಿ ಆಗಮನವಾಗುತ್ತದೆ. ಆಟೋದಿಂದ ಇಳಿಯುವ ಮುನ್ನ ಸುತ್ತಮುತ್ತಲೂ ಪರಿಶೀಲನೆ ನಡೆಸುತ್ತಾನೆ. ಮುಂದೆ.. ಅಶ್ವತ್ಥ ಕಟ್ಟೆ ದೇಗುಲದ ಒಳಗಿರುವ ನವಗ್ರಹ ಕಟ್ಟೆಯತ್ತ ಸಾಗುತ್ತಾನೆ. ಅಲ್ಲಿ ಮತ್ತೊಮ್ಮೆ ಸುತ್ತಮುತ್ತ ಒಮ್ಮೆ ಕಣ್ಣಾಡಿಸಿ, ಕಳ್ಳತನಕ್ಕೆ ಇಳಿಯುತ್ತಾನೆ. ನೇರವಾಗಿ ಶನಿ ವಿಗ್ರಹ ಮಾತ್ರ ಕಿತ್ತುಕೊಳ್ಳುತ್ತಾನೆ. ಅಲ್ಲಿಂದ ಶನಿ ವಿಗ್ರಹವನ್ನು ತಂದು ಆಟೋದಲ್ಲಿಟ್ಟುಕೊಂಡು ಮುಂದೆ ಸಾಗುತ್ತಾನೆ ಈ ವಿಚಿತ್ರ ಆಸಾಮಿ!

ಸಿಲಿಕಾನ್ ಸಿಟಿ ಬೆಂಗಳೂರಲ್ಲಿದ್ದಾನೆ ಖತರ್ನಾಕ್​ ಖದೀಮ

Also Read: ಕೊವಿಡ್ ಮಾರ್ಗಸೂಚಿ ಸಡಿಲಗೊಳಿಸುವುದೋ, ಬಿಗಿಯೋ?: ಗೊಂದಲಾಪುರದಲ್ಲಿ ಬೊಮ್ಮಾಯಿ ಸರ್ಕಾರ, ದಾರಿ ಯಾವುದು?

Published On - 10:57 am, Thu, 20 January 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ