AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ

ನಿನ್ನೆ ರಾತ್ರಿ ಕೊರೊನಾದಿಂದ ನಮ್ಮ ಅಪ್ಪ ಅಸುನೀಗಿದ್ದಾರೆ. ಈ ಮಧ್ಯೆ, ಅವರ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಗಿರಿಯಪ್ಪ ಪುತ್ರ ಶಿವಕುಮಾರ್ ಅವರು ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ.

ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಕೊರೊನಾಗೆ ನಿವೃತ್ತ ಕೆಇಬಿ ನೌಕರ ಬಲಿ; 4 ಲಕ್ಷ ಹಣ ಕಟ್ಟಿ ಬಾಡಿ ತೆಗೆದುಕೊಂಡು ಹೋಗಿ ಅಂತಿರೋ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ
ಸಾಧು ಶ್ರೀನಾಥ್​
|

Updated on: Jun 01, 2021 | 10:46 AM

Share

ಬೆಂಗಳೂರು: ಕೊರೊನಾದಿಂದ ಮೃತಪಟ್ಟರೆ ಸಂಬಂಧಿಕರಿಗೆ ಆ ವ್ಯಕ್ತಿಯ ಶವ ನೀಡದೇ ಸತಾಯಿಸುವ ಆಸ್ಪತ್ರೆಗಳ ವಿರುದ್ಧ ರಾಜ್ಯ ಸರ್ಕಾರದ ಕಟ್ಟುನಿಟ್ಟಿನ ಆದೇಶವಿದೆ. ಚಿಕಿತ್ಸೆಯ ಬಾಕಿ ಬಿಲ್‌ ಕಟ್ಟಲು ಒತ್ತಡ ಹೇರಬಾರದು. ಒಂದು ವೇಳೆ ಅಂತಹ ಪ್ರಸಂಗ ನಡೆದರೆ ಲೈಸೆನ್ಸ್ ರದ್ದು ಮಾಡುವುದಾಗಿಯೂ ಸರ್ಕಾರ ಎಚ್ಚರಿಕೆ ನೀಡಿದೆ. ಆದರೆ ರಾಜಧಾನಿಯ ಹೃದಯ ಭಾಗದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯೊಂದು ಸರ್ಕಾರಿ ಆದೇಶಕ್ಕೂ ಡೋಂಟ್‌ಕೇರ್, ಮಾನವೀಯತೆಗೂ ಡೋಂಟ್‌ಕೇರ್ ಅನ್ನುತ್ತಿದೆ.

ಮಾರಕ ಕೊರೊನಾ ಸೋಂಕಿನಿಂದ ನಿವೃತ್ತ ಕೆಇಬಿ ನೌಕರ ಗಿರಿಯಪ್ಪ (67) ಎಂಬುವವರು ಕನಕಪುರ ರಸ್ತೆಯಲ್ಲಿರುವ ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಿನ್ನೆ ರಾತ್ರಿ 7-30 ಕ್ಕೆ ಸಾವಿಗೀಡಾಗಿದ್ದಾರೆ. ಕೆಂಗೇರಿಯ ಬಳಿಯ ನಾಗದೇವನಹಳ್ಳಿ ನಿವಾಸಿ ಗಿರಿಯಪ್ಪ ಕಳೆದ 19 ರಂದು ಶಂಕರ್ ಆಸ್ಪತ್ರೆ ಸೇರಿದ್ದರು. ಒಂದು ತಿಂಗಳಿನಿಂದ ಅವರು ಕೊರೊನಾ ಸೋಂಕಿನಿಂದ ಬಳಲುತ್ತಿದ್ದರು.

ಆದರೆ ಕೊನೆಗೂ ಅವರು ಬದುಕುಳಿಯಲಿಲ್ಲ. ನಿನ್ನೆ ರಾತ್ರಿ ಅಸುನೀಗಿದ್ದಾರೆ. ಈ ಮಧ್ಯೆ, ಗಿರಿಯಪ್ಪ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ ಎಂದು ಗಿರಿಯಪ್ಪ ಪುತ್ರ ಶಿವಕುಮಾರ್ ಅವರು ಶಂಕರ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ವಿರುದ್ಧ ಆರೋಪ ಮಾಡಿದ್ದಾರೆ. ಸರ್ಕಾರದ ಆದೇಶದ ಬಗ್ಗೆ ಆಸ್ಪತ್ರೆಯ ಗಮನ ಸೆಳೆದರೂ ಡೋಂಟ್‌ಕೇರ್ ಅನ್ನುತ್ತಿದ್ದಾರೆ ಎಂದು ಶಿವಕುಮಾರ್ ಚಿಂತಾಕ್ರಾಂತರಾಗಿದ್ದಾರೆ.

shankar super speciality hospital in shankarapuram allegedly demand arrears from covid patient family (1)

ಗಿರಿಯಪ್ಪ ಚಿಕಿತ್ಸೆಗಾಗಿ 4 ಲಕ್ಷದ 80 ಸಾವಿರ ಬಿಲ್ ಪಾವತಿ ಮಾಡಲಾಗಿದೆ. ಇನ್ನೂ 4 ಲಕ್ಷದ 72 ಸಾವಿರ ರೂಪಾಯಿ ಪಾವತಿ ಮಾಡಿದರೆ ಮಾತ್ರವೇ ಶವ ನೀಡುವುದಾಗಿ ಆಸ್ಪತ್ರೆಯವರು ಹೇಳುತ್ತಿದ್ದಾರೆ

(shankar super speciality hospital in shankarapuram allegedly demand arrears from covid patient family)

ಸರ್ಕಾರಿ ಆಸ್ಪತ್ರೆಗಳಲ್ಲಿ ಕೆಟ್ಟಿರುವ ವೆಂಟಿಲೇಟರ್​ ರಿಪೇರಿ ಮಾಡಲಿದೆ ಬಾಷ್ ಕಂಪನಿ

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ
ಅಜ್ಜ-ಅಜ್ಜಿ ಜತೆ ಬೈಕ್​​ನಲ್ಲಿ ಕುಳಿತಿದ್ದ 4 ವರ್ಷದ ಬಾಲಕಿಯ ಅಪಹರಣ